Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...