Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...