Homeಮುಖಪುಟಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

ಬಾಲ್ಯವಿವಾಹ | 11 ಲಕ್ಷ ಮಕ್ಕಳನ್ನು ಗುರುತಿಸಿದ ಮಕ್ಕಳ ಹಕ್ಕುಗಳ ಆಯೋಗ

- Advertisement -
- Advertisement -

ಬಾಲ್ಯವಿವಾಹಕ್ಕೆ ಗುರಿಯಾಗುವ 11 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು 2023-24ರಲ್ಲಿ ಗುರುತಿಸಿರುವುದಾಗಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ(NCPCR) ಗುರುವಾರ ಹೇಳಿದೆ. ಕೌಟುಂಬಿಕ ಸಮಾಲೋಚನೆ, ಶಾಲೆಗೆ ಪುನಃ ಸೇರ್ಪಡೆಯ ಪ್ರಯತ್ನಗಳು ಮತ್ತು ಕಾನೂನು ಜಾರಿಯೊಂದಿಗೆ ಸಮನ್ವಯದ ಮೂಲಕ ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.ಬಾಲ್ಯವಿವಾಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಾಲ್ಯ ವಿವಾಹ ನಿಷೇಧ ಕಾಯಿದೆ (PCMA)-2006 ರ ಅಡಿಯಲ್ಲಿ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು (CMPOs), ಜಿಲ್ಲಾ ಅಧಿಕಾರಿಗಳು ಮತ್ತು ಇತರರ ಸಹಯೋಗದ ಮೂಲಕ ತೆಗೆದುಕೊಂಡ ಪ್ರಯತ್ನಗಳ ಬಗ್ಗೆ ಸಮಗ್ರ ವರದಿಯಲ್ಲಿ ಮಕ್ಕಳ ಹಕ್ಕುಗಳ ರಾಷ್ಟ್ರೀಯ ಆಯೋಗ ಒತ್ತಿಹೇಳಿದೆ.

ಇದನ್ನೂಓದಿ: FACT CHECK : ಭಾರತದ್ದು ಎಂದು ಪೆರು ರೈಲಿನ ವಿಡಿಯೋ ಹಂಚಿಕೊಂಡ ಸಚಿವ ಅಶ್ವಿನಿ ವೈಷ್ಣವ್

ಜಾಗೃತಿ ಅಭಿಯಾನದ ಮೂಲಕ 1.2 ಕೋಟಿಗೂ ಹೆಚ್ಚು ಜನರನ್ನು ತಲುಪಲಾಗಿದ್ದು, ಉತ್ತರ ಪ್ರದೇಶ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳು ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ನಾಯಕರಾಗಿ ಹೊರಹೊಮ್ಮಿವೆ ಎಂದು ಆಯೋಗ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಬಾಲ್ಯವಿವಾಹಕ್ಕೆ ಗುರಿಯಾಗುವಂತಹ 5 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ್ದು, ಇದರ ವಿರುದ್ಧ ಹೋರಾಟದಲ್ಲಿ ರಾಜ್ಯವು ಭಾಗವಹಿಸಿದೆ ಎಂದು ಆಯೋಗ ಹೇಳಿದೆ. ಅಷ್ಟೆ ಅಲ್ಲದೆ, ಮಧ್ಯಪ್ರದೇಶ ಮತ್ತು ಒಡಿಶಾದಂತಹ ರಾಜ್ಯಗಳು ಕೂಡಾ ಬಾಲ್ಯ ವಿವಾಹದ ವಿರುದ್ಧ ತೀವ್ರವಾದ ಹೋರಾಟ ನಡೆಸಿದೆ ಎಂದು ವರದಿ ಹೇಳಿದೆ.

ಭಾರತದಾದ್ಯಂತ, 11.4 ಲಕ್ಷಕ್ಕೂ ಹೆಚ್ಚು ಮಕ್ಕಳು ಬಾಲ್ಯವಿವಾಹಕ್ಕೆ ಗುರಿಯಾಗುವ ಬಗ್ಗೆ ಗುರುತಿಸಲಾಗಿದೆ. ಯಾವುದೆ ಸೂಚನೆಯಿಲ್ಲದೆ ಸತತ 30 ದಿನಗಳವರೆಗೆ ಗೈರುಹಾಜರಾದ ಮಕ್ಕಳನ್ನು ಗುರುತಿಸಲು ಶಾಲೆಗಳನ್ನು ಮ್ಯಾಪಿಂಗ್ ಮಾಡುವುದು ಮತ್ತು ಶಾಲೆಯಿಂದ ಹೊರಗುಳಿಯುವವರನ್ನು ಮೇಲ್ವಿಚಾರಣೆ ಮಾಡಲು ಶಾಲಾ ಅಧಿಕಾರಿಗಳೊಂದಿಗೆ ಸಮನ್ವಯಗೊಳಿಸುವುದು ತಡೆಗಟ್ಟುವ ಕ್ರಮಗಳಲ್ಲಿ ಸೇರಿದೆ.

ಇದನ್ನೂಓದಿ: ಗ್ರೇಟ್ ನಿಕೋಬಾರ್ ಯೋಜನೆ ನಿಲ್ಲಿಸಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹ

ಕರ್ನಾಟಕ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ಅಧಿಕಾರಿಗಳು ಧಾರ್ಮಿಕ ಮುಖಂಡರು, ವಿವಾಹ ಸಮಾರಂಭಗಳಲ್ಲಿ ತೊಡಗಿರುವ ಸೇವಾ ಪೂರೈಕೆದಾರರು ಮತ್ತು ಅಂಗನವಾಡಿ ಕಾರ್ಯಕರ್ತೆಯರಂತಹ ಪ್ರಮುಖ ಸ್ಥಳೀಯ ವ್ಯಕ್ತಿಗಳೊಂದಿಗೆ ಜಾಗೃತಿ ಮೂಡಿಸಲು ಮತ್ತು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ವಿವಾಹಗಳನ್ನು ತಡೆಗಟ್ಟಲು 40,000 ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದ್ದಾರೆ ಎಂದು ಗುರುವಾರ ಬಿಡುಗಡೆಯಾದ ವರದಿ ತಿಳಿಸಿದೆ.ಬಾಲ್ಯವಿವಾಹ

ಈ ಪ್ರಯತ್ನಗಳ ಹೊರತಾಗಿಯೂ, ಗೋವಾ ಮತ್ತು ಲಡಾಖ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಡೇಟಾ ಸಂಗ್ರಹಣೆ ಮತ್ತು ಜಾರಿಯಲ್ಲಿನ ಅಂತರವನ್ನು ಎನ್‌ಸಿಪಿಸಿಆರ್ ವರದಿಯು ಎತ್ತಿ ತೋರಿಸಿದೆ. ದೇಶದ ಕೆಲವು ಜಿಲ್ಲೆಗಳಲ್ಲಿ ಇರುವ ಸಾಂಸ್ಕೃತಿಕ ಆಚರಣೆಗಳ ಕಾರಣಕ್ಕೆ ಇದು ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತೊಡೆದುಹಾಕಲು ಕಷ್ಟಕರವಾಗಿದೆ ಎಂದು ವರದಿ ಹೇಳಿದೆ.

NCPCR ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ಬಾಲ್ಯ ವಿವಾಹದ ವಿರುದ್ಧದ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಈ ಸಮಸ್ಯೆಗೆ ಆದ್ಯತೆ ನೀಡಬೇಕು ಮತ್ತು ಬಾಲ್ಯ ವಿವಾಹಗಳ ನಿರ್ಮೂಲನೆಗೆ ಜಿಲ್ಲಾ ಮಟ್ಟದ ಕಾರ್ಯತಂತ್ರಗಳನ್ನು ಅನುಷ್ಠಾನಗೊಳಿಸುವುದನ್ನು ಮುಂದುವರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ವಿಡಿಯೊ ನೋಡಿ: ಎಲ್ಲರಿಗಾಗಿ ಸ್ತ್ರೀವಾದ: ಒಗ್ಗೂಡಿದ ಚಳವಳಿಯನ್ನು ಮಾಡಲು ಸಾಧ್ಯವೇ?

ವಿಡಿಯೊ ನೋಡಿ:  ಎಲ್ಲರಿಗಾಗಿ ಸ್ತ್ರೀವಾದ: ಮಹಿಳಾ ದೃಷ್ಟಿಕೋನದಲ್ಲಿ ಸ್ವತಂತ್ರವಾಗಿರೋದು ಅಂದರೆ ಏನು?

ವಿಡಿಯೊ ನೋಡಿ:  ಅವ್ವ, ನನ್ನವ್ವ ಫಲವತ್ತಾದ ಕಪ್ಪು ನೆಲ: ಪಿ.ಲಂಕೇಶರ ಪದ್ಯವನ್ನು ಹಾಡಿನ ರೂಪಕ್ಕೆ ತಂದ ಜನಾರ್ದನ್ ಜನ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...