Homeಕರ್ನಾಟಕಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’...

ಚಿಕ್ಕೋಡಿ: ಸೆಟಗೊಂಡಿವೆ ಬಿಜೆಪಿಯ “ಕತ್ತಿ’ಗಳು : ಮತ್ತೆ ಡಿಲ್ಲಿಗೆ ಹಾರಲಿದೆ ಕಾಂಗ್ರೆಸ್ ‘ಕುದುರೆ’…

- Advertisement -
- Advertisement -

| ಮಹಾಲಿಂಗಪ್ಪ ಆಲಬಾಳ |
ಬೆಳಗಾವಿಯ ‘ಸಿಂಡಿಕೇಟ್’ ರಾಜಕಾರಣದ ಭಾಗವಾಗಿರುವ ಚಿಕ್ಕೋಡಿ ಈ ಸಲ ಮತ್ತೆ ಕಾಂಗ್ರೆಸ್ ಪಾಲಾಗುವ ಎಲ್ಲ ಲಕ್ಷಣಗಳು ಎದ್ದು ಹೊಡೆಯುತ್ತಿವೆ. ಏಕೆಂದರೆ ಇಲ್ಲಿ ಬಿಜೆಪಿ ಎತ್ತಿ ಹಿಡಿಯಬೇಕಿದ್ದ ಎರಡೂ ‘ಕತ್ತಿ’ಗಳು ಮಲಗಿದಂತೆ ನಾಟಕ ಆಡುತ್ತಿವೆ. ಹೋರಿಯಂತಿರುವ ಕಾಂಗ್ರೆಸ್‍ನ ‘ಕುದುರೆ’ಗೆ ಇದು ಅನಾಯಾಸವಾಗಿ ಇನ್ನೊಂದು ಗೆಲುವನ್ನು ತಂದು ಕೊಡಲಿದೆ. 2014ರಲ್ಲಿ ‘’ಕತ್ತಿ’ಗಳು ಆ್ಯಕ್ಟೀವ್ ಆಗಿದ್ದಾಗಲೇ ಈ ‘ಕುದುರೆ’ 3 ಸಾವಿರ ಲೀಡ್‍ನಲ್ಲಿ ಗೆದ್ದಿತ್ತು!

ಬೆಳಗಾವಿಯ ಎರಡೂ ಕ್ಷೇತ್ರಗಳಲ್ಲಿ ಮೂರು ‘ಸಿಂಡಿಕೇಟ್’ಗಳದ್ದೇ ಕಾರುಬಾರು. ಜಾರಕಿಹೊಳಿ, ಕತ್ತಿ, ಕೋರೆ ಕುಟುಂಬಗಳು ಇಲ್ಲಿಯ ರಾಜಕಾರಣವನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಪ್ರಜಾಪ್ರಭುತ್ವವನ್ನೇ ಅಣಕ ಮಾಡಿ ದಶಕಗಳೇ ಸವೆದವು. ಇದರಡಿ, ಹುಕ್ಕೇರಿ ಕುಟುಂಬವೂ ಈಗ ತನ್ನದೊಂದು ‘ಸಾಮ್ರಾಜ್ಯ’ ವಿಸ್ತರಿಸುತ್ತಿದೆ!

ಪ್ರಕಾಶ್ ಹುಕ್ಕೇರಿ

ವರ್ತಮಾನದ ಚುನಾವಣಾ ರಾಜಕೀಯಕ್ಕೆ ಬರುವುದಾದರೆ, ಇಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಮತ್ತೆ ತುರುಸಿನಲ್ಲಿ ಇದ್ದಾರೆ. ಕಳೆದ ಸಲ ಕೇವಲ 3 ಸಾವಿರ ಚಿಲ್ಲರೆ ಮತಗಳಿಂದ ಸೋತ ರಮೇಶ ಕತ್ತಿಗೆ ಬಿಜೆಪಿ ಟಿಕೆಟ್ ಕೊಡದೇ ಇರುವುದೇ ಕಾಂಗ್ರೆಸ್‍ಗೆ ಲಾಭವಾಗಲಿದೆಯೇನೋ? ಆಗಾಗ ‘ಪ್ರತ್ಯೇಕ ಉತ್ತರ ಕರ್ನಾಟಕ’ ಎಂದೆಲ್ಲ ಅಸಂಬದ್ಧವಾಗಿ ಮಾತಾಡುವ ಬಿಜೆಪಿ ಶಾಸಕ ಉಮೇಶ ಕತ್ತಿಯ ಸಹೋದರ ರಮೇಶ ಕತ್ತಿಗೆ ಟಿಕೆಟ್ ಕೊಡದೇ ಇರುವುದು ಲೋಕಲ್ ಬಿಜೆಪಿ ಪಾಳಯಕ್ಕೆ ತಲೆ ಕೆಡಿಸಿದೆ. ಇಲ್ಲಿವರೆಗೂ ಕತ್ತಿ ಸಹೋದರರು ಬಿಜೆಪಿ ಪ್ರಚಾರಕ್ಕೆ ಬರದೇ ಸೆಟಗೊಂಡಿದ್ದಾರೆ.

ಅಣ್ಣಾ ಸಾಹೇಬ್ ಜೊಲ್ಲೆ

ಇಲ್ಲೀಗ ಹಾಲಿ ಸಂಸದ ಪ್ರಕಾಶ ಹುಕ್ಕೇರಿ ಎಂಬ ‘ಮೀಸೆ ಮಾವ’ನ ಎದುರು ಬಿಜೆಪಿ ಅಣ್ಣಾಸಾಬ್ ಜೊಲ್ಲೆ ಎಂಬ ಉದ್ಯಮಿಯನ್ನು ಕಣಕ್ಕಿಳಿಸಿದೆ. ಈತ ನಿಪ್ಪಾಣಿಯ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯ ಪತಿ. ಮೊದಲ ಸಲ ಶಾಸಕಿಯಾಗಿರುವ ಶಶಿಕಲಾ ‘ಕತ್ತಿ’ಗಳಿಗೇ ಇರಿಯುವಂತೆ ಗಂಡನಿಗೆ ಟಿಕೆಟ್ ತಂದಿದ್ದಾರೆ!

ಈಗ ಅಖಾಡಕ್ಕೆ ಬರೋಣ. ಬಿಜೆಪಿಯ ಅಪ್ಪಾಸಾಹೇಬ ಜೊಲ್ಲೆ ಉದ್ಯಮಿ. ಹಲವಾರು ಶೈಕ್ಷಣಿಕ ಸಂಸ್ಥೆ ನಡೆಸುತ್ತಾರೆ. ಹಲವು ಕೋ-ಆಪರೇಟಿವ್ ಸಂಸ್ಥೆಗಳೂ ಇವೆ. ಇದು ಅವರ ಮೊದಲ ರಾಜಕೀಯ ಫೈಟ್ ಆಗಿರುವುದರಿಂದ, ಅವರ ಪತ್ನಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮೇಲೆಯೇ ಎಲ್ಲ ಭಾರ ಬಿದ್ದಿದೆ ಎನ್ನುವುದಕ್ಕಿಂತ ಅವರು ತಾವಾಗೇ ಭಾರ ಹೊತ್ತುಕೊಂಡು ಗಂಡನಿಗೆ ಟಿಕೆಟ್ ತಂದಿದ್ದಾರೆ. ಈ ಕಾರಣಕ್ಕೇ ಕತ್ತಿ ಸಹೋದರರು ಮುನಿಸಿಕೊಂಡಿದ್ದರಿಂದ ಶಶಿಕಲಾ ಮತ್ತು ಬಿಜೆಪಿಯ ಡಬ್ಬದ ಮೇಲೆ ಲೋಡು ಬಿದ್ದಿದೆ. ಆ ಲೋಡನ್ನು ಹೊತ್ತುಕೊಂಡು ತೆವಳುತ್ತ ಪ್ರಚಾರ ಮಾಡುತ್ತಿದೆ ಬಿಜೆಪಿ.

ಉಮೇಶ್ ಕತ್ತಿ

ಕಾಂಗ್ರೆಸ್ ಮತ್ತು ಬಿಜೆಪಿಯ ಇಬ್ದರೂ ಕ್ಯಾಂಡಿಡೇಟ್‍ಗಳು ಪಂಚಮಸಾಲಿ ಲಿಂಗಾಯಿತರೇ ಆಗಿರುವುದರಿಂದ, ಇತರ ಸಮುದಾಯಗಳ ಮತಗಳು ಇಲ್ಲಿ ನಿರ್ಣಾಯಕ. ಇಲ್ಲಿರುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ನಾಲ್ಕು ಸ್ಥಾನ ಹೊಂದಿವೆ. ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಹೋದರನಿಗೆ ಟಿಕೆಟ್ ಸಿಗಲಿಲ್ಲ ಎಂದು ಸೆಟಗೊಂಡಿದ್ದಾರೆ. ಇದೇ ಲೋಕಸಭೆ ವ್ಯಾಪ್ತಿಗೆ ಬರುವ ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಫುಲ್ ಇನ್‍ವಾಲ್ವ್ ಆಗಿದ್ದಾರೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಗೆಲುವು ತರುವ ಜವಾಬ್ದಾರಿಯನ್ನು ಅವರೀಗ ಹೊತ್ತುಕೊಂಡಿದ್ದಾರೆ.

ಸತೀಶ್ ಜಾರಕಿಹೊಳಿ

ಕೃಷ್ಣೆಯ ತಟದಲ್ಲಿ ಹುಲುಸಾಗಿ ಕಬ್ಬು ಬೆಳೆದೂ ನ್ಯಾಯಯುತ ಬೆಲೆಯಿಲ್ಲದೇ ಸಂಕಷ್ಟದಲ್ಲಿರುವ ರೈತರ ಕುರಿತಾಗಲಿ, ಕಬ್ಬಿನ ಗದ್ದೆ, ಸಕ್ಕರೆ ಕಾರ್ಖಾನೆಗಳಲ್ಲಿ ದುಡಿಯುವ ಶ್ರಮಿಕರ ಬಗ್ಗೆಯಾಗಲೀ ಇಲ್ಲಿ ಚರ್ಚೆಯೇ ಇಲ್ಲದಿರುವ ಅಸಹ್ಯ ‘ಡೆಮಾಕ್ರಸಿ’ಯನ್ನು ನಾವು ನೋಡಬೇಕಾಗಿದೆ.
ಈಗಿರುವ ಸಂಸದ ಪ್ರಕಾಶ ಹುಕ್ಕೇರಿ ತಮ್ಮ ಮಗ ಸದಲಗಾ ಶಾಸಕ ಗಣೇಶ ಹುಕ್ಕೇರಿಯ ಒಳಿತನ್ನಷ್ಟೇ ಬಯಸುವವರು. ಉಮೇಶ ಕತ್ತಿಗೆ ಸಹೋದರ ರಮೇಶನ ಬಗ್ಗೆ ಅಷ್ಟೇ ಕಾಳಜಿ. ನಿಪ್ಪಾಣಿ ಶಾಸಕಿ ಶಶಿಕಲಾ ಜೊಳ್ಳೆಗೆ ಗಂಡನ ಗೆಲುವಿನದ್ದೇ ಚಿಂತೆ!

ಇಂತಹ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣದಲ್ಲಿ ಕಾಂಗ್ರೆಸ್ಸಿನ ಪ್ರಕಾಶ ಹುಕ್ಕೇರಿ ಎಂಬ ಸ್ವಾರ್ಥಿ ‘ಕುದುರೆ’ ಮತ್ತೆ ಡಿಲ್ಲಿಗೆ ಹಾರಲಿದೆ. ಬಿಜೆಪಿಯ ಜೋಡು ‘ಕತ್ತಿ’ಗಳಿಗೂ ಇದೇ ಬೇಕಾಗಿದೆಯೇನೋ? ಸದ್ಯಕ್ಕೆ ‘ಕುದುರೆ’ ಗೆಲ್ಲುವುದೇ ಇದ್ದುದರಲ್ಲಿ ಲೇಸು ಎಂಬ ಪರಿಸ್ಥಿತಿಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...