Homeಕರ್ನಾಟಕಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯೊಬ್ಬರ ಸಂಬಂಧಿಕರಿಗೆ ಸಾತ್ವಾನ ಹೇಳಲು ಶಾಸಕರು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಡಾನೆಗಳ ಉಪಟಳದ ಬಗ್ಗೆ ಪದೇ ಪದೇ ದೂರು ನೀಡಿದರೂ ಸಮಸ್ಯೆ ಪರಿಹಾರವಾಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜನರು ಶಾಸಕರನ್ನು ಅಟ್ಟಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆ ಐಸಿಯುವಿನಲ್ಲಿ ಅಡ್ಡಾಡಿದ ದನ! – ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಘಾತಕಾರಿ ಘಟನೆ

ಗ್ರಾಮಸ್ಥರು ಶಾಸಕರನ್ನು ಅಟ್ಟಾಡಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕಳ್ಳ ಕಳ್ಳ ಎಂದು ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಮತ್ತೊಂದು ವಿಡಿಯೊದಲ್ಲಿ ಬಟ್ಟೆ ಹರಿದ ಸ್ಥಿತಿಯಲ್ಲಿ ಶಾಸಕರು ಕಾಣಿಸಿಕೊಂಡಿದ್ದಾರೆ.

ತನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆರೋಪಿದ್ದಾರೆ. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

ಹುಲ್ಲು ಕೊಯ್ಯುಲು ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಘಟನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಶೋಭಾ (45) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಥ ಶಾಸಕರುಗಳಿಗೆ ಗ್ರಾಮಸ್ಥರು ಒಳ್ಳೆ ಕೆಲಸ ಮಾಡಿದ್ದಾರೆ ಅಷ್ಟು ಮಾತ್ರ ಅಲ್ಲ ಅವರನ್ನು ಮುಂದಿನ ಚುನಾವಣೆಯಲ್ಲಿ ಬಾರದಾಗಿ ನೋಡಬೇಕು ವೋಟ್ ಕೇಳಿಕೆ ಬಂದರೆ ಇದೇ ರೀತಿ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...