Homeಮುಖಪುಟಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

- Advertisement -
- Advertisement -

ಮದರಸಾಗಳಿಗೆ ದಾಖಲಾದ ಮುಸ್ಲಿಮೇತರ ಸಮುದಾಯದ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರಿಸುವಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ಎನ್‌ಸಿಪಿಸಿಆರ್ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಿದೆ.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಸುಮಾರು ಒಂದು ವರ್ಷದ ಹಿಂದೆ ಈ ಬಗ್ಗೆ ನೊಟೀಸ್‌ ನೀಡಿತ್ತು. ಮದರಸಾಗಳಿಗೆ ಮುಸ್ಲಿಮೇತರ ಮಕ್ಕಳನ್ನು ದಾಖಲಿಸುವುದು ಸಂವಿಧಾನದ 28(3) ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಪಾಲಕರ ಒಪ್ಪಿಗೆಯಿಲ್ಲದೆ ಮಕ್ಕಳನ್ನು ಯಾವುದೇ ಧಾರ್ಮಿಕ ಬೋಧನೆಯ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ ಕಡ್ಡಾಯಗೊಳಿಸುವುದನ್ನು ನಿಷೇಧಿಸಲಾಗುತ್ತದೆ ಎಂದು ಅದು ಹೇಳಿತ್ತು.

ಮಕ್ಕಳಿಗೆ ಧಾರ್ಮಿಕ ಶಿಕ್ಷಣವನ್ನು ನೀಡುವಲ್ಲಿ ಮದರಸಾಗಳು ಪ್ರಾಥಮಿಕವಾಗಿ ಜವಾಬ್ದಾರರಾಗಿದ್ದಾರೆ. ಸರ್ಕಾರದಿಂದ ಅನುದಾನಿತ ಅಥವಾ ಮಾನ್ಯತೆ ಪಡೆದ ಮದರಸಾಗಳು ಧಾರ್ಮಿಕ ಶಿಕ್ಷಣ ಮತ್ತು ಸ್ವಲ್ಪ ಮಟ್ಟಿಗೆ ಔಪಚಾರಿಕ ಶಿಕ್ಷಣವನ್ನು ನೀಡುತ್ತಿವೆ ಎಂದು ಆಯೋಗ ಹೇಳಿದೆ.

ಆಯೋಗದ ಅಧ್ಯಕ್ಷರಾದ ಪ್ರಿಯಾಂಕ್ ಕಾನೂಂಗೊ ಮಾತನಾಡಿ, ಮಕ್ಕಳ ಹಕ್ಕುಗಳ ಸಂಸ್ಥೆಯು ಕಳೆದ ಒಂದು ವರ್ಷದಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮದರಸಾಗಳಿಗೆ ಹೋಗುವ ಅಥವಾ ಮದರಸಾಗಳಲ್ಲಿ ವಾಸಿಸುವ ಮುಸ್ಲಿಮೇತರ ಮಕ್ಕಳನ್ನು ಗುರುತಿಸಲು ಮತ್ತು ಅವರನ್ನು ಶಾಲೆಗಳಿಗೆ ಸ್ಥಳಾಂತರಿಸಲು ಸೂಚಿಸಿದೆ ಮತ್ತು ಮದರಸಾಗಳಲ್ಲಿ ದಾಖಲಾದ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದೆ. ಆದರೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ನಿರ್ಲಕ್ಷ್ಯ ವಹಿಸಿದೆ. ಇದರಿಂದಾಗಿ ಎನ್‌ಸಿಪಿಸಿಆರ್ 11 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದೆ ಮತ್ತು ಈ ವಿಷಯದಲ್ಲಿ ಸ್ಪಷ್ಟನೆ ಕೇಳಿದೆ ಎಂದು ಹೇಳಿದೆ.

ಹರ್ಯಾಣ, ಆಂಧ್ರಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮೇಘಾಲಯ ಮತ್ತು ತೆಲಂಗಾಣ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಲಾಗಿದೆ. ಎನ್‌ಸಿಪಿಸಿಆರ್ ಸಮನ್ಸ್‌ನ ಪ್ರತಿಗಳ ಪ್ರಕಾರ, ಮುಖ್ಯ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳದ ಬಗ್ಗೆ ವಿವರಣೆ ನೀಡುವಂತೆ ಮತ್ತು ಮದರಸಾಗಳ ಬಗ್ಗೆ ಕೇಳಿದ ವಿವರಗಳ ಕುರಿತು ಸ್ಪಷ್ಟೀಕರಣದೊಂದಿಗೆ ಆಯೋಗದ ಮುಂದೆ ಖುದ್ದಾಗಿ ಹಾಜರಾಗುವಂತೆ ಕೇಳಲಾಗಿದೆ.

ಹರ್ಯಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 12ರಂದು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗೋವಾದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 15 ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಮುಖ್ಯ ಕಾರ್ಯದರ್ಶಿಗೆ ಜನವರಿ 16ರಂದು ಮತ್ತು ಕರ್ನಾಟಕ ಮತ್ತು ಕೇರಳದವರಿಗೆ ಜನವರಿ 17ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಮಧ್ಯಪ್ರದೇಶ, ಮೇಘಾಲಯ ಮತ್ತು ತೆಲಂಗಾಣದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 18ರಂದು ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇದನ್ನು ಓದಿ: ಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...