Homeಮುಖಪುಟಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕಳೆದ ವಾರ ಗೋವಾದ ಬೀಚ್‌ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂತ್ರಸ್ತರು ಮತ್ತು ಅವರ ಹೆತ್ತವರನ್ನೇ ಜವಾಬ್ದಾರರನ್ನಾಗಿಸಿದ್ದು, ತಮ್ಮ ಸರ್ಕಾರ ಮತ್ತು ಪೋಲಿಸರನ್ನು ಅದಕ್ಕೆ ಜವಾಬ್ದಾರಿ ಅಲ್ಲ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಸದನದಲ್ಲಿ ಆಘಾತಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್, ತಡರಾತ್ರಿ ತಮ್ಮ ಮಕ್ಕಳನ್ನು ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸಿದ್ದಾರೆ.

“ಇಡೀ ರಾತ್ರಿ 14 ವರ್ಷದ ಮಕ್ಕಳು ಕಡಲತೀರದಲ್ಲಿದ್ದಾಗ, ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ, ಸರ್ಕಾರ ಮತ್ತು ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಬಾರದು” ಎಂದು ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

‘‘ತಮ್ಮ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವುದು ಪೋಷಕರ ಕರ್ತವ್ಯವಾಗಿದೆ. ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು” ಎಂದು ಪ್ರಮೋದ್ ಹೇಳಿದ್ದಾರೆ.

“ನಾವು ಪೊಲೀಸರನ್ನು ದೂಷಿಸುತ್ತೇವೆ … ಆದರೆ, ಪಾರ್ಟಿಗಾಗಿ ಬೀಚ್‌ಗೆ ಹೋದ 10 ಜನರಲ್ಲಿ, ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಒಟ್ಟು ನಾಲ್ವರು ಇಡೀ ರಾತ್ರಿ ಬೀಚ್‌ನಲ್ಲಿಯೇ ಇದ್ದರು…. ಹದಿಹರೆಯದವರು, ವಿಶೇಷವಾಗಿ ಅಪ್ರಾಪ್ತ ವಯಸ್ಕರು, ಕಡಲತೀರಗಳಲ್ಲಿ ರಾತ್ರಿಗಳನ್ನು ಕಳೆಯಬಾರದು” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯ ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಬಿಜೆಪಿಯ ಆಳ್ವಿಕೆಯ ಗೋವಾ ಮಹಿಳೆಯರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಗೋವಾ ಕಾಂಗ್ರೆಸ್ ವಕ್ತಾರ ಆಲ್ಟೋನ್ ಡಿ ಕೋಸ್ಟಾ ಮುಖ್ಯಮಂತ್ರಿಯವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ. “ರಾತ್ರಿಯಲ್ಲಿ ತಿರುಗಾಡುವಾಗ ನಾವು ಯಾಕೆ ಭಯಪಡಬೇಕು? ಅಪರಾಧಿಗಳು ಜೈಲಿನಲ್ಲಿರಬೇಕು ಮತ್ತು ಕಾನೂನು ಪಾಲಿಸುವ ನಾಗರಿಕರು ಮುಕ್ತವಾಗಿ ಸುತ್ತಾಡಬೇಕು” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಟ್ವೀಟ್ ಮಾಡಿ, “ಇಂತಹ ನುಡಿಮುತ್ತನ್ನು ಆಡಿದ್ದಕ್ಕೆ ಮುಖ್ಯಮಂತ್ರಿ ರಾಜೀನಾಮೆ ನೀಡಿ ತ್ಯಜಿಸಿ ಮನೆಗೆ ಹೋಗಬೇಕು” ಎಂದು ಹೇಳಿದ್ದಾರೆ.

ಗೋವಾದ ಮತ್ತೊಂದು ವಿರೋಧ ಪಕ್ಷವಾದ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯ ಹೇಳಿಕೆಯನ್ನು ‘ಅಸಹ್ಯಕರ’ ಎಂದು ಕರೆದ್ದಾರೆ. “ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಅಸಹ್ಯಕರವಾಗಿದೆ. ನಾಗರಿಕರ ಸುರಕ್ಷತೆಯು ಪೊಲೀಸ್ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ಅದನ್ನು ಒದಗಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿಗೆ ಈ ಹುದ್ದೆಯಲ್ಲಿ ಕುಳಿತುಕೊಳ್ಳಲು ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

“ಗೋವಾ ಮುಖ್ಯಮಂತ್ರಿ ತಮ್ಮ ಮಕ್ಕಳನ್ನು ರಾತ್ರಿಯಲ್ಲಿ ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸುತ್ತಿರುವುದು ಆಘಾತಕಾರಿ… ಇದು ಗೋವಾ ಸುರಕ್ಷಿತವಲ್ಲ ಎಂದು ಹೇಳಿಕೊಳ್ಳುತ್ತಿದೆ. ನಮ್ಮ ಭದ್ರತೆಯನ್ನು ರಾಜ್ಯ ಸರ್ಕಾರವು ನಮಗೆ ಖಾತ್ರಿಪಡಿಸದಿದ್ದರೆ, ಯಾರು ಮಾಡಬಹುದು? ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂದು ಗೋವಾಗೆ ಇತಿಹಾಸವಿದೆ… ಬಿಜೆಪಿ ಆಡಳಿತದಲ್ಲಿ ಆ ಟ್ಯಾಗ್ ಕಳೆದುಹೋಗುತ್ತಿದೆ” ಎಂದು ಸ್ವತಂತ್ರ ಶಾಸಕ ರೋಹನ್ ಖೌಂಟೆ ಟ್ವೀಟ್ ಮಾಡಿದ್ದಾರೆ.

ಒಬ್ಬ ಸರ್ಕಾರಿ ನೌಕರ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಪೊಲೀಸರಂತೆ ಪೋಸ್ ಕೊಟ್ಟು, ಬಾಲಕರನ್ನು ಥಳಿಸಿದ ನಂತರ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆಯು ರಾಜ್ಯ ರಾಜಧಾನಿ ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ಬೆನೌಲಿಮ್ ಬೀಚ್‌ನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಈಗಾಗಲೆ ಬಂಧಿಸಲಾಗಿದೆ.

ಪ್ರಭಾವಿ ವ್ಯಕ್ತಿಯೊಬ್ಬರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬುಧವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ. ಘಟನೆಯ ತನಿಖೆಯ ಮೇಲೆ ಮಂತ್ರಿಯೊಬ್ಬರು ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಮತ್ತೊಬ್ಬರು ಆರೋಪಿಸಿದ್ದಾರೆ.

ಇದನ್ನೂ ಓದಿ: ರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...