Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...