Homeಮುಖಪುಟಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

ಬುಡಕಟ್ಟು ಬಾಲಕಿಯರಲ್ಲಿ ಹೆಚ್ಚಿದ ಬಾಲ್ಯವಿವಾಹ, ವಿಚ್ಛೇದನ: ವರದಿ

- Advertisement -
- Advertisement -

ಪುಣೆ, ಅಹ್ಮದ್‌ನಗರ, ಔರಂಗಾಬಾದ್ ಮತ್ತು ಅಮರಾವತಿ ಜಿಲ್ಲೆಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಾದ ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಸಮುದಾಯದ ಹೆಣ್ಣುಮಕ್ಕಳು ಬಾಲ್ಯ ವಿವಾಹಗಳು ಮತ್ತು ಹೆಚ್ಚಿನ ವಿಚ್ಛೇದನದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಚೈಲ್ಡ್‌ ರೈಟ್ಸ್‌ ಆಂಡ್ ಯೂ (CRY) ವರದಿ ತಿಳಿಸಿದೆ.

ಈ ಸಮುದಾಯಗಳಲ್ಲಿನ ಬಾಲಕಿಯರನ್ನು ಹಣಕಾಸಿನ ಕಾರಣಗಳಿಗಾಗಿ ಸಣ್ಣ ಪ್ರಾಯದಲ್ಲಿ ವಿವಾಹ ಮಾಡಿಸಿಕೊಡಲಾಗುತ್ತದೆ. ಸಾಲಗಳನ್ನು ಮರುಪಾವತಿಸಲು ಅಥವಾ ಕುಟುಂಬದಲ್ಲಿ ಯಾರಾದರು ವ್ಯಕ್ತಿಗಳು ಬಂಧನದಲ್ಲಿದ್ದರೆ ಅವರನ್ನು  ಜಾಮೀನಿನ ಮೇಲೆ ಬಿಡುಗಡೆಗೆ ಹಣಕ್ಕಾಗಿ ಅಪ್ರಾಪ್ತ ಹೆಣ್ಣುಮಕ್ಕಳನ್ನು ವಿವಾಹ ಮಾಡಿಸಿಕೊಡಲಾಗುತ್ತದೆ.

ಹಣದ ವ್ಯವಹಾರವು ವರನ ಕುಟುಂಬಗಳ ಆರ್ಥಿಕ ಸ್ಥಿತಿಯನ್ನು ಅವಲಂಬಿಸಿರುತ್ತದೆ ಮತ್ತು ಬಾಲಕಿಯರ ಸೌಂದರ್ಯ ಮತ್ತು ದೈಹಿಕ ಲಕ್ಷಣಗಳನ್ನು ಅವಲಂಬಿಸಿರುತ್ತದೆ.  ಮೊತ್ತವು ರೂ 25,000 ರಿಂದ ರೂ 50,000 ವರೆಗೆ ಇರುತ್ತದೆ ಮತ್ತು ಕೆಲವೊಮ್ಮೆ ಒಂದು ಲಕ್ಷಕ್ಕೂ ಹೆಚ್ಚು ಇರಬಹುದು. ಅನೇಕ ಪ್ರಕರಣಗಳಲ್ಲಿ ಕುಟುಂಬದ ಋಣ ತೀರಿಸಲು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗುತ್ತದೆ ಎಂದು ವರದಿ ಹೇಳಿದೆ.

ಸಾಲವನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ, ಕಟುಂಬವು ಬಾಲಕಿಯರನ್ನು  ತನ್ನ ಒಪ್ಪಿಗೆಯಿಲ್ಲದೆ ಸಾಲಗಾರನ ಮನೆಗೆ ಸೆಟಲ್‌ಮೆಂಟ್‌ಗಾಗಿ  ಎಂದು ಮದುವೆ ಮಾಡಿಸಿಕೊಡುತ್ತಾರೆ. ಅನೇಕ ಸಂದರ್ಭಗಳಲ್ಲಿ ಜೈಲಿನಲ್ಲಿರುವ ವ್ಯಕ್ತಿಯನ್ನು ಬಿಡುಗಡೆ ಮಾಡಲು ಅಗತ್ಯವಿರುವ ಹಣವನ್ನು ಪಡೆಯಲು ಬಾಲಕಿಯರನ್ನು ಮದುವೆ ಮಾಡಿಸಿಕೊಡಲಾಗುತ್ತದೆ ಎಂದು ವರದಿ ಹೇಳಿದೆ.

ಸಮುದಾಯಗಳಲ್ಲಿ ಬಾಲ್ಯವಿವಾಹಗಳು ಸಾಕಷ್ಟು ಹೆಚ್ಚಿವೆ. 10 ವರ್ಷದಿಂದ 15 ವರ್ಷ ವಯಸ್ಸಿನ ಬಾಲಕಿಯರು ಬೇಗನೆ ಮದುವೆಯಾಗುತ್ತಾರೆ. ಹಣಕಾಸಿನ ಸಾಲವನ್ನು ಇತ್ಯರ್ಥಪಡಿಸಲು ಮದುವೆ ಮಾಡುತ್ತಾರೆ. ಮದುವೆಯಾದ ಒಂದು ಅಥವಾ ಎರಡು ವರ್ಷಗಳ ನಂತರ ಹೆಣ್ಣುಮಕ್ಕಳನ್ನು ತ್ಯಜಿಸುವ ಘಟನೆ ಸಾಮಾನ್ಯವಾಗಿದೆ. ಈ ಬಾಲಕಿಯರಿಗೆ ತಮ್ಮ ಹೆತ್ತವರು ಮರುಮದುವೆಯನ್ನು ಕೂಡ ಮಾಡುತ್ತಾರೆ ಮತ್ತಷ್ಟು ಶೋಷಣೆಗೆ ಒಳಗಾಗುತ್ತಾರೆ ಎಂದು ವರದಿ ತಿಳಿಸಿದೆ.

CRY ನಡೆಸಿದ ಅಧ್ಯಯನದ ಪ್ರಕಾರ, 2020 ಮತ್ತು 2022ರ ನಡುವೆ, ಪಾರ್ಧಿ, ಭಿಲ್ ಮತ್ತು ಥಾಕರ್ ಸಮುದಾಯದ ಒಟ್ಟು 396 ಬಾಲಕಿಯರ ಮರುಮದುವೆ ನಡೆದಿದೆ.

ಪಾರ್ಧಿಗಳು, ಭಿಲ್‌ಗಳು ಮತ್ತು ಥಕರ್‌ ಬುಡಕಟ್ಟು ಸಮುದಾಯದ ಜನರು ರಾಜ್ಯ ಮಟ್ಟದಲ್ಲಿ ಹಾಗೂ ಸಮಾಜದ ಇತರ ಹಂತಗಳಲ್ಲಿ ಬಹುತೇಕ ಪ್ರಾತಿನಿಧ್ಯವಿಲ್ಲದೆ, ಅವರು ತಮ್ಮ ವೈಯಕ್ತಿಕ ಗುರುತನ್ನು ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ CRY ವರದಿ ತಿಳಿಸಿದೆ.

CRY  ಜನರಲ್ ಮ್ಯಾನೇಜರ್ ಕುಮಾರ್ ನಿಲೇಂದು ಅವರ ಪ್ರಕಾರ, ಅಲೆಮಾರಿ ಸಮುದಾಯಗಳು ಸಾಮಾನ್ಯವಾಗಿ ವಿಭಿನ್ನ ರೀತಿಯ ಕಷ್ಟಗಳನ್ನು ಎದುರಿಸುತ್ತವೆ ಮತ್ತು ಆದ್ದರಿಂದ ಈ ಸಮುದಾಯಗಳ ಮಕ್ಕಳು ಹೆಚ್ಚು ಹಿಂದುಳಿದಿದ್ದಾರೆ ಎಂದು ಹೇಳಿದೆ. CRY ಈ ಸಮುದಾಯಗಳ ಮಕ್ಕಳ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದೆ ಮತ್ತು ನಾವು ಅದನ್ನು ಮಾಡುವಲ್ಲಿ ತುಲನಾತ್ಮಕವಾಗಿ ಯಶಸ್ವಿಯಾಗಿದ್ದೇವೆ ಎಂದು ಹೇಳಿಕೊಂಡಿದೆ.

ಇದನ್ನು ಓದಿ: ಸಂಸದ ಎ ರಾಜಾ ಒಡೆತನದ 55ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...