Homeಕರ್ನಾಟಕಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

ಚಿಕ್ಕಮಗಳೂರು: ‘ಕಳ್ಳ’ ಎಂದು ಕರೆದು ಬಿಜೆಪಿ ಶಾಸಕರನ್ನು ಅಟ್ಟಾಡಿಸಿದ ಗ್ರಾಮಸ್ಥರು!

- Advertisement -
- Advertisement -

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರನ್ನು ಜಿಲ್ಲೆಯ ಕುದೂರಿನ ಗ್ರಾಮಸ್ಥರು ‘ಕಳ್ಳ ಕಳ್ಳ’ ಎಂದು ಕರೆದು ಅಟ್ಟಾಡಿಸಿದ ಘಟನೆ ನಡೆದಿದೆ. ಇದರ ನಂತರ ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿರುವ ಶಾಸಕ, ಗ್ರಾಮಸ್ಥರು ತನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯೊಬ್ಬರ ಸಂಬಂಧಿಕರಿಗೆ ಸಾತ್ವಾನ ಹೇಳಲು ಶಾಸಕರು ಹೋಗಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾಡಾನೆಗಳ ಉಪಟಳದ ಬಗ್ಗೆ ಪದೇ ಪದೇ ದೂರು ನೀಡಿದರೂ ಸಮಸ್ಯೆ ಪರಿಹಾರವಾಗದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಜನರು ಶಾಸಕರನ್ನು ಅಟ್ಟಾಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಇಟ್ಟು, ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ವೇಳೆ ಮೃತದೇಹ ನೋಡಲು ಶಾಸಕ ಕುಮಾರಸ್ವಾಮಿ ಕೂಡಾ ಬಂದಿದ್ದು, ಗ್ರಾಮಸ್ಥರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆ ಐಸಿಯುವಿನಲ್ಲಿ ಅಡ್ಡಾಡಿದ ದನ! – ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲಿ ಅಘಾತಕಾರಿ ಘಟನೆ

ಗ್ರಾಮಸ್ಥರು ಶಾಸಕರನ್ನು ಅಟ್ಟಾಡಿಸುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಕಳ್ಳ ಕಳ್ಳ ಎಂದು ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ಇದರ ನಂತರ ಮತ್ತೊಂದು ವಿಡಿಯೊದಲ್ಲಿ ಬಟ್ಟೆ ಹರಿದ ಸ್ಥಿತಿಯಲ್ಲಿ ಶಾಸಕರು ಕಾಣಿಸಿಕೊಂಡಿದ್ದಾರೆ.

ತನ್ನ ಮೇಲೆ ಸಂಚು ಮಾಡಿ ಹಲ್ಲೆ ಮಾಡಿದ್ದು, ಇದರಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಶಾಸಕ ಎಂ.ಪಿ ಕುಮಾರಸ್ವಾಮಿ ಆರೋಪಿದ್ದಾರೆ. “ನಾನು ಅಲ್ಲೆ ಇರ್ತಿದ್ದೆ ಪೊಲೀಸರು ಮಿಸ್ ಗೈಡ್ ಮಾಡಿ ಹೊರಗೆ ಕಳುಹಿಸಿದ್ದಾರೆ. ಸಾರ್ವಜನಿಕರ ಸೇವೆ ಮಾಡಲು ಇರುವವರು ಎಲ್ಲ ತಾಗ್ಯಕ್ಕೂ ರೆಡಿ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಉದ್ರಿಕ್ತ ಜನರು ಅವರನ್ನು ಅಟ್ಟಾಡಿಸಿಕೊಂಡು ಬರುವಾಗ ಪೊಲೀಸರು ಅವರನ್ನು ರಕ್ಷಿಸಿ ಕಾರಿಗೆ ಕೂರಿಸುವುದು ಕೂಡಾ ವಿಡಿಯೊದಲ್ಲಿ ದಾಖಲಾಗಿದೆ. ಈ ವೇಳೆ ಅವರ ಬಟ್ಟೆ ಹರಿದಿರಲಿಲ್ಲ. ಮತ್ತೊಂದು ವಿಡಿಯೊದಲ್ಲಿ ಅವರು ಬಟ್ಟೆ ಹರಿದಿರುವ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಜನರು ಸಂಶಯ ವ್ಯಕ್ತಪಡಿಸಿದ್ದು, ಘಟನೆಯ ನಂತರ ತಾನಾಗಿಯೆ ಬಟ್ಟೆ ಹರಿದು ವಿಡಿಯೊ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

ಹುಲ್ಲು ಕೊಯ್ಯುಲು ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಘಟನೆ ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರಿನಲ್ಲಿ ನಡೆದಿದ್ದು, ಮೃತ ಮಹಿಳೆಯನ್ನು ಶೋಭಾ (45) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಥ ಶಾಸಕರುಗಳಿಗೆ ಗ್ರಾಮಸ್ಥರು ಒಳ್ಳೆ ಕೆಲಸ ಮಾಡಿದ್ದಾರೆ ಅಷ್ಟು ಮಾತ್ರ ಅಲ್ಲ ಅವರನ್ನು ಮುಂದಿನ ಚುನಾವಣೆಯಲ್ಲಿ ಬಾರದಾಗಿ ನೋಡಬೇಕು ವೋಟ್ ಕೇಳಿಕೆ ಬಂದರೆ ಇದೇ ರೀತಿ ಮಾಡಬೇಕು

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...