Homeಕರ್ನಾಟಕಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯೊಬ್ಬರ ಸಂಬಂಧಿಕರಿಗೆ ಸಾತ್ವಾನ ಹೇಳಲು ಶಾಸಕರು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಡಾನೆಗಳ ಉಪಟಳದ ಬಗ್ಗೆ ಪದೇ ಪದೇ ದೂರು ನೀಡಿದರೂ ಸಮಸ್ಯೆ ಪರಿಹಾರವಾಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜನರು ಶಾಸಕರನ್ನು ಅಟ್ಟಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆ ಐಸಿಯುವಿನಲ್ಲಿ ಅಡ್ಡಾಡಿದ ದನ! – ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಘಾತಕಾರಿ ಘಟನೆ

ಗ್ರಾಮಸ್ಥರು ಶಾಸಕರನ್ನು ಅಟ್ಟಾಡಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕಳ್ಳ ಕಳ್ಳ ಎಂದು ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಮತ್ತೊಂದು ವಿಡಿಯೊದಲ್ಲಿ ಬಟ್ಟೆ ಹರಿದ ಸ್ಥಿತಿಯಲ್ಲಿ ಶಾಸಕರು ಕಾಣಿಸಿಕೊಂಡಿದ್ದಾರೆ.

ತನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆರೋಪಿದ್ದಾರೆ. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

ಹುಲ್ಲು ಕೊಯ್ಯುಲು ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಘಟನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಶೋಭಾ (45) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಥ ಶಾಸಕರುಗಳಿಗೆ ಗ್ರಾಮಸ್ಥರು ಒಳ್ಳೆ ಕೆಲಸ ಮಾಡಿದ್ದಾರೆ ಅಷ್ಟು ಮಾತ್ರ ಅಲ್ಲ ಅವರನ್ನು ಮುಂದಿನ ಚುನಾವಣೆಯಲ್ಲಿ ಬಾರದಾಗಿ ನೋಡಬೇಕು ವೋಟ್ ಕೇಳಿಕೆ ಬಂದರೆ ಇದೇ ರೀತಿ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...