Homeಮುಖಪುಟಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

ಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

- Advertisement -
- Advertisement -

ಪುಣೆ, ಅಹ್ಮದ್‌ನಗರ, ಔರಂಗಾಬಾದ್ ಮತ್ತು ಅಮರಾವತಿ ಜಿಲ್ಲೆಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಾದ ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಸಮುದಾಯದ ಹೆಣ್ಣುಮಕ್ಕಳು ಬಾಲ್ಯ ವಿವಾಹಗಳು ಮತ್ತು ಹೆಚ್ಚಿನ ವಿಚ್ಛೇದನದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಚೈಲ್ಡ್‌ ರೈಟ್ಸ್‌ ಆಂಡ್ ಯೂ (CRY) ವರದಿ ತಿಳಿಸಿದೆ.

ಈ ಸಮುದಾಯಗಳಲ್ಲಿನ ಬಾಲಕಿಯರನ್ನು ಹಣಕಾಸಿನ ಕಾರಣಗಳಿಗಾಗಿ ಸಣ್ಣ ಪ್ರಾಯದಲ್ಲಿ ವಿವಾಹ ಮಾಡಿಸಿಕೊಡಲಾಗುತ್ತದೆ. ಸಾಲಗಳನ್ನು ಮರುಪಾವತಿಸಲು ಅಥವಾ ಕುಟುಂಬದಲ್ಲಿ ಯಾರಾದರು ವ್ಯಕ್ತಿಗಳು ಬಂಧನದಲ್ಲಿದ್ದರೆ ಅವರನ್ನು  ಜಾಮೀನಿನ ಮೇಲೆ ಬಿಡುಗಡೆಗೆ ಹಣಕ್ಕಾಗಿ ಅಪ್ರಾಪ್ತ ಹೆಣ್ಣುಮಕ್ಕಳನ್ನು ವಿವಾಹ ಮಾಡಿಸಿಕೊಡಲಾಗುತ್ತದೆ.

ಹಣದ ವ್ಯವಹಾರವು ವರನ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಬಾಲಕಿಯರ ಸೌಂದರ್ಯ ಮತ್ತು ದೈಹಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ.  ಮೊತ್ತವು ರೂ 25,000 ರಿಂದ ರೂ 50,000 ವರೆಗೆ ಇರುತ್ತದೆ ಮತ್ತು ಕೆಲವೊಮ್ಮೆ ಒಂದು ಲಕ್ಷಕ್ಕೂ ಹೆಚ್ಚು ಇರಬಹುದು. ಅನೇಕ ಪ್ರಕರಣಗಳಲ್ಲಿ ಕುಟುಂಬದ ಋಣ ತೀರಿಸಲು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗುತ್ತದೆ ಎಂದು ವರದಿ ಹೇಳಿದೆ.

ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ, ಕಟುಂಬವು ಬಾಲಕಿಯರನ್ನು  ತನ್ನ ಒಪ್ಪಿಗೆಯಿಲ್ಲದೆ ಸಾಲಗಾರನ ಮನೆಗೆ ಸೆಟಲ್‌ಮೆಂಟ್‌ಗಾಗಿ  ಎಂದು ಮದುವೆ ಮಾಡಿಸಿಕೊಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಜೈಲಿನಲ್ಲಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ಅಗತ್ಯವಿರುವ ಹಣವನ್ನು ಪಡೆಯಲು ಬಾಲಕಿಯರನ್ನು ಮದುವೆ ಮಾಡಿಸಿಕೊಡಲಾಗುತ್ತದೆ ಎಂದು ವರದಿ ಹೇಳಿದೆ.

ಸಮುದಾಯಗಳಲ್ಲಿ ಬಾಲ್ಯವಿವಾಹಗಳು ಸಾಕಷ್ಟು ಹೆಚ್ಚಿವೆ. 10 ವರ್ಷದಿಂದ 15 ವರ್ಷ ವಯಸ್ಸಿನ ಬಾಲಕಿಯರು ಬೇಗನೆ ಮದುವೆಯಾಗುತ್ತಾರೆ. ಹಣಕಾಸಿನ ಸಾಲವನ್ನು ಇತ್ಯರ್ಥಪಡಿಸಲು ಮದುವೆ ಮಾಡುತ್ತಾರೆ. ಮದುವೆಯಾದ ಒಂದು ಅಥವಾ ಎರಡು ವರ್ಷಗಳ ನಂತರ ಹೆಣ್ಣುಮಕ್ಕಳನ್ನು ತ್ಯಜಿಸುವ ಘಟನೆ ಸಾಮಾನ್ಯವಾಗಿದೆ. ಈ ಬಾಲಕಿಯರಿಗೆ ತಮ್ಮ ಹೆತ್ತವರು ಮರುಮದುವೆಯನ್ನು ಕೂಡ ಮಾಡುತ್ತಾರೆ ಮತ್ತಷ್ಟು ಶೋಷಣೆಗೆ ಒಳಗಾಗುತ್ತಾರೆ ಎಂದು ವರದಿ ತಿಳಿಸಿದೆ.

CRY ನಡೆಸಿದ ಅಧ್ಯಯನದ ಪ್ರಕಾರ, 2020 ಮತ್ತು 2022ರ ನಡುವೆ, ಪಾರ್ಧಿ, ಭಿಲ್ ಮತ್ತು ಥಾಕರ್ ಸಮುದಾಯದ ಒಟ್ಟು 396 ಬಾಲಕಿಯರ ಮರುಮದುವೆ ನಡೆದಿದೆ.

ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಬುಡಕಟ್ಟು ಸಮುದಾಯದ ಜನರು ರಾಜ್ಯ ಮಟ್ಟದಲ್ಲಿ ಹಾಗೂ ಸಮಾಜದ ಇತರ ಹಂತಗಳಲ್ಲಿ ಬಹುತೇಕ ಪ್ರಾತಿನಿಧ್ಯವಿಲ್ಲದೆ, ಅವರು ತಮ್ಮ ವೈಯಕ್ತಿಕ ಗುರುತನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ CRY ವರದಿ ತಿಳಿಸಿದೆ.

CRY  ಜನರಲ್ ಮ್ಯಾನೇಜರ್ ಕುಮಾರ್ ನಿಲೇಂದು ಅವರ ಪ್ರಕಾರ, ಅಲೆಮಾರಿ ಸಮುದಾಯಗಳು ಸಾಮಾನ್ಯವಾಗಿ ವಿಭಿನ್ನ ರೀತಿಯ ಕಷ್ಟಗಳನ್ನು ಎದುರಿಸುತ್ತವೆ ಮತ್ತು ಆದ್ದರಿಂದ ಈ ಸಮುದಾಯಗಳ ಮಕ್ಕಳು ಹೆಚ್ಚು ಹಿಂದುಳಿದಿದ್ದಾರೆ ಎಂದು ಹೇಳಿದೆ. CRY ಈ ಸಮುದಾಯಗಳ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಮತ್ತು ನಾವು ಅದನ್ನು ಮಾಡುವಲ್ಲಿ ತುಲನಾತ್ಮಕವಾಗಿ ಯಶಸ್ವಿಯಾಗಿದ್ದೇವೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ಸಂಸದ ಎ ರಾಜಾ ಒಡೆತನದ 55ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...