Homeದಲಿತ್ ಫೈಲ್ಸ್ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತ ಇಮ್ರಾನ್ ಖಾನ್ ಟ್ವಿಟರ್‌ನಲ್ಲಿ ವೀಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಬೀಗ ಹಾಕಿದ ಮನೆಯೊಂದರೊಳಗೆ ಕಾರ್ಮಿಕರು ಇರುವ ದೃಶ್ಯಗಳು ಕಂಡುಬಂದಿವೆ. ಅಲ್ಲದೆ ಗರ್ಭಿಣಿ ಮಹಿಳೆಯೊಬ್ಬರ ಮೇಲೆ ಹಲ್ಲೆಮಾಡುವ ದೃಶ್ಯಗಳು ಸೆರೆಯಾಗಿವೆ.

ದೌರ್ಜನ್ಯ ಎಸಗಿರುವ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ಎಂದು ಹೇಳಲಾಗಿದೆ.

ದೌರ್ಜನ್ಯಕ್ಕೆ ಒಳಗಾದ ಎಲ್ಲಾ ದಲಿತ ಕಾರ್ಮಿಕರನ್ನು ರಕ್ಷಿಸಲಾಗಿದ್ದು ಎಲ್ಲರನ್ನೂ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿದ್ದು, ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ.

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಹೇಳಿದ್ದೇನು?

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಮ್ಮಿಂದ ಪಡೆದ ಸಾಲದ ಹಣವನ್ನು ಕೊಟ್ಟು ಬೇರೆ ಕಡೆಗೆ ಕೆಲಸಕ್ಕೆ ಹೋಗಿ ಎಂದು ಜಗದೀಶಗೌಡ ಹೇಳಿದ್ದರಿಂದ ಹಣವನ್ನು ಹೊಂಚಿಕೊಂಡು ಬರಲು ಮಂಜು ಮತ್ತು ಸತೀಶ ಅವರು ಬೇರೆ ಎಸ್ಟೇಟ್‌ಗೆ ಹೋಗಿದ್ದರು. ಹೀಗಿದ್ದಾಗ ಅಕ್ಟೋಬರ್‌ 08ರಂದು ಬೆಳಿಗ್ಗೆ 10.30ಗಂಟೆ ಸಮಯದಲ್ಲಿ ಹಲ್ಲೆ ಘಟನೆ ನಡೆದಿದೆ. ನಾನು ಮತ್ತು ನನ್ನ ಗಂಡ ವಿಜಯ ಅವರು ಲೈನ್‌ಮನೆಯಲ್ಲಿ ಇರುವಾಗ, ಎಸ್ಟೇಟ್ ಮಾಲೀಕರಾದ ಜಗದೀಶ ಮತ್ತು ಅವರ ಮಗ ತಿಲಕ್ ಮನೆಯ ಹತ್ತಿರ ಬಂದು ಗಲಾಟೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಹಣ ತರಲು ಹೋದವರು ಇನ್ನೂ ಬಂದಿಲ್ಲವೆಂದು ನಮಗೆ ಬಾಯಿಗೆ ಬಂದಂತೆ ಕೆಟ್ಟದಾಗಿ ಬೈಯ್ದಿದ್ದಾರೆ. ಮೊಬೈಲ್ ಕಿತ್ತುಕೊಂಡಿದ್ದಾರೆ. ನಾನು ಮೊಬೈಲ್ ಕೊಡುವುದಿಲ್ಲವೆಂದು ಹೇಳಿದಾಗ ಜಗದೀಶ ಗೌಡ ನನ್ನ ಕೆನ್ನೆಗೆ ಹೊಡೆದಿದ್ದಾರೆ. ಗಲಾಟೆ ಬಿಡಿಸಲು ಬಂದ ನನ್ನ ಗಂಡ ವಿಜಯ ಅವರಿಗೂ ಜಗದೀಶ ಮತ್ತು ತಿಲಕ್  ಹಲ್ಲೆ ನಡೆಸಿದ್ದಾರೆ. ಗಲಾಟೆಯನ್ನು ಬಿಡಿಸಲು ಬಂದ ರೂಪಾ ಮತ್ತು ಕವಿತಾ ಎಂಬರಿಗೂ ಬೈಯ್ದು ಹಲ್ಲೆ ನಡೆಸಿದ್ದಾರೆ” ಎಂದು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

“ಘಟನೆಯ ನಂತರ ನಮ್ಮನ್ನು ಲೈನ್‌ಮನೆಯಲ್ಲಿ ಕೂಡಿ ಹಾಕಿದ್ದರು. ನನಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗಾಗಿ ಕಡಬಗೆರೆ ಖಾಸಗಿ ಆಸ್ಪತ್ರೆಗೆ ಜಗದೀಶ ರವರ ಜೀಪಿನಲ್ಲಿಯೇ ಕರೆದೊಯ್ಯಲಾಯಿತು. ನಾನು ಮೂಡಿಗೆರೆಗೆ ಹೋಗಿ ಆಸ್ಪತ್ರೆಯಲ್ಲಿ ತೋರಿಸಿ ನಂತರ ಅಕ್ಟೋಬರ್‌ 9ರಂದು ಮಧ್ಯಾಹ್ನ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾಗಿದ್ದೆನು” ಎಂದು ಹೇಳಿದ್ದಾರೆ.

ಐಪಿಸಿ ಕಲಂ 504, 323, 342 ಸೇರಿದಂತೆ ವಿವಿಧ ಕಲಂಗಳು ಹಾಗೂ ಎಸ್‌ಸಿ ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇವುಗಳನ್ನು ಓದಿರಿ: ಜಾತಿ ದೌರ್ಜನ್ಯ ಸಂಬಂಧಿತ ಸುದ್ದಿಗಳನ್ನು ‘ದಲಿತ್‌ ಫೈಲ್ಸ್‌’ ಕ್ಯಾಟಗರಿಯಲ್ಲಿ ‌ಓದಬಹುದು- ಕ್ಲಿಕ್‌ ಮಾಡಿರಿ

ಹಲ್ಲೆಗೊಳಗಾದ ಮಹಿಳೆಗೆ ಗರ್ಭಪಾತ

ಹಲ್ಲೆಗೊಳಗಾದ ಗರ್ಭಿಣಿ ಅರ್ಪಿತಾ ಅವರಿಗೆ ಗರ್ಭಪಾತವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಜಗದೀಶ್‌ ಅವರು ಹೊಡೆದಿರುವುದೇ ಕಾರಣ ಎಂಬ ಆರೋಪವೂ ಕೇಳಿಬರುತ್ತಿದೆ.

ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬಳಿಕ ಎಸ್ಟೇಟ್‌ ಮಾಲೀಕ ಜಗದೀಶ್ ಮೇಲೆ ವಿವಿಧ ಆರೋಪಗಳು ಬರುತ್ತಿವೆ. “ಕೂಲಿ ಕಾರ್ಮಿಕ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಈ ಹಿಂದೆ ಜಗದೀಶ್‌ ಯತ್ನಿಸಿದ್ದ” ಎಂದು ಸಂತ್ರಸ್ತ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಈ ಕುರಿತೂ ದೂರು ದಾಖಲಿಸಲು ದಲಿತ ಮುಖಂಡರು ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...