Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...