Homeಮುಖಪುಟಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

- Advertisement -
- Advertisement -

ಮದರಸಾಗಳಿಗೆ ದಾಖಲಾದ ಮುಸ್ಲಿಮೇತರ ಸಮುದಾಯದ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರಿಸುವಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ಎನ್‌ಸಿಪಿಸಿಆರ್ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಿದೆ.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಸುಮಾರು ಒಂದು ವರ್ಷದ ಹಿಂದೆ ಈ ಬಗ್ಗೆ ನೊಟೀಸ್‌ ನೀಡಿತ್ತು. ಮದರಸಾಗಳಿಗೆ ಮುಸ್ಲಿಮೇತರ ಮಕ್ಕಳನ್ನು ದಾಖಲಿಸುವುದು ಸಂವಿಧಾನದ 28(3) ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಪಾಲಕರ ಒಪ್ಪಿಗೆಯಿಲ್ಲದೆ ಮಕ್ಕಳನ್ನು ಯಾವುದೇ ಧಾರ್ಮಿಕ ಬೋಧನೆಯ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ ಕಡ್ಡಾಯಗೊಳಿಸುವುದನ್ನು ನಿಷೇಧಿಸಲಾಗುತ್ತದೆ ಎಂದು ಅದು ಹೇಳಿತ್ತು.

ಮಕ್ಕಳಿಗೆ ಧಾರ್ಮಿಕ ಶಿಕ್ಷಣವನ್ನು ನೀಡುವಲ್ಲಿ ಮದರಸಾಗಳು ಪ್ರಾಥಮಿಕವಾಗಿ ಜವಾಬ್ದಾರರಾಗಿದ್ದಾರೆ. ಸರ್ಕಾರದಿಂದ ಅನುದಾನಿತ ಅಥವಾ ಮಾನ್ಯತೆ ಪಡೆದ ಮದರಸಾಗಳು ಧಾರ್ಮಿಕ ಶಿಕ್ಷಣ ಮತ್ತು ಸ್ವಲ್ಪ ಮಟ್ಟಿಗೆ ಔಪಚಾರಿಕ ಶಿಕ್ಷಣವನ್ನು ನೀಡುತ್ತಿವೆ ಎಂದು ಆಯೋಗ ಹೇಳಿದೆ.

ಆಯೋಗದ ಅಧ್ಯಕ್ಷರಾದ ಪ್ರಿಯಾಂಕ್ ಕಾನೂಂಗೊ ಮಾತನಾಡಿ, ಮಕ್ಕಳ ಹಕ್ಕುಗಳ ಸಂಸ್ಥೆಯು ಕಳೆದ ಒಂದು ವರ್ಷದಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮದರಸಾಗಳಿಗೆ ಹೋಗುವ ಅಥವಾ ಮದರಸಾಗಳಲ್ಲಿ ವಾಸಿಸುವ ಮುಸ್ಲಿಮೇತರ ಮಕ್ಕಳನ್ನು ಗುರುತಿಸಲು ಮತ್ತು ಅವರನ್ನು ಶಾಲೆಗಳಿಗೆ ಸ್ಥಳಾಂತರಿಸಲು ಸೂಚಿಸಿದೆ ಮತ್ತು ಮದರಸಾಗಳಲ್ಲಿ ದಾಖಲಾದ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದೆ. ಆದರೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ನಿರ್ಲಕ್ಷ್ಯ ವಹಿಸಿದೆ. ಇದರಿಂದಾಗಿ ಎನ್‌ಸಿಪಿಸಿಆರ್ 11 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದೆ ಮತ್ತು ಈ ವಿಷಯದಲ್ಲಿ ಸ್ಪಷ್ಟನೆ ಕೇಳಿದೆ ಎಂದು ಹೇಳಿದೆ.

ಹರ್ಯಾಣ, ಆಂಧ್ರಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮೇಘಾಲಯ ಮತ್ತು ತೆಲಂಗಾಣ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಲಾಗಿದೆ. ಎನ್‌ಸಿಪಿಸಿಆರ್ ಸಮನ್ಸ್‌ನ ಪ್ರತಿಗಳ ಪ್ರಕಾರ, ಮುಖ್ಯ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳದ ಬಗ್ಗೆ ವಿವರಣೆ ನೀಡುವಂತೆ ಮತ್ತು ಮದರಸಾಗಳ ಬಗ್ಗೆ ಕೇಳಿದ ವಿವರಗಳ ಕುರಿತು ಸ್ಪಷ್ಟೀಕರಣದೊಂದಿಗೆ ಆಯೋಗದ ಮುಂದೆ ಖುದ್ದಾಗಿ ಹಾಜರಾಗುವಂತೆ ಕೇಳಲಾಗಿದೆ.

ಹರ್ಯಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 12ರಂದು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗೋವಾದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 15 ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಮುಖ್ಯ ಕಾರ್ಯದರ್ಶಿಗೆ ಜನವರಿ 16ರಂದು ಮತ್ತು ಕರ್ನಾಟಕ ಮತ್ತು ಕೇರಳದವರಿಗೆ ಜನವರಿ 17ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಮಧ್ಯಪ್ರದೇಶ, ಮೇಘಾಲಯ ಮತ್ತು ತೆಲಂಗಾಣದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 18ರಂದು ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇದನ್ನು ಓದಿ: ಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...