Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...