Homeಕರ್ನಾಟಕಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯೊಬ್ಬರ ಸಂಬಂಧಿಕರಿಗೆ ಸಾತ್ವಾನ ಹೇಳಲು ಶಾಸಕರು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಡಾನೆಗಳ ಉಪಟಳದ ಬಗ್ಗೆ ಪದೇ ಪದೇ ದೂರು ನೀಡಿದರೂ ಸಮಸ್ಯೆ ಪರಿಹಾರವಾಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜನರು ಶಾಸಕರನ್ನು ಅಟ್ಟಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆ ಐಸಿಯುವಿನಲ್ಲಿ ಅಡ್ಡಾಡಿದ ದನ! – ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಘಾತಕಾರಿ ಘಟನೆ

ಗ್ರಾಮಸ್ಥರು ಶಾಸಕರನ್ನು ಅಟ್ಟಾಡಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕಳ್ಳ ಕಳ್ಳ ಎಂದು ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಮತ್ತೊಂದು ವಿಡಿಯೊದಲ್ಲಿ ಬಟ್ಟೆ ಹರಿದ ಸ್ಥಿತಿಯಲ್ಲಿ ಶಾಸಕರು ಕಾಣಿಸಿಕೊಂಡಿದ್ದಾರೆ.

ತನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆರೋಪಿದ್ದಾರೆ. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

ಹುಲ್ಲು ಕೊಯ್ಯುಲು ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಘಟನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಶೋಭಾ (45) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಥ ಶಾಸಕರುಗಳಿಗೆ ಗ್ರಾಮಸ್ಥರು ಒಳ್ಳೆ ಕೆಲಸ ಮಾಡಿದ್ದಾರೆ ಅಷ್ಟು ಮಾತ್ರ ಅಲ್ಲ ಅವರನ್ನು ಮುಂದಿನ ಚುನಾವಣೆಯಲ್ಲಿ ಬಾರದಾಗಿ ನೋಡಬೇಕು ವೋಟ್ ಕೇಳಿಕೆ ಬಂದರೆ ಇದೇ ರೀತಿ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...