Homeಕರ್ನಾಟಕಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆಯು ಚಿಕ್ಕಮಗಳೂರಿನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಯುವತಿ ಮತ್ತು ಮುಸ್ಲಿಂ ಯುವಕನ ನಡುವೆ ದಲಿತ ಸಂಘಟನೆಗಳ ಬೆಂಬಲದೊಂದಿಗೆ ಶುಕ್ರವಾರ ವಿವಾಹ ನಡೆದಿದೆ. ಎರಡು ದಿನಗಳ ಹಿಂದೆ ಸಬ್‌‌-ರಿಜಿಸ್ಟ್ರಾರ್‌ ಕಚೇರಿಗೆ ಬಂದಿದ್ದ ಜೋಡಿಯನ್ನು ಬಜರಂಗದಳದ ದುಷ್ಕರ್ಮಿಗಳು ಬಲವಂತವಾಗಿ ತಡೆದು ಅವರ ಮದುವೆಯನ್ನು ನಿಲ್ಲಿಸಿದ್ದರು.

ಚಿಕ್ಕಮಗಳೂರು ತಾಲೂಕಿನ ಲಕ್ಷ್ಮೀಪುರಂ ನಿವಾಸಿಗಳಾದ ಎಸ್‌ಸಿ ಸಮುದಾಯದ ಚೈತ್ರ ಮತ್ತು ಮುಸ್ಲಿಂ ಸಮುದಾಯದ ಜಾಫರ್‌ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ಅವರು ಚಿಕ್ಕಮಗಳೂರಿನ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಮದುವೆಯಾಗಲು ನಿರ್ಧರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರದಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಚೈತ್ರ ಮತ್ತು ಜಾಫರ್‌ ಭೇಟಿ ನೀಡಿದಾಗ ಬಜರಂದಳದ ನಾಲ್ವರು ದುಷ್ಕರ್ಮಿಗಳು ಮಧ್ಯಪ್ರವೇಶಿಸಿ, ‘ಲವ್‌ ಜಿಹಾದ್‌’ ನಡೆಯುತ್ತಿದೆ ಎಂದು ಆರೋಪಿಸಿ ಮದುವೆಯನ್ನು ತಡೆದಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ತಮಗೆ ತೊಂದರೆ ನೀಡಿದ್ದ ಬಜರಂದಳದ ನಾಲ್ವರು ದುಷ್ಕರ್ಮಿಗಳ ವಿರುದ್ಧ ಜಾಫರ್‌ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ದುಷ್ಕರ್ಮಿಗಳನ್ನು ಶ್ಯಾಮ್, ಪಾರ್ಥಿಭನ್, ಗುರು ಮತ್ತು ಪ್ರಸಾದ್ ಗೌಡ ಎಂಬ ಗುರುತಿಸಲಾಗಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದ್ದು, ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರದಂದು ದಲಿತ ಸಂಘಟನೆಗಳ ನೇತೃತ್ವದಲ್ಲಿ ಅವರಿಬ್ಬರ ಮದುವೆ ನಡೆದಿದೆ. ಮದುವೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಚೈತ್ರ, “ನಾನು ಸ್ವಂತ ಇಚ್ಛೆಯ ಮೇರೆಗೆ ಮುಸ್ಲಿಂ ಸಮುದಾಯದ ಜಾಫರ್ ಅವರನ್ನು ವಿವಾಹವಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದಿದ್ದೇನೆ. ನಮ್ಮನ್ನು ತಡೆಯಲು ಅವರು ಯಾರು? ಇದು ನಾವಿಬ್ಬರೂ ಪರಸ್ಪರ ತೆಗೆದುಕೊಂಡ ನಿರ್ಧಾರವಾಗಿತ್ತು” ಎಂದು ಹೇಳಿದ್ದಾರೆ. ಬಜರಂದಳ ದುಷ್ಕರ್ಮಿಗಳು ಜೋಡಿಗೆ ಕೊಲೆ ಬೆದರಿಕೆ ಕೂಡಾ ಹಾಕಿದ್ದು, ಅವರಿಂದ ತಮಗಿಬ್ಬರಿಗೆ ರಕ್ಷಣೆ ಬೇಕು ಎಂದು ಹೇಳಿದ್ದಾರೆ.

‘‘ಮೂರು ವರ್ಷಗಳಿಂದ ನಾವು ಪ್ರೀತಿಸುತ್ತಿದ್ದೇವೆ. ಬುಧವಾರದಂದು ಮದುವೆಯ ನೋಂದಣಿಗೆ ಸಹಿ ಹಾಕುವ ಮುನ್ನವೇ ಗುಂಪೊಂದು ಬಂದು ನಮ್ಮನ್ನು ತಡೆದರು. ತಡೆಯಲು ಅವರು ಯಾರು? ಇದು ನಮ್ಮಿಬ್ಬರ ಪರಸ್ಪರ ನಿರ್ಧಾರವಾಗಿತ್ತು. ಅವರು ನಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಚೈತ್ರಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

“ಅವರು ನನ್ನನ್ನು ನಿಂದಿಸಿದ್ದು, ‘ನಿನಗೆ ಮದುವೆಯಾಗಲು ಹಿಂದೂ ಹುಡುಗಿ ಬೇಕೇ? ನಿನಗೆ ಎಸ್ಸಿ ಹುಡುಗಿ ಬೇಕೇ?’ ಎಂದು ಹೇಳಿ ನನ್ನ ಪತಿ ಜಾಫರ್‌ಗೆ ಥಳಿಸಿದ್ದಾರೆ. ನಮಗೆ ಬಜರಂಗದಳದಿಂದ ರಕ್ಷಣೆ ಬೇಕು” ಎಂದು ಯುವತಿ ಹೇಳಿದ್ದಾರೆ.

ಮದುವೆಗೆ ನನ್ನ ಅಭ್ಯಂತರವಿಲ್ಲ ಎಂದು ಚೈತ್ರಾ ಅವರ ತಾಯಿ ಶೋಭಾ ಹೇಳಿದ್ದಾರೆ. “ನನ್ನ ಮಗಳಿಗೆ ಅಭ್ಯಂತರವಿಲ್ಲದಿದ್ದರೆ ನನಗೂ ಅಭ್ಯಂತರವಿಲ್ಲ. ಇಬ್ಬರೂ ಸುರಕ್ಷಿತವಾಗಿ ಮರಳಬೇಕು” ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಉಮಾ ಪ್ರಶಾಂತ್, ಯುವಕ-ಯುವತಿ ವಯಸ್ಕರಾಗಿದ್ದು, ಇದು ಅನೈತಿಕ ಪೊಲೀಸ್‌ಗಿರಿಯ ಘಟನೆ ಎಂದು ಹೇಳಿದ್ದಾರೆ. ಜಾಫರ್ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

“ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ನಾಲ್ಕು ಜನರು ಮದುವೆ ನೋಂದಣಿ ಮಾಡದಂತೆ ತಡೆದು, ಅಲ್ಲಿಂದ ಅವರಿಬ್ಬರನ್ನೂ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದರು. ಹುಡುಗಿಯನ್ನು ಅಲ್ಲಿಯೇ ಇರುವಂತೆ ಹೇಳಿ, ನಾಲ್ವರು ಜಾಫರ್‌ ಅವರನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಕರೆದೊಯ್ದರು” ಎಂದು ಪ್ರಶಾಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...