Homeದಲಿತ್ ಫೈಲ್ಸ್ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತ ಇಮ್ರಾನ್ ಖಾನ್ ಟ್ವಿಟರ್‌ನಲ್ಲಿ ವೀಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಬೀಗ ಹಾಕಿದ ಮನೆಯೊಂದರೊಳಗೆ ಕಾರ್ಮಿಕರು ಇರುವ ದೃಶ್ಯಗಳು ಕಂಡುಬಂದಿವೆ. ಅಲ್ಲದೆ ಗರ್ಭಿಣಿ ಮಹಿಳೆಯೊಬ್ಬರ ಮೇಲೆ ಹಲ್ಲೆಮಾಡುವ ದೃಶ್ಯಗಳು ಸೆರೆಯಾಗಿವೆ.

ದೌರ್ಜನ್ಯ ಎಸಗಿರುವ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ಎಂದು ಹೇಳಲಾಗಿದೆ.

ದೌರ್ಜನ್ಯಕ್ಕೆ ಒಳಗಾದ ಎಲ್ಲಾ ದಲಿತ ಕಾರ್ಮಿಕರನ್ನು ರಕ್ಷಿಸಲಾಗಿದ್ದು ಎಲ್ಲರನ್ನೂ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿದ್ದು, ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ.

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಹೇಳಿದ್ದೇನು?

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಮ್ಮಿಂದ ಪಡೆದ ಸಾಲದ ಹಣವನ್ನು ಕೊಟ್ಟು ಬೇರೆ ಕಡೆಗೆ ಕೆಲಸಕ್ಕೆ ಹೋಗಿ ಎಂದು ಜಗದೀಶಗೌಡ ಹೇಳಿದ್ದರಿಂದ ಹಣವನ್ನು ಹೊಂಚಿಕೊಂಡು ಬರಲು ಮಂಜು ಮತ್ತು ಸತೀಶ ಅವರು ಬೇರೆ ಎಸ್ಟೇಟ್‌ಗೆ ಹೋಗಿದ್ದರು. ಹೀಗಿದ್ದಾಗ ಅಕ್ಟೋಬರ್‌ 08ರಂದು ಬೆಳಿಗ್ಗೆ 10.30ಗಂಟೆ ಸಮಯದಲ್ಲಿ ಹಲ್ಲೆ ಘಟನೆ ನಡೆದಿದೆ. ನಾನು ಮತ್ತು ನನ್ನ ಗಂಡ ವಿಜಯ ಅವರು ಲೈನ್‌ಮನೆಯಲ್ಲಿ ಇರುವಾಗ, ಎಸ್ಟೇಟ್ ಮಾಲೀಕರಾದ ಜಗದೀಶ ಮತ್ತು ಅವರ ಮಗ ತಿಲಕ್ ಮನೆಯ ಹತ್ತಿರ ಬಂದು ಗಲಾಟೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಹಣ ತರಲು ಹೋದವರು ಇನ್ನೂ ಬಂದಿಲ್ಲವೆಂದು ನಮಗೆ ಬಾಯಿಗೆ ಬಂದಂತೆ ಕೆಟ್ಟದಾಗಿ ಬೈಯ್ದಿದ್ದಾರೆ. ಮೊಬೈಲ್ ಕಿತ್ತುಕೊಂಡಿದ್ದಾರೆ. ನಾನು ಮೊಬೈಲ್ ಕೊಡುವುದಿಲ್ಲವೆಂದು ಹೇಳಿದಾಗ ಜಗದೀಶ ಗೌಡ ನನ್ನ ಕೆನ್ನೆಗೆ ಹೊಡೆದಿದ್ದಾರೆ. ಗಲಾಟೆ ಬಿಡಿಸಲು ಬಂದ ನನ್ನ ಗಂಡ ವಿಜಯ ಅವರಿಗೂ ಜಗದೀಶ ಮತ್ತು ತಿಲಕ್  ಹಲ್ಲೆ ನಡೆಸಿದ್ದಾರೆ. ಗಲಾಟೆಯನ್ನು ಬಿಡಿಸಲು ಬಂದ ರೂಪಾ ಮತ್ತು ಕವಿತಾ ಎಂಬರಿಗೂ ಬೈಯ್ದು ಹಲ್ಲೆ ನಡೆಸಿದ್ದಾರೆ” ಎಂದು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

“ಘಟನೆಯ ನಂತರ ನಮ್ಮನ್ನು ಲೈನ್‌ಮನೆಯಲ್ಲಿ ಕೂಡಿ ಹಾಕಿದ್ದರು. ನನಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗಾಗಿ ಕಡಬಗೆರೆ ಖಾಸಗಿ ಆಸ್ಪತ್ರೆಗೆ ಜಗದೀಶ ರವರ ಜೀಪಿನಲ್ಲಿಯೇ ಕರೆದೊಯ್ಯಲಾಯಿತು. ನಾನು ಮೂಡಿಗೆರೆಗೆ ಹೋಗಿ ಆಸ್ಪತ್ರೆಯಲ್ಲಿ ತೋರಿಸಿ ನಂತರ ಅಕ್ಟೋಬರ್‌ 9ರಂದು ಮಧ್ಯಾಹ್ನ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾಗಿದ್ದೆನು” ಎಂದು ಹೇಳಿದ್ದಾರೆ.

ಐಪಿಸಿ ಕಲಂ 504, 323, 342 ಸೇರಿದಂತೆ ವಿವಿಧ ಕಲಂಗಳು ಹಾಗೂ ಎಸ್‌ಸಿ ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇವುಗಳನ್ನು ಓದಿರಿ: ಜಾತಿ ದೌರ್ಜನ್ಯ ಸಂಬಂಧಿತ ಸುದ್ದಿಗಳನ್ನು ‘ದಲಿತ್‌ ಫೈಲ್ಸ್‌’ ಕ್ಯಾಟಗರಿಯಲ್ಲಿ ‌ಓದಬಹುದು- ಕ್ಲಿಕ್‌ ಮಾಡಿರಿ

ಹಲ್ಲೆಗೊಳಗಾದ ಮಹಿಳೆಗೆ ಗರ್ಭಪಾತ

ಹಲ್ಲೆಗೊಳಗಾದ ಗರ್ಭಿಣಿ ಅರ್ಪಿತಾ ಅವರಿಗೆ ಗರ್ಭಪಾತವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಜಗದೀಶ್‌ ಅವರು ಹೊಡೆದಿರುವುದೇ ಕಾರಣ ಎಂಬ ಆರೋಪವೂ ಕೇಳಿಬರುತ್ತಿದೆ.

ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬಳಿಕ ಎಸ್ಟೇಟ್‌ ಮಾಲೀಕ ಜಗದೀಶ್ ಮೇಲೆ ವಿವಿಧ ಆರೋಪಗಳು ಬರುತ್ತಿವೆ. “ಕೂಲಿ ಕಾರ್ಮಿಕ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಈ ಹಿಂದೆ ಜಗದೀಶ್‌ ಯತ್ನಿಸಿದ್ದ” ಎಂದು ಸಂತ್ರಸ್ತ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಈ ಕುರಿತೂ ದೂರು ದಾಖಲಿಸಲು ದಲಿತ ಮುಖಂಡರು ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...