Homeಕರ್ನಾಟಕಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ., ಬಿ.ಟಿ.ವಿ., ಈ.ಟಿ.ವಿ. ಭಾರತ್‌ ಪ್ರತಿನಿಧಿಗಳಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಹಿಜಾಬ್‌- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಶಿವಮೊಗ್ಗದಲ್ಲಿ ವರದಿಗಾರರೊಬ್ಬರು ಮಗುವೊಂದನ್ನು ಓಡಿಸಿಕೊಂಡು ಹೋಗಿ ಫೋಟೋ ತೆಗೆದದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು ಮಾಧ್ಯಮಗಳ ಪತ್ರಕರ್ತರಿಗೆ ಸೂಚನೆ ನೀಡಿತ್ತು. ಸಮಿತಿಯ ಮುಂದೆ ಹಾಜರಾದ ಪತ್ರಕರ್ತರು ತಪ್ಪೊಪ್ಪಿಗೆ ಮುಚ್ಚಳಿಕೆ ಬರೆದಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಹಾಗೂ ಪೋಷಣೆ) 2015ರ ಸೆಕ್ಷನ್‌ 29ರ ಅಡಿಯಲ್ಲಿ ರಚಿತವಾಗಿರುವ ಸಮಿತಿಯು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಆಯ್ದ ಮಾಧ್ಯಮಗಳ ಪತ್ರಕರ್ತರಿಗೆ ಬುದ್ಧಿ ಹೇಳಿದೆ.

ದಿನಾಂಕ 17.02.2022ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸಂಬಂಧಪಟ್ಟ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಜರಾಗಲು ಕ್ರಮವಹಿಸುವಂತೆ ಸೂಚಿಸಿತ್ತು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ದೃಶ್ಯಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಸಮಿತಿಯ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯಾದ್ಯಂತ ಸುದ್ದಿಯಾಗಿರುವ, ವಿದ್ಯಾರ್ಥಿ ಸಮುದಾಯದಲ್ಲಿ ಗೊಂದಲಕ್ಕೆಡೆ ಮಾಡಿಕೊಟ್ಟ ‘ಹಿಜಾಬ್‌’ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮದವರು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯವನ್ನು ಗಮನಿಸಲಾಗಿದೆ. ಮಕ್ಕಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿದ ದೃಶ್ಯವನ್ನು ಗಮನಿಸಿದ್ದು ಇದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್‌ 75ರ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಕೆಲವು ಟಿ.ವಿ.ಚಾನೆಲ್‌ಗಳು ಶಿವಮೊಗ್ಗ ಶಾಲೆಗಳಿಂದ ನೇರ ಪ್ರಸಾರ ಮಾಡಿವೆ ಎಂದು ಸಮಿತಿ ತಿಳಿಸಿತ್ತು.

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ. ಮತ್ತು ಬಿ.ಟಿ.ವಿ. ಚಾನೆಲ್‌ಗಳಲ್ಲಿ ದೃಶ್ಯಗಳು ಬಿತ್ತರಗೊಂಡಿವೆ. ಈ ವಿಷಯ ತುರ್ತು ಇದ್ದು, ಸದರಿ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು, ಕ್ಯಾಮೆರಾಮನ್‌ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ಲಭ್ಯವಿಲ್ಲದ ಕಾರಣ ವೈಯಕ್ತಿಕವಾಗಿ ಪತ್ರ ವ್ಯವಹರಿಸಲು ಸಮಯ ಕಡಿಮೆ ಇರುವುದರಿಂದ ಸಂಬಂಧಪಟ್ಟ ಮಾಧ್ಯಮದವರು ತುರ್ತಾಗಿ ದಿನಾಂಕ 18.02.2022ರಂದು ಬೆಳಿಗ್ಗೆ 11 ಗಂಟೆಗೆ ಸಮಿತಿ ಎದುರು ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ವಾರ್ತಾ ಇಲಾಖೆಗೆ ಸಮಿತಿ ಪತ್ರ ಬರೆದಿತ್ತು.

ಸಮಿತಿಯ ಸೂಚನೆಯ ಮೇರೆಗೆ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಪಟ್ಟ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದರು. ಸಭೆ ಹಾಜರಾದ ಪತ್ರಕರ್ತರು ಮತ್ತೆ ಕಾನೂನು ಉಲ್ಲಂಘಿಸದಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಸಭೆಗೆ ಹಾಜರಾಗಿದ್ದ, ಹೆಸರು ಹೇಳಲಿಚ್ಛಿಸದ ಪತ್ರಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಎಂ.ರೇಖಾ, “ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಮತ್ತೆ ಮಾಡದಂತೆ ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಹೊಸದಾಗಿ ಪತ್ರಿಕೋದ್ಯಮಕ್ಕೆ ಬಂದವರಿರುತ್ತಾರೆ. ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವಿರುವುದಿಲ್ಲ. ಕೆಲವರು ಹೊಸ ಕಾಯ್ದೆಗಳ ಕುರಿತು ಅಪ್‌ಡೇಟ್ ಆಗಿರುವುದಿಲ್ಲ. ಮುಂದೆ ತೊಂದರೆಯಾಗಬಾರದು. ಅರಿವು ಮೂಡಿಸುವ ಕಾರಣಕ್ಕೆ ಅವರನ್ನು ಕರೆಸಲಾಗಿತ್ತು” ಎಂದು ತಿಳಿಸಿದರು.

“ಕಾನೂನು ಉಲ್ಲಂಘಿಸಿದ ಬಳಿಕ, ನಾಳೆ ನ್ಯಾಯಾಲಯದ ಎದುರು ನಮಗೆ ಕಾನೂನು ಗೊತ್ತಿರಲಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ” ಎಂದ ಅವರು, “ನೋಟಿಸ್‌ ನೀಡಲಾಗಿದ್ದ ಎಲ್ಲ ಮಾಧ್ಯಮದವರು ಹಾಗೂ ಇತರ ಸ್ಥಳೀಯ ಮಾಧ್ಯಮಗಳ ಪ್ರತಿನಿಧಿಗಳು ಹಾಜರಾಗಿದ್ದರು” ಎಂದು ಮಾಹಿತಿ ನೀಡಿದರು.

“ಹಿಜಾಬ್‌ ಬೇಕೋ, ಶಿಕ್ಷಣ ಬೇಕೋ ಎಂದು ಮಕ್ಕಳಲ್ಲಿ ಪ್ರಶ್ನಿಸುವುದು ಸರಿಯಲ್ಲ ಎಂದು ಮಾಧ್ಯಮದವರಿಗೆ ಮನವರಿಕೆ ಮಾಡಿದ್ದೇವೆ. ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಏನೇನೋ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದರೆ ಅವರು ಮುಖ್ಯವಾಹಿನಿಗೆ ಬರುವುದೇ ಕಷ್ಟವಾಗುತ್ತದೆ. ದೇಶದ ಭವಿಷ್ಯವೇ ಮಕ್ಕಳು. ಹೀಗಾಗಿ ನಾವು ಮಕ್ಕಳ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು” ಎಂದು ಅವರು ಮನವಿ ಮಾಡಿದರು.

“ನಿಷೇದಾಜ್ಞೆ ಜಾರಿ ಮಾಡಿದರೂ ಶಾಲಾ ಕಾಲೇಜುಗಳ ಬಳಿ ಮಾಧ್ಯಮದವರು ಹೋಗಿದ್ದಾರೆ. ಈ ಕುರಿತೂ ಮನವರಿಕೆ ಮಾಡಿದ್ದೇವೆ. ವಿಶ್ವ ಮಕ್ಕಳ ಒಡಂಬಡಿಕೆಯಿಂದ ಹಿಡಿದು ಇತ್ತೀಚಿನ ಕಾನೂನಿನವರೆಗೂ ತಿಳಿಸಿದ್ದೇವೆ. ನಿಮಗೆ ಬಿಡುವಾದಾಗ ಎರಡು ಗಂಟೆ ಸಮಯವನ್ನು ನಮಗೆ ನೀಡಿ. ನಾವು ಬಂದು ನಿಮಗೆ ಮಕ್ಕಳ ಹಕ್ಕುಗಳ ಕುರಿತು ಮಾರ್ಗದರ್ಶನ ಮಾಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದೇವೆ. ಅರಿವಿನ ಕೊರತೆಯಿಂದ ಹೀಗಾಗುತ್ತದೆ. ನಾಳೆ ನೀವು ಕಷ್ಟಕ್ಕೆ ಸಿಲುಕಿಕೊಂಡು ಒದ್ದಾಡಬೇಡಿ ಎಂದೂ ಎಚ್ಚರಿಕೆಯನ್ನು ಕೊಟ್ಟಿದ್ದೇವೆ” ಎಂದು ಅವರು ವಿವರಿಸಿದರು.

“ಮತ್ತೆ ಇದೇ ತಪ್ಪು ಪುನಾರಾವರ್ತನೆಯಾದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇವೆ” ಎಂದು ರೇಖಾ ಅವರು ಮಾತು ಮುಗಿಸಿದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...