Homeಕರ್ನಾಟಕಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ., ಬಿ.ಟಿ.ವಿ., ಈ.ಟಿ.ವಿ. ಭಾರತ್‌ ಪ್ರತಿನಿಧಿಗಳಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಹಿಜಾಬ್‌- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಶಿವಮೊಗ್ಗದಲ್ಲಿ ವರದಿಗಾರರೊಬ್ಬರು ಮಗುವೊಂದನ್ನು ಓಡಿಸಿಕೊಂಡು ಹೋಗಿ ಫೋಟೋ ತೆಗೆದದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು ಮಾಧ್ಯಮಗಳ ಪತ್ರಕರ್ತರಿಗೆ ಸೂಚನೆ ನೀಡಿತ್ತು. ಸಮಿತಿಯ ಮುಂದೆ ಹಾಜರಾದ ಪತ್ರಕರ್ತರು ತಪ್ಪೊಪ್ಪಿಗೆ ಮುಚ್ಚಳಿಕೆ ಬರೆದಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಹಾಗೂ ಪೋಷಣೆ) 2015ರ ಸೆಕ್ಷನ್‌ 29ರ ಅಡಿಯಲ್ಲಿ ರಚಿತವಾಗಿರುವ ಸಮಿತಿಯು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಆಯ್ದ ಮಾಧ್ಯಮಗಳ ಪತ್ರಕರ್ತರಿಗೆ ಬುದ್ಧಿ ಹೇಳಿದೆ.

ದಿನಾಂಕ 17.02.2022ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸಂಬಂಧಪಟ್ಟ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಜರಾಗಲು ಕ್ರಮವಹಿಸುವಂತೆ ಸೂಚಿಸಿತ್ತು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ದೃಶ್ಯಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಸಮಿತಿಯ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯಾದ್ಯಂತ ಸುದ್ದಿಯಾಗಿರುವ, ವಿದ್ಯಾರ್ಥಿ ಸಮುದಾಯದಲ್ಲಿ ಗೊಂದಲಕ್ಕೆಡೆ ಮಾಡಿಕೊಟ್ಟ ‘ಹಿಜಾಬ್‌’ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮದವರು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯವನ್ನು ಗಮನಿಸಲಾಗಿದೆ. ಮಕ್ಕಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿದ ದೃಶ್ಯವನ್ನು ಗಮನಿಸಿದ್ದು ಇದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್‌ 75ರ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಕೆಲವು ಟಿ.ವಿ.ಚಾನೆಲ್‌ಗಳು ಶಿವಮೊಗ್ಗ ಶಾಲೆಗಳಿಂದ ನೇರ ಪ್ರಸಾರ ಮಾಡಿವೆ ಎಂದು ಸಮಿತಿ ತಿಳಿಸಿತ್ತು.

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ. ಮತ್ತು ಬಿ.ಟಿ.ವಿ. ಚಾನೆಲ್‌ಗಳಲ್ಲಿ ದೃಶ್ಯಗಳು ಬಿತ್ತರಗೊಂಡಿವೆ. ಈ ವಿಷಯ ತುರ್ತು ಇದ್ದು, ಸದರಿ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು, ಕ್ಯಾಮೆರಾಮನ್‌ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ಲಭ್ಯವಿಲ್ಲದ ಕಾರಣ ವೈಯಕ್ತಿಕವಾಗಿ ಪತ್ರ ವ್ಯವಹರಿಸಲು ಸಮಯ ಕಡಿಮೆ ಇರುವುದರಿಂದ ಸಂಬಂಧಪಟ್ಟ ಮಾಧ್ಯಮದವರು ತುರ್ತಾಗಿ ದಿನಾಂಕ 18.02.2022ರಂದು ಬೆಳಿಗ್ಗೆ 11 ಗಂಟೆಗೆ ಸಮಿತಿ ಎದುರು ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ವಾರ್ತಾ ಇಲಾಖೆಗೆ ಸಮಿತಿ ಪತ್ರ ಬರೆದಿತ್ತು.

ಸಮಿತಿಯ ಸೂಚನೆಯ ಮೇರೆಗೆ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಪಟ್ಟ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದರು. ಸಭೆ ಹಾಜರಾದ ಪತ್ರಕರ್ತರು ಮತ್ತೆ ಕಾನೂನು ಉಲ್ಲಂಘಿಸದಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಸಭೆಗೆ ಹಾಜರಾಗಿದ್ದ, ಹೆಸರು ಹೇಳಲಿಚ್ಛಿಸದ ಪತ್ರಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಎಂ.ರೇಖಾ, “ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಮತ್ತೆ ಮಾಡದಂತೆ ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಹೊಸದಾಗಿ ಪತ್ರಿಕೋದ್ಯಮಕ್ಕೆ ಬಂದವರಿರುತ್ತಾರೆ. ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವಿರುವುದಿಲ್ಲ. ಕೆಲವರು ಹೊಸ ಕಾಯ್ದೆಗಳ ಕುರಿತು ಅಪ್‌ಡೇಟ್ ಆಗಿರುವುದಿಲ್ಲ. ಮುಂದೆ ತೊಂದರೆಯಾಗಬಾರದು. ಅರಿವು ಮೂಡಿಸುವ ಕಾರಣಕ್ಕೆ ಅವರನ್ನು ಕರೆಸಲಾಗಿತ್ತು” ಎಂದು ತಿಳಿಸಿದರು.

“ಕಾನೂನು ಉಲ್ಲಂಘಿಸಿದ ಬಳಿಕ, ನಾಳೆ ನ್ಯಾಯಾಲಯದ ಎದುರು ನಮಗೆ ಕಾನೂನು ಗೊತ್ತಿರಲಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ” ಎಂದ ಅವರು, “ನೋಟಿಸ್‌ ನೀಡಲಾಗಿದ್ದ ಎಲ್ಲ ಮಾಧ್ಯಮದವರು ಹಾಗೂ ಇತರ ಸ್ಥಳೀಯ ಮಾಧ್ಯಮಗಳ ಪ್ರತಿನಿಧಿಗಳು ಹಾಜರಾಗಿದ್ದರು” ಎಂದು ಮಾಹಿತಿ ನೀಡಿದರು.

“ಹಿಜಾಬ್‌ ಬೇಕೋ, ಶಿಕ್ಷಣ ಬೇಕೋ ಎಂದು ಮಕ್ಕಳಲ್ಲಿ ಪ್ರಶ್ನಿಸುವುದು ಸರಿಯಲ್ಲ ಎಂದು ಮಾಧ್ಯಮದವರಿಗೆ ಮನವರಿಕೆ ಮಾಡಿದ್ದೇವೆ. ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಏನೇನೋ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದರೆ ಅವರು ಮುಖ್ಯವಾಹಿನಿಗೆ ಬರುವುದೇ ಕಷ್ಟವಾಗುತ್ತದೆ. ದೇಶದ ಭವಿಷ್ಯವೇ ಮಕ್ಕಳು. ಹೀಗಾಗಿ ನಾವು ಮಕ್ಕಳ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು” ಎಂದು ಅವರು ಮನವಿ ಮಾಡಿದರು.

“ನಿಷೇದಾಜ್ಞೆ ಜಾರಿ ಮಾಡಿದರೂ ಶಾಲಾ ಕಾಲೇಜುಗಳ ಬಳಿ ಮಾಧ್ಯಮದವರು ಹೋಗಿದ್ದಾರೆ. ಈ ಕುರಿತೂ ಮನವರಿಕೆ ಮಾಡಿದ್ದೇವೆ. ವಿಶ್ವ ಮಕ್ಕಳ ಒಡಂಬಡಿಕೆಯಿಂದ ಹಿಡಿದು ಇತ್ತೀಚಿನ ಕಾನೂನಿನವರೆಗೂ ತಿಳಿಸಿದ್ದೇವೆ. ನಿಮಗೆ ಬಿಡುವಾದಾಗ ಎರಡು ಗಂಟೆ ಸಮಯವನ್ನು ನಮಗೆ ನೀಡಿ. ನಾವು ಬಂದು ನಿಮಗೆ ಮಕ್ಕಳ ಹಕ್ಕುಗಳ ಕುರಿತು ಮಾರ್ಗದರ್ಶನ ಮಾಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದೇವೆ. ಅರಿವಿನ ಕೊರತೆಯಿಂದ ಹೀಗಾಗುತ್ತದೆ. ನಾಳೆ ನೀವು ಕಷ್ಟಕ್ಕೆ ಸಿಲುಕಿಕೊಂಡು ಒದ್ದಾಡಬೇಡಿ ಎಂದೂ ಎಚ್ಚರಿಕೆಯನ್ನು ಕೊಟ್ಟಿದ್ದೇವೆ” ಎಂದು ಅವರು ವಿವರಿಸಿದರು.

“ಮತ್ತೆ ಇದೇ ತಪ್ಪು ಪುನಾರಾವರ್ತನೆಯಾದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇವೆ” ಎಂದು ರೇಖಾ ಅವರು ಮಾತು ಮುಗಿಸಿದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...