Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...