Homeಕರ್ನಾಟಕಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆಯು ಚಿಕ್ಕಮಗಳೂರಿನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಯುವತಿ ಮತ್ತು ಮುಸ್ಲಿಂ ಯುವಕನ ನಡುವೆ ದಲಿತ ಸಂಘಟನೆಗಳ ಬೆಂಬಲದೊಂದಿಗೆ ಶುಕ್ರವಾರ ವಿವಾಹ ನಡೆದಿದೆ. ಎರಡು ದಿನಗಳ ಹಿಂದೆ ಸಬ್‌‌-ರಿಜಿಸ್ಟ್ರಾರ್‌ ಕಚೇರಿಗೆ ಬಂದಿದ್ದ ಜೋಡಿಯನ್ನು ಬಜರಂಗದಳದ ದುಷ್ಕರ್ಮಿಗಳು ಬಲವಂತವಾಗಿ ತಡೆದು ಅವರ ಮದುವೆಯನ್ನು ನಿಲ್ಲಿಸಿದ್ದರು.

ಚಿಕ್ಕಮಗಳೂರು ತಾಲೂಕಿನ ಲಕ್ಷ್ಮೀಪುರಂ ನಿವಾಸಿಗಳಾದ ಎಸ್‌ಸಿ ಸಮುದಾಯದ ಚೈತ್ರ ಮತ್ತು ಮುಸ್ಲಿಂ ಸಮುದಾಯದ ಜಾಫರ್‌ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ಅವರು ಚಿಕ್ಕಮಗಳೂರಿನ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಮದುವೆಯಾಗಲು ನಿರ್ಧರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರದಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಚೈತ್ರ ಮತ್ತು ಜಾಫರ್‌ ಭೇಟಿ ನೀಡಿದಾಗ ಬಜರಂದಳದ ನಾಲ್ವರು ದುಷ್ಕರ್ಮಿಗಳು ಮಧ್ಯಪ್ರವೇಶಿಸಿ, ‘ಲವ್‌ ಜಿಹಾದ್‌’ ನಡೆಯುತ್ತಿದೆ ಎಂದು ಆರೋಪಿಸಿ ಮದುವೆಯನ್ನು ತಡೆದಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ತಮಗೆ ತೊಂದರೆ ನೀಡಿದ್ದ ಬಜರಂದಳದ ನಾಲ್ವರು ದುಷ್ಕರ್ಮಿಗಳ ವಿರುದ್ಧ ಜಾಫರ್‌ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ದುಷ್ಕರ್ಮಿಗಳನ್ನು ಶ್ಯಾಮ್, ಪಾರ್ಥಿಭನ್, ಗುರು ಮತ್ತು ಪ್ರಸಾದ್ ಗೌಡ ಎಂಬ ಗುರುತಿಸಲಾಗಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದ್ದು, ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರದಂದು ದಲಿತ ಸಂಘಟನೆಗಳ ನೇತೃತ್ವದಲ್ಲಿ ಅವರಿಬ್ಬರ ಮದುವೆ ನಡೆದಿದೆ. ಮದುವೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಚೈತ್ರ, “ನಾನು ಸ್ವಂತ ಇಚ್ಛೆಯ ಮೇರೆಗೆ ಮುಸ್ಲಿಂ ಸಮುದಾಯದ ಜಾಫರ್ ಅವರನ್ನು ವಿವಾಹವಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದಿದ್ದೇನೆ. ನಮ್ಮನ್ನು ತಡೆಯಲು ಅವರು ಯಾರು? ಇದು ನಾವಿಬ್ಬರೂ ಪರಸ್ಪರ ತೆಗೆದುಕೊಂಡ ನಿರ್ಧಾರವಾಗಿತ್ತು” ಎಂದು ಹೇಳಿದ್ದಾರೆ. ಬಜರಂದಳ ದುಷ್ಕರ್ಮಿಗಳು ಜೋಡಿಗೆ ಕೊಲೆ ಬೆದರಿಕೆ ಕೂಡಾ ಹಾಕಿದ್ದು, ಅವರಿಂದ ತಮಗಿಬ್ಬರಿಗೆ ರಕ್ಷಣೆ ಬೇಕು ಎಂದು ಹೇಳಿದ್ದಾರೆ.

‘‘ಮೂರು ವರ್ಷಗಳಿಂದ ನಾವು ಪ್ರೀತಿಸುತ್ತಿದ್ದೇವೆ. ಬುಧವಾರದಂದು ಮದುವೆಯ ನೋಂದಣಿಗೆ ಸಹಿ ಹಾಕುವ ಮುನ್ನವೇ ಗುಂಪೊಂದು ಬಂದು ನಮ್ಮನ್ನು ತಡೆದರು. ತಡೆಯಲು ಅವರು ಯಾರು? ಇದು ನಮ್ಮಿಬ್ಬರ ಪರಸ್ಪರ ನಿರ್ಧಾರವಾಗಿತ್ತು. ಅವರು ನಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಚೈತ್ರಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

“ಅವರು ನನ್ನನ್ನು ನಿಂದಿಸಿದ್ದು, ‘ನಿನಗೆ ಮದುವೆಯಾಗಲು ಹಿಂದೂ ಹುಡುಗಿ ಬೇಕೇ? ನಿನಗೆ ಎಸ್ಸಿ ಹುಡುಗಿ ಬೇಕೇ?’ ಎಂದು ಹೇಳಿ ನನ್ನ ಪತಿ ಜಾಫರ್‌ಗೆ ಥಳಿಸಿದ್ದಾರೆ. ನಮಗೆ ಬಜರಂಗದಳದಿಂದ ರಕ್ಷಣೆ ಬೇಕು” ಎಂದು ಯುವತಿ ಹೇಳಿದ್ದಾರೆ.

ಮದುವೆಗೆ ನನ್ನ ಅಭ್ಯಂತರವಿಲ್ಲ ಎಂದು ಚೈತ್ರಾ ಅವರ ತಾಯಿ ಶೋಭಾ ಹೇಳಿದ್ದಾರೆ. “ನನ್ನ ಮಗಳಿಗೆ ಅಭ್ಯಂತರವಿಲ್ಲದಿದ್ದರೆ ನನಗೂ ಅಭ್ಯಂತರವಿಲ್ಲ. ಇಬ್ಬರೂ ಸುರಕ್ಷಿತವಾಗಿ ಮರಳಬೇಕು” ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಉಮಾ ಪ್ರಶಾಂತ್, ಯುವಕ-ಯುವತಿ ವಯಸ್ಕರಾಗಿದ್ದು, ಇದು ಅನೈತಿಕ ಪೊಲೀಸ್‌ಗಿರಿಯ ಘಟನೆ ಎಂದು ಹೇಳಿದ್ದಾರೆ. ಜಾಫರ್ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

“ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ನಾಲ್ಕು ಜನರು ಮದುವೆ ನೋಂದಣಿ ಮಾಡದಂತೆ ತಡೆದು, ಅಲ್ಲಿಂದ ಅವರಿಬ್ಬರನ್ನೂ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದರು. ಹುಡುಗಿಯನ್ನು ಅಲ್ಲಿಯೇ ಇರುವಂತೆ ಹೇಳಿ, ನಾಲ್ವರು ಜಾಫರ್‌ ಅವರನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಕರೆದೊಯ್ದರು” ಎಂದು ಪ್ರಶಾಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...