Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...