Homeಮುಖಪುಟಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

ಮದರಸಾಗಳಲ್ಲಿನ ಮುಸ್ಲಿಮೇತರ ಮಕ್ಕಳ ಬಗ್ಗೆ ಮಾಹಿತಿ ನೀಡದ 11 ರಾಜ್ಯಗಳ ಕಾರ್ಯದರ್ಶಿಗಳಿಗೆ NCPCR ಸಮನ್ಸ್‌

- Advertisement -
- Advertisement -

ಮದರಸಾಗಳಿಗೆ ದಾಖಲಾದ ಮುಸ್ಲಿಮೇತರ ಸಮುದಾಯದ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರಿಸುವಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಮಕ್ಕಳ ಹಕ್ಕುಗಳ ಸಂಸ್ಥೆ ಎನ್‌ಸಿಪಿಸಿಆರ್ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಿದೆ.

ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಸುಮಾರು ಒಂದು ವರ್ಷದ ಹಿಂದೆ ಈ ಬಗ್ಗೆ ನೊಟೀಸ್‌ ನೀಡಿತ್ತು. ಮದರಸಾಗಳಿಗೆ ಮುಸ್ಲಿಮೇತರ ಮಕ್ಕಳನ್ನು ದಾಖಲಿಸುವುದು ಸಂವಿಧಾನದ 28(3) ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದೆ. ಪಾಲಕರ ಒಪ್ಪಿಗೆಯಿಲ್ಲದೆ ಮಕ್ಕಳನ್ನು ಯಾವುದೇ ಧಾರ್ಮಿಕ ಬೋಧನೆಯ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆ ಕಡ್ಡಾಯಗೊಳಿಸುವುದನ್ನು ನಿಷೇಧಿಸಲಾಗುತ್ತದೆ ಎಂದು ಅದು ಹೇಳಿತ್ತು.

ಮಕ್ಕಳಿಗೆ ಧಾರ್ಮಿಕ ಶಿಕ್ಷಣವನ್ನು ನೀಡುವಲ್ಲಿ ಮದರಸಾಗಳು ಪ್ರಾಥಮಿಕವಾಗಿ ಜವಾಬ್ದಾರರಾಗಿದ್ದಾರೆ. ಸರ್ಕಾರದಿಂದ ಅನುದಾನಿತ ಅಥವಾ ಮಾನ್ಯತೆ ಪಡೆದ ಮದರಸಾಗಳು ಧಾರ್ಮಿಕ ಶಿಕ್ಷಣ ಮತ್ತು ಸ್ವಲ್ಪ ಮಟ್ಟಿಗೆ ಔಪಚಾರಿಕ ಶಿಕ್ಷಣವನ್ನು ನೀಡುತ್ತಿವೆ ಎಂದು ಆಯೋಗ ಹೇಳಿದೆ.

ಆಯೋಗದ ಅಧ್ಯಕ್ಷರಾದ ಪ್ರಿಯಾಂಕ್ ಕಾನೂಂಗೊ ಮಾತನಾಡಿ, ಮಕ್ಕಳ ಹಕ್ಕುಗಳ ಸಂಸ್ಥೆಯು ಕಳೆದ ಒಂದು ವರ್ಷದಿಂದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮದರಸಾಗಳಿಗೆ ಹೋಗುವ ಅಥವಾ ಮದರಸಾಗಳಲ್ಲಿ ವಾಸಿಸುವ ಮುಸ್ಲಿಮೇತರ ಮಕ್ಕಳನ್ನು ಗುರುತಿಸಲು ಮತ್ತು ಅವರನ್ನು ಶಾಲೆಗಳಿಗೆ ಸ್ಥಳಾಂತರಿಸಲು ಸೂಚಿಸಿದೆ ಮತ್ತು ಮದರಸಾಗಳಲ್ಲಿ ದಾಖಲಾದ ಮಕ್ಕಳಿಗೆ ಮೂಲಭೂತ ಶಿಕ್ಷಣವನ್ನು ಒದಗಿಸಲು ವ್ಯವಸ್ಥೆ ಮಾಡುವಂತೆ ಕೇಳಿಕೊಂಡಿದೆ. ಆದರೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ನಿರ್ಲಕ್ಷ್ಯ ವಹಿಸಿದೆ. ಇದರಿಂದಾಗಿ ಎನ್‌ಸಿಪಿಸಿಆರ್ 11 ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿದೆ ಮತ್ತು ಈ ವಿಷಯದಲ್ಲಿ ಸ್ಪಷ್ಟನೆ ಕೇಳಿದೆ ಎಂದು ಹೇಳಿದೆ.

ಹರ್ಯಾಣ, ಆಂಧ್ರಪ್ರದೇಶ, ಛತ್ತೀಸ್‌ಗಢ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಗೋವಾ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮೇಘಾಲಯ ಮತ್ತು ತೆಲಂಗಾಣ ಮುಖ್ಯ ಕಾರ್ಯದರ್ಶಿಗಳಿಗೆ ಸಮನ್ಸ್ ನೀಡಲಾಗಿದೆ. ಎನ್‌ಸಿಪಿಸಿಆರ್ ಸಮನ್ಸ್‌ನ ಪ್ರತಿಗಳ ಪ್ರಕಾರ, ಮುಖ್ಯ ಕಾರ್ಯದರ್ಶಿಗಳು ಕ್ರಮ ಕೈಗೊಳ್ಳದ ಬಗ್ಗೆ ವಿವರಣೆ ನೀಡುವಂತೆ ಮತ್ತು ಮದರಸಾಗಳ ಬಗ್ಗೆ ಕೇಳಿದ ವಿವರಗಳ ಕುರಿತು ಸ್ಪಷ್ಟೀಕರಣದೊಂದಿಗೆ ಆಯೋಗದ ಮುಂದೆ ಖುದ್ದಾಗಿ ಹಾಜರಾಗುವಂತೆ ಕೇಳಲಾಗಿದೆ.

ಹರ್ಯಾಣ, ಆಂಧ್ರಪ್ರದೇಶ ಮತ್ತು ಛತ್ತೀಸ್‌ಗಢದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 12ರಂದು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಗೋವಾದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 15 ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಜಾರ್ಖಂಡ್ ಮುಖ್ಯ ಕಾರ್ಯದರ್ಶಿಗೆ ಜನವರಿ 16ರಂದು ಮತ್ತು ಕರ್ನಾಟಕ ಮತ್ತು ಕೇರಳದವರಿಗೆ ಜನವರಿ 17ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಮಧ್ಯಪ್ರದೇಶ, ಮೇಘಾಲಯ ಮತ್ತು ತೆಲಂಗಾಣದ ಮುಖ್ಯ ಕಾರ್ಯದರ್ಶಿಗಳಿಗೆ ಜನವರಿ 18ರಂದು ಆಯೋಗದ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.

ಇದನ್ನು ಓದಿ: ಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...