Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...