Homeಕರ್ನಾಟಕಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯೊಬ್ಬರ ಸಂಬಂಧಿಕರಿಗೆ ಸಾತ್ವಾನ ಹೇಳಲು ಶಾಸಕರು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಡಾನೆಗಳ ಉಪಟಳದ ಬಗ್ಗೆ ಪದೇ ಪದೇ ದೂರು ನೀಡಿದರೂ ಸಮಸ್ಯೆ ಪರಿಹಾರವಾಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜನರು ಶಾಸಕರನ್ನು ಅಟ್ಟಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆ ಐಸಿಯುವಿನಲ್ಲಿ ಅಡ್ಡಾಡಿದ ದನ! – ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಘಾತಕಾರಿ ಘಟನೆ

ಗ್ರಾಮಸ್ಥರು ಶಾಸಕರನ್ನು ಅಟ್ಟಾಡಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕಳ್ಳ ಕಳ್ಳ ಎಂದು ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಮತ್ತೊಂದು ವಿಡಿಯೊದಲ್ಲಿ ಬಟ್ಟೆ ಹರಿದ ಸ್ಥಿತಿಯಲ್ಲಿ ಶಾಸಕರು ಕಾಣಿಸಿಕೊಂಡಿದ್ದಾರೆ.

ತನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆರೋಪಿದ್ದಾರೆ. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

ಹುಲ್ಲು ಕೊಯ್ಯುಲು ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಘಟನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಶೋಭಾ (45) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಥ ಶಾಸಕರುಗಳಿಗೆ ಗ್ರಾಮಸ್ಥರು ಒಳ್ಳೆ ಕೆಲಸ ಮಾಡಿದ್ದಾರೆ ಅಷ್ಟು ಮಾತ್ರ ಅಲ್ಲ ಅವರನ್ನು ಮುಂದಿನ ಚುನಾವಣೆಯಲ್ಲಿ ಬಾರದಾಗಿ ನೋಡಬೇಕು ವೋಟ್ ಕೇಳಿಕೆ ಬಂದರೆ ಇದೇ ರೀತಿ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...