Homeಕರ್ನಾಟಕಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

ಮುಖ್ಯವಾಹಿನಿಗೆ ಬಂದ 6 ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು : ಚಿಕ್ಕಮಗಳೂರಿನಲ್ಲಿ ವಿಚಾರಣೆ

- Advertisement -
- Advertisement -

ಜನವರಿ 8, 2025ರಂದು ಮುಖ್ಯವಾಹಿನಿಗೆ ಬಂದಿರುವ ಆರು ಮಂದಿ ನಕ್ಸಲರನ್ನು ಚಿಕ್ಕಮಗಳೂರು ಪೊಲೀಸರು ಗುರುವಾರ (ಜ.16) ತಮ್ಮ ವಶಕ್ಕೆ ಪಡೆದುಕೊಂಡು, ವಿಚಾರಣೆಗಾಗಿ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದ ಬಳಿಕ ಅವರನ್ನು ಪೊಲೀಸರು ಬೆಂಗಳೂರಿನ ಎನ್‌ಐಎ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ 6 ಮಂದಿಗೂ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.

ಈ ನಡುವೆ ನಕ್ಸಲರನ್ನು ವಿಚಾರಣೆಗೆ ಒಳಪಡಿಸಲು ತಮ್ಮ ವಶಕ್ಕೆ ನೀಡುವಂತೆ ಚಿಕ್ಕಮಗಳೂರು ಪೊಲೀಸರು ಎನ್‌ಐಎ ನ್ಯಾಯಾಲಯವನ್ನು ಕೋರಿದ್ದರು. ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರು ಮಂದಿಯನ್ನು 6 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ಗುರುವಾರ ರಾತ್ರಿಯೇ ಆರು ಮಂದಿಯನ್ನು ಪೊಲೀಸರು ಚಿಕ್ಕಮಗಳೂರಿಗೆ ಕರೆದೊಯ್ದಿದ್ದಾರೆ. ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಮತ್ತು ಇನ್‌ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಮುಖ್ಯವಾಹಿನಿಗೆ ಬಂದಿರುವ ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ. ವಸಂತ (ತಮಿಳುನಾಡು) ಮತ್ತು ಟಿ.ಎನ್‌ ಜಿಷಾ (ಕೇರಳ) ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಲತಾ ಮುಂಡಗಾರು ವಿರುದ್ದ ಕರ್ನಾಟಕದಲ್ಲಿ 65 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 43 ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿವೆ. ವನಜಾಕ್ಷಿ ವಿರುದ್ದ ಒಟ್ಟು 25 ಪ್ರಕರಣಗಳಿದ್ದು, ಈ ಪೈಕಿ 19 ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ. ಸುಂದರಿ ವಿರುದ್ದ 23 ಪ್ರಕರಣಗಳಿದ್ದು, 3 ಚಿಕ್ಕಮಗಳೂರಿನಲ್ಲಿದೆ. ಮಾರೆಪ್ಪ ಅರೋಪಿ ವಿರುದ್ದ ರಾಜ್ಯದಲ್ಲಿ 13 ಪ್ರಕರಣಗಳಿವೆ. ಈ ಪೈಕಿ ಚಿಕ್ಕಮಗಳೂರಿನಲ್ಲಿ 3 ದಾಖಲಾಗಿವೆ. ಕೇರಳದ ಜಿಷಾ ಮತ್ತು ತಮಿಳುನಾಡಿನ ವಸಂತ ವಿರುದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿವೆ. ನಕ್ಸಲರ ವಿರುದ್ದ ಬಹುತೇಕ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಮತ್ತು ಶೃಂಗೇರಿ ಠಾಣೆಗಳಲ್ಲಿ ದಾಖಲಾಗಿವೆ.

‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...