Homeಕರ್ನಾಟಕಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

ಚಿಕ್ಕಮಗಳೂರು: BJP ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆ ದಲಿತ-ಮುಸ್ಲಿಂ ಜೋಡಿ ಮದುವೆ

- Advertisement -
- Advertisement -

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ದುಷ್ಕರ್ಮಿಗಳ ಬೆದರಿಕೆಯ ನಡುವೆಯು ಚಿಕ್ಕಮಗಳೂರಿನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಯುವತಿ ಮತ್ತು ಮುಸ್ಲಿಂ ಯುವಕನ ನಡುವೆ ದಲಿತ ಸಂಘಟನೆಗಳ ಬೆಂಬಲದೊಂದಿಗೆ ಶುಕ್ರವಾರ ವಿವಾಹ ನಡೆದಿದೆ. ಎರಡು ದಿನಗಳ ಹಿಂದೆ ಸಬ್‌‌-ರಿಜಿಸ್ಟ್ರಾರ್‌ ಕಚೇರಿಗೆ ಬಂದಿದ್ದ ಜೋಡಿಯನ್ನು ಬಜರಂಗದಳದ ದುಷ್ಕರ್ಮಿಗಳು ಬಲವಂತವಾಗಿ ತಡೆದು ಅವರ ಮದುವೆಯನ್ನು ನಿಲ್ಲಿಸಿದ್ದರು.

ಚಿಕ್ಕಮಗಳೂರು ತಾಲೂಕಿನ ಲಕ್ಷ್ಮೀಪುರಂ ನಿವಾಸಿಗಳಾದ ಎಸ್‌ಸಿ ಸಮುದಾಯದ ಚೈತ್ರ ಮತ್ತು ಮುಸ್ಲಿಂ ಸಮುದಾಯದ ಜಾಫರ್‌ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ಅವರು ಚಿಕ್ಕಮಗಳೂರಿನ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಮದುವೆಯಾಗಲು ನಿರ್ಧರಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬುಧವಾರದಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್‌ ರಿಜಿಸ್ಟ್ರಾರ್‌ ಕಚೇರಿಗೆ ಚೈತ್ರ ಮತ್ತು ಜಾಫರ್‌ ಭೇಟಿ ನೀಡಿದಾಗ ಬಜರಂದಳದ ನಾಲ್ವರು ದುಷ್ಕರ್ಮಿಗಳು ಮಧ್ಯಪ್ರವೇಶಿಸಿ, ‘ಲವ್‌ ಜಿಹಾದ್‌’ ನಡೆಯುತ್ತಿದೆ ಎಂದು ಆರೋಪಿಸಿ ಮದುವೆಯನ್ನು ತಡೆದಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ತಮಗೆ ತೊಂದರೆ ನೀಡಿದ್ದ ಬಜರಂದಳದ ನಾಲ್ವರು ದುಷ್ಕರ್ಮಿಗಳ ವಿರುದ್ಧ ಜಾಫರ್‌ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ದುಷ್ಕರ್ಮಿಗಳನ್ನು ಶ್ಯಾಮ್, ಪಾರ್ಥಿಭನ್, ಗುರು ಮತ್ತು ಪ್ರಸಾದ್ ಗೌಡ ಎಂಬ ಗುರುತಿಸಲಾಗಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದ್ದು, ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರದಂದು ದಲಿತ ಸಂಘಟನೆಗಳ ನೇತೃತ್ವದಲ್ಲಿ ಅವರಿಬ್ಬರ ಮದುವೆ ನಡೆದಿದೆ. ಮದುವೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಚೈತ್ರ, “ನಾನು ಸ್ವಂತ ಇಚ್ಛೆಯ ಮೇರೆಗೆ ಮುಸ್ಲಿಂ ಸಮುದಾಯದ ಜಾಫರ್ ಅವರನ್ನು ವಿವಾಹವಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದಿದ್ದೇನೆ. ನಮ್ಮನ್ನು ತಡೆಯಲು ಅವರು ಯಾರು? ಇದು ನಾವಿಬ್ಬರೂ ಪರಸ್ಪರ ತೆಗೆದುಕೊಂಡ ನಿರ್ಧಾರವಾಗಿತ್ತು” ಎಂದು ಹೇಳಿದ್ದಾರೆ. ಬಜರಂದಳ ದುಷ್ಕರ್ಮಿಗಳು ಜೋಡಿಗೆ ಕೊಲೆ ಬೆದರಿಕೆ ಕೂಡಾ ಹಾಕಿದ್ದು, ಅವರಿಂದ ತಮಗಿಬ್ಬರಿಗೆ ರಕ್ಷಣೆ ಬೇಕು ಎಂದು ಹೇಳಿದ್ದಾರೆ.

‘‘ಮೂರು ವರ್ಷಗಳಿಂದ ನಾವು ಪ್ರೀತಿಸುತ್ತಿದ್ದೇವೆ. ಬುಧವಾರದಂದು ಮದುವೆಯ ನೋಂದಣಿಗೆ ಸಹಿ ಹಾಕುವ ಮುನ್ನವೇ ಗುಂಪೊಂದು ಬಂದು ನಮ್ಮನ್ನು ತಡೆದರು. ತಡೆಯಲು ಅವರು ಯಾರು? ಇದು ನಮ್ಮಿಬ್ಬರ ಪರಸ್ಪರ ನಿರ್ಧಾರವಾಗಿತ್ತು. ಅವರು ನಮ್ಮನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ” ಎಂದು ಚೈತ್ರಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೇಶ ಒಗ್ಗೂಡಿಸುವವರು ದೇಶಪ್ರೇಮಿಗಳು, ದೇಶ ಒಡೆಯುವವರು ದೇಶದ್ರೋಹಿಗಳು: ಯೋಗೇಂದ್ರ ಯಾದವ್

“ಅವರು ನನ್ನನ್ನು ನಿಂದಿಸಿದ್ದು, ‘ನಿನಗೆ ಮದುವೆಯಾಗಲು ಹಿಂದೂ ಹುಡುಗಿ ಬೇಕೇ? ನಿನಗೆ ಎಸ್ಸಿ ಹುಡುಗಿ ಬೇಕೇ?’ ಎಂದು ಹೇಳಿ ನನ್ನ ಪತಿ ಜಾಫರ್‌ಗೆ ಥಳಿಸಿದ್ದಾರೆ. ನಮಗೆ ಬಜರಂಗದಳದಿಂದ ರಕ್ಷಣೆ ಬೇಕು” ಎಂದು ಯುವತಿ ಹೇಳಿದ್ದಾರೆ.

ಮದುವೆಗೆ ನನ್ನ ಅಭ್ಯಂತರವಿಲ್ಲ ಎಂದು ಚೈತ್ರಾ ಅವರ ತಾಯಿ ಶೋಭಾ ಹೇಳಿದ್ದಾರೆ. “ನನ್ನ ಮಗಳಿಗೆ ಅಭ್ಯಂತರವಿಲ್ಲದಿದ್ದರೆ ನನಗೂ ಅಭ್ಯಂತರವಿಲ್ಲ. ಇಬ್ಬರೂ ಸುರಕ್ಷಿತವಾಗಿ ಮರಳಬೇಕು” ಎಂದು ಹೇಳಿದ್ದಾರೆ.

ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಉಮಾ ಪ್ರಶಾಂತ್, ಯುವಕ-ಯುವತಿ ವಯಸ್ಕರಾಗಿದ್ದು, ಇದು ಅನೈತಿಕ ಪೊಲೀಸ್‌ಗಿರಿಯ ಘಟನೆ ಎಂದು ಹೇಳಿದ್ದಾರೆ. ಜಾಫರ್ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್-ವಾಲ್ಮೀಕಿ ಭಾವಚಿತ್ರದ ಮುಂದೆ ಮದುವೆಯಾದ ಪ್ರೇಮಿಗಳು.

“ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿಯನ್ನು ನಾಲ್ಕು ಜನರು ಮದುವೆ ನೋಂದಣಿ ಮಾಡದಂತೆ ತಡೆದು, ಅಲ್ಲಿಂದ ಅವರಿಬ್ಬರನ್ನೂ ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದರು. ಹುಡುಗಿಯನ್ನು ಅಲ್ಲಿಯೇ ಇರುವಂತೆ ಹೇಳಿ, ನಾಲ್ವರು ಜಾಫರ್‌ ಅವರನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ಕರೆದೊಯ್ದರು” ಎಂದು ಪ್ರಶಾಂತ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...