Homeಕರ್ನಾಟಕಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಹಿಜಾಬ್‌ ವಿಚಾರದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ: ಕ್ಷಮೆ ಕೇಳಿದ ಟಿವಿ ಚಾನೆಲ್‌ ಪತ್ರಕರ್ತರು

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ., ಬಿ.ಟಿ.ವಿ., ಈ.ಟಿ.ವಿ. ಭಾರತ್‌ ಪ್ರತಿನಿಧಿಗಳಿಗೆ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಹಿಜಾಬ್‌- ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವರದಿ ಮಾಡುತ್ತಿರುವ ಹಲವು ದೃಶ್ಯ ಮಾಧ್ಯಮಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸುತ್ತಿವೆ. ಈ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ.

ಶಿವಮೊಗ್ಗದಲ್ಲಿ ವರದಿಗಾರರೊಬ್ಬರು ಮಗುವೊಂದನ್ನು ಓಡಿಸಿಕೊಂಡು ಹೋಗಿ ಫೋಟೋ ತೆಗೆದದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಕೆಲವು ಮಾಧ್ಯಮಗಳ ಪತ್ರಕರ್ತರಿಗೆ ಸೂಚನೆ ನೀಡಿತ್ತು. ಸಮಿತಿಯ ಮುಂದೆ ಹಾಜರಾದ ಪತ್ರಕರ್ತರು ತಪ್ಪೊಪ್ಪಿಗೆ ಮುಚ್ಚಳಿಕೆ ಬರೆದಿದ್ದಾರೆಂದು ಬಲ್ಲಮೂಲಗಳು ತಿಳಿಸಿವೆ.

ಬಾಲನ್ಯಾಯ ಕಾಯ್ದೆ (ಮಕ್ಕಳ ರಕ್ಷಣೆ ಹಾಗೂ ಪೋಷಣೆ) 2015ರ ಸೆಕ್ಷನ್‌ 29ರ ಅಡಿಯಲ್ಲಿ ರಚಿತವಾಗಿರುವ ಸಮಿತಿಯು ಮಕ್ಕಳ ಹಕ್ಕುಗಳ ಉಲ್ಲಂಘನೆಯ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಆಯ್ದ ಮಾಧ್ಯಮಗಳ ಪತ್ರಕರ್ತರಿಗೆ ಬುದ್ಧಿ ಹೇಳಿದೆ.

ದಿನಾಂಕ 17.02.2022ರಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯು ಸಂಬಂಧಪಟ್ಟ ಕೆಲವು ಮಾಧ್ಯಮ ಪ್ರತಿನಿಧಿಗಳು ಹಾಜರಾಗಲು ಕ್ರಮವಹಿಸುವಂತೆ ಸೂಚಿಸಿತ್ತು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡ ದೃಶ್ಯಗಳು ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿವೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು ಹಾಗೂ ಕ್ಯಾಮೆರಾಮನ್‌ಗಳು ಸಮಿತಿಯ ಮುಂದೆ ಹಾಜರಾಗುವಂತೆ ನಿರ್ದೇಶನ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿತ್ತು.

ರಾಜ್ಯಾದ್ಯಂತ ಸುದ್ದಿಯಾಗಿರುವ, ವಿದ್ಯಾರ್ಥಿ ಸಮುದಾಯದಲ್ಲಿ ಗೊಂದಲಕ್ಕೆಡೆ ಮಾಡಿಕೊಟ್ಟ ‘ಹಿಜಾಬ್‌’ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಮಾಧ್ಯಮದವರು ಮಕ್ಕಳ ಹಕ್ಕುಗಳಿಗೆ ಧಕ್ಕೆ ತರುತ್ತಿದ್ದಾರೆ. ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡ ದೃಶ್ಯವನ್ನು ಗಮನಿಸಲಾಗಿದೆ. ಮಕ್ಕಳಿಗೆ ಮಾನಸಿಕ ತೊಂದರೆಯಾಗುವಂತೆ ಚಿತ್ರೀಕರಿಸಿದ ದೃಶ್ಯವನ್ನು ಗಮನಿಸಿದ್ದು ಇದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್‌ 75ರ ಪ್ರಕಾರ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಕೆಲವು ಟಿ.ವಿ.ಚಾನೆಲ್‌ಗಳು ಶಿವಮೊಗ್ಗ ಶಾಲೆಗಳಿಂದ ನೇರ ಪ್ರಸಾರ ಮಾಡಿವೆ ಎಂದು ಸಮಿತಿ ತಿಳಿಸಿತ್ತು.

ಸುವರ್ಣ ನ್ಯೂಸ್‌, ಟಿ.ವಿ. 9, ದಿಗ್ವಿಜಯ ಟಿವಿ, ಪವರ್ ಟಿವಿ, ನ್ಯೂಸ್‌ ಫಸ್ಟ್‌ ಲೈವ್ ಟಿ.ವಿ., ಪಬ್ಲಿಕ್‌ ಟಿ.ವಿ. ಮತ್ತು ಬಿ.ಟಿ.ವಿ. ಚಾನೆಲ್‌ಗಳಲ್ಲಿ ದೃಶ್ಯಗಳು ಬಿತ್ತರಗೊಂಡಿವೆ. ಈ ವಿಷಯ ತುರ್ತು ಇದ್ದು, ಸದರಿ ಮಾಧ್ಯಮದ ಜಿಲ್ಲಾ ಮುಖ್ಯಸ್ಥರು, ವರದಿಗಾರರು, ಕ್ಯಾಮೆರಾಮನ್‌ಗಳ ವಿಳಾಸ ಮತ್ತು ದೂರವಾಣಿ ಸಂಖ್ಯೆಗಳು ಲಭ್ಯವಿಲ್ಲದ ಕಾರಣ ವೈಯಕ್ತಿಕವಾಗಿ ಪತ್ರ ವ್ಯವಹರಿಸಲು ಸಮಯ ಕಡಿಮೆ ಇರುವುದರಿಂದ ಸಂಬಂಧಪಟ್ಟ ಮಾಧ್ಯಮದವರು ತುರ್ತಾಗಿ ದಿನಾಂಕ 18.02.2022ರಂದು ಬೆಳಿಗ್ಗೆ 11 ಗಂಟೆಗೆ ಸಮಿತಿ ಎದುರು ಹಾಜರಾಗುವಂತೆ ನಿರ್ದೇಶನ ನೀಡಬೇಕು ಎಂದು ವಾರ್ತಾ ಇಲಾಖೆಗೆ ಸಮಿತಿ ಪತ್ರ ಬರೆದಿತ್ತು.

ಸಮಿತಿಯ ಸೂಚನೆಯ ಮೇರೆಗೆ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕರು ಸಂಬಂಧಪಟ್ಟ ಮಾಧ್ಯಮಗಳ ಪ್ರತಿನಿಧಿಗಳಿಗೆ ಸೂಚನೆ ನೀಡಿದ್ದರು. ಸಭೆ ಹಾಜರಾದ ಪತ್ರಕರ್ತರು ಮತ್ತೆ ಕಾನೂನು ಉಲ್ಲಂಘಿಸದಂತೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ ಎಂದು ಸಭೆಗೆ ಹಾಜರಾಗಿದ್ದ, ಹೆಸರು ಹೇಳಲಿಚ್ಛಿಸದ ಪತ್ರಕರ್ತರೊಬ್ಬರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಶಿವಮೊಗ್ಗ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಜಿ.ಎಂ.ರೇಖಾ, “ಮಕ್ಕಳ ಹಕ್ಕುಗಳ ಉಲ್ಲಂಘನೆಯನ್ನು ಮತ್ತೆ ಮಾಡದಂತೆ ಮಾಧ್ಯಮ ಪ್ರತಿನಿಧಿಗಳು ತಿಳಿಸಿದ್ದಾರೆ” ಎಂದು ಸ್ಪಷ್ಟಪಡಿಸಿದರು.

“ಹೊಸದಾಗಿ ಪತ್ರಿಕೋದ್ಯಮಕ್ಕೆ ಬಂದವರಿರುತ್ತಾರೆ. ಅವರಿಗೆ ಮಕ್ಕಳ ಹಕ್ಕುಗಳ ಕುರಿತು ಅರಿವಿರುವುದಿಲ್ಲ. ಕೆಲವರು ಹೊಸ ಕಾಯ್ದೆಗಳ ಕುರಿತು ಅಪ್‌ಡೇಟ್ ಆಗಿರುವುದಿಲ್ಲ. ಮುಂದೆ ತೊಂದರೆಯಾಗಬಾರದು. ಅರಿವು ಮೂಡಿಸುವ ಕಾರಣಕ್ಕೆ ಅವರನ್ನು ಕರೆಸಲಾಗಿತ್ತು” ಎಂದು ತಿಳಿಸಿದರು.

“ಕಾನೂನು ಉಲ್ಲಂಘಿಸಿದ ಬಳಿಕ, ನಾಳೆ ನ್ಯಾಯಾಲಯದ ಎದುರು ನಮಗೆ ಕಾನೂನು ಗೊತ್ತಿರಲಿಲ್ಲ ಎಂದು ವಾದಿಸಲು ಸಾಧ್ಯವಿಲ್ಲ” ಎಂದ ಅವರು, “ನೋಟಿಸ್‌ ನೀಡಲಾಗಿದ್ದ ಎಲ್ಲ ಮಾಧ್ಯಮದವರು ಹಾಗೂ ಇತರ ಸ್ಥಳೀಯ ಮಾಧ್ಯಮಗಳ ಪ್ರತಿನಿಧಿಗಳು ಹಾಜರಾಗಿದ್ದರು” ಎಂದು ಮಾಹಿತಿ ನೀಡಿದರು.

“ಹಿಜಾಬ್‌ ಬೇಕೋ, ಶಿಕ್ಷಣ ಬೇಕೋ ಎಂದು ಮಕ್ಕಳಲ್ಲಿ ಪ್ರಶ್ನಿಸುವುದು ಸರಿಯಲ್ಲ ಎಂದು ಮಾಧ್ಯಮದವರಿಗೆ ಮನವರಿಕೆ ಮಾಡಿದ್ದೇವೆ. ಕೋವಿಡ್‌ನಿಂದಾಗಿ ಎರಡು ವರ್ಷಗಳಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಏನೇನೋ ಕಾರಣಗಳನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿಸಿದರೆ ಅವರು ಮುಖ್ಯವಾಹಿನಿಗೆ ಬರುವುದೇ ಕಷ್ಟವಾಗುತ್ತದೆ. ದೇಶದ ಭವಿಷ್ಯವೇ ಮಕ್ಕಳು. ಹೀಗಾಗಿ ನಾವು ಮಕ್ಕಳ ವಿಚಾರವಾಗಿ ಗಂಭೀರವಾಗಿ ಯೋಚಿಸಬೇಕು” ಎಂದು ಅವರು ಮನವಿ ಮಾಡಿದರು.

“ನಿಷೇದಾಜ್ಞೆ ಜಾರಿ ಮಾಡಿದರೂ ಶಾಲಾ ಕಾಲೇಜುಗಳ ಬಳಿ ಮಾಧ್ಯಮದವರು ಹೋಗಿದ್ದಾರೆ. ಈ ಕುರಿತೂ ಮನವರಿಕೆ ಮಾಡಿದ್ದೇವೆ. ವಿಶ್ವ ಮಕ್ಕಳ ಒಡಂಬಡಿಕೆಯಿಂದ ಹಿಡಿದು ಇತ್ತೀಚಿನ ಕಾನೂನಿನವರೆಗೂ ತಿಳಿಸಿದ್ದೇವೆ. ನಿಮಗೆ ಬಿಡುವಾದಾಗ ಎರಡು ಗಂಟೆ ಸಮಯವನ್ನು ನಮಗೆ ನೀಡಿ. ನಾವು ಬಂದು ನಿಮಗೆ ಮಕ್ಕಳ ಹಕ್ಕುಗಳ ಕುರಿತು ಮಾರ್ಗದರ್ಶನ ಮಾಡುತ್ತೇವೆ ಎಂದು ಮಾಧ್ಯಮದವರಿಗೆ ತಿಳಿಸಿದ್ದೇವೆ. ಅರಿವಿನ ಕೊರತೆಯಿಂದ ಹೀಗಾಗುತ್ತದೆ. ನಾಳೆ ನೀವು ಕಷ್ಟಕ್ಕೆ ಸಿಲುಕಿಕೊಂಡು ಒದ್ದಾಡಬೇಡಿ ಎಂದೂ ಎಚ್ಚರಿಕೆಯನ್ನು ಕೊಟ್ಟಿದ್ದೇವೆ” ಎಂದು ಅವರು ವಿವರಿಸಿದರು.

“ಮತ್ತೆ ಇದೇ ತಪ್ಪು ಪುನಾರಾವರ್ತನೆಯಾದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇವೆ” ಎಂದು ರೇಖಾ ಅವರು ಮಾತು ಮುಗಿಸಿದರು.


ಇದನ್ನೂ ಓದಿರಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...