Homeಮುಖಪುಟಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

ಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

- Advertisement -
- Advertisement -

ಪುಣೆ, ಅಹ್ಮದ್‌ನಗರ, ಔರಂಗಾಬಾದ್ ಮತ್ತು ಅಮರಾವತಿ ಜಿಲ್ಲೆಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಾದ ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಸಮುದಾಯದ ಹೆಣ್ಣುಮಕ್ಕಳು ಬಾಲ್ಯ ವಿವಾಹಗಳು ಮತ್ತು ಹೆಚ್ಚಿನ ವಿಚ್ಛೇದನದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಚೈಲ್ಡ್‌ ರೈಟ್ಸ್‌ ಆಂಡ್ ಯೂ (CRY) ವರದಿ ತಿಳಿಸಿದೆ.

ಈ ಸಮುದಾಯಗಳಲ್ಲಿನ ಬಾಲಕಿಯರನ್ನು ಹಣಕಾಸಿನ ಕಾರಣಗಳಿಗಾಗಿ ಸಣ್ಣ ಪ್ರಾಯದಲ್ಲಿ ವಿವಾಹ ಮಾಡಿಸಿಕೊಡಲಾಗುತ್ತದೆ. ಸಾಲಗಳನ್ನು ಮರುಪಾವತಿಸಲು ಅಥವಾ ಕುಟುಂಬದಲ್ಲಿ ಯಾರಾದರು ವ್ಯಕ್ತಿಗಳು ಬಂಧನದಲ್ಲಿದ್ದರೆ ಅವರನ್ನು  ಜಾಮೀನಿನ ಮೇಲೆ ಬಿಡುಗಡೆಗೆ ಹಣಕ್ಕಾಗಿ ಅಪ್ರಾಪ್ತ ಹೆಣ್ಣುಮಕ್ಕಳನ್ನು ವಿವಾಹ ಮಾಡಿಸಿಕೊಡಲಾಗುತ್ತದೆ.

ಹಣದ ವ್ಯವಹಾರವು ವರನ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಬಾಲಕಿಯರ ಸೌಂದರ್ಯ ಮತ್ತು ದೈಹಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ.  ಮೊತ್ತವು ರೂ 25,000 ರಿಂದ ರೂ 50,000 ವರೆಗೆ ಇರುತ್ತದೆ ಮತ್ತು ಕೆಲವೊಮ್ಮೆ ಒಂದು ಲಕ್ಷಕ್ಕೂ ಹೆಚ್ಚು ಇರಬಹುದು. ಅನೇಕ ಪ್ರಕರಣಗಳಲ್ಲಿ ಕುಟುಂಬದ ಋಣ ತೀರಿಸಲು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗುತ್ತದೆ ಎಂದು ವರದಿ ಹೇಳಿದೆ.

ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ, ಕಟುಂಬವು ಬಾಲಕಿಯರನ್ನು  ತನ್ನ ಒಪ್ಪಿಗೆಯಿಲ್ಲದೆ ಸಾಲಗಾರನ ಮನೆಗೆ ಸೆಟಲ್‌ಮೆಂಟ್‌ಗಾಗಿ  ಎಂದು ಮದುವೆ ಮಾಡಿಸಿಕೊಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಜೈಲಿನಲ್ಲಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ಅಗತ್ಯವಿರುವ ಹಣವನ್ನು ಪಡೆಯಲು ಬಾಲಕಿಯರನ್ನು ಮದುವೆ ಮಾಡಿಸಿಕೊಡಲಾಗುತ್ತದೆ ಎಂದು ವರದಿ ಹೇಳಿದೆ.

ಸಮುದಾಯಗಳಲ್ಲಿ ಬಾಲ್ಯವಿವಾಹಗಳು ಸಾಕಷ್ಟು ಹೆಚ್ಚಿವೆ. 10 ವರ್ಷದಿಂದ 15 ವರ್ಷ ವಯಸ್ಸಿನ ಬಾಲಕಿಯರು ಬೇಗನೆ ಮದುವೆಯಾಗುತ್ತಾರೆ. ಹಣಕಾಸಿನ ಸಾಲವನ್ನು ಇತ್ಯರ್ಥಪಡಿಸಲು ಮದುವೆ ಮಾಡುತ್ತಾರೆ. ಮದುವೆಯಾದ ಒಂದು ಅಥವಾ ಎರಡು ವರ್ಷಗಳ ನಂತರ ಹೆಣ್ಣುಮಕ್ಕಳನ್ನು ತ್ಯಜಿಸುವ ಘಟನೆ ಸಾಮಾನ್ಯವಾಗಿದೆ. ಈ ಬಾಲಕಿಯರಿಗೆ ತಮ್ಮ ಹೆತ್ತವರು ಮರುಮದುವೆಯನ್ನು ಕೂಡ ಮಾಡುತ್ತಾರೆ ಮತ್ತಷ್ಟು ಶೋಷಣೆಗೆ ಒಳಗಾಗುತ್ತಾರೆ ಎಂದು ವರದಿ ತಿಳಿಸಿದೆ.

CRY ನಡೆಸಿದ ಅಧ್ಯಯನದ ಪ್ರಕಾರ, 2020 ಮತ್ತು 2022ರ ನಡುವೆ, ಪಾರ್ಧಿ, ಭಿಲ್ ಮತ್ತು ಥಾಕರ್ ಸಮುದಾಯದ ಒಟ್ಟು 396 ಬಾಲಕಿಯರ ಮರುಮದುವೆ ನಡೆದಿದೆ.

ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಬುಡಕಟ್ಟು ಸಮುದಾಯದ ಜನರು ರಾಜ್ಯ ಮಟ್ಟದಲ್ಲಿ ಹಾಗೂ ಸಮಾಜದ ಇತರ ಹಂತಗಳಲ್ಲಿ ಬಹುತೇಕ ಪ್ರಾತಿನಿಧ್ಯವಿಲ್ಲದೆ, ಅವರು ತಮ್ಮ ವೈಯಕ್ತಿಕ ಗುರುತನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ CRY ವರದಿ ತಿಳಿಸಿದೆ.

CRY  ಜನರಲ್ ಮ್ಯಾನೇಜರ್ ಕುಮಾರ್ ನಿಲೇಂದು ಅವರ ಪ್ರಕಾರ, ಅಲೆಮಾರಿ ಸಮುದಾಯಗಳು ಸಾಮಾನ್ಯವಾಗಿ ವಿಭಿನ್ನ ರೀತಿಯ ಕಷ್ಟಗಳನ್ನು ಎದುರಿಸುತ್ತವೆ ಮತ್ತು ಆದ್ದರಿಂದ ಈ ಸಮುದಾಯಗಳ ಮಕ್ಕಳು ಹೆಚ್ಚು ಹಿಂದುಳಿದಿದ್ದಾರೆ ಎಂದು ಹೇಳಿದೆ. CRY ಈ ಸಮುದಾಯಗಳ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಮತ್ತು ನಾವು ಅದನ್ನು ಮಾಡುವಲ್ಲಿ ತುಲನಾತ್ಮಕವಾಗಿ ಯಶಸ್ವಿಯಾಗಿದ್ದೇವೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ಸಂಸದ ಎ ರಾಜಾ ಒಡೆತನದ 55ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...