Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...