Homeಮುಖಪುಟಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕಳೆದ ವಾರ ಗೋವಾದ ಬೀಚ್‌ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂತ್ರಸ್ತರು ಮತ್ತು ಅವರ ಹೆತ್ತವರನ್ನೇ ಜವಾಬ್ದಾರರನ್ನಾಗಿಸಿದ್ದು, ತಮ್ಮ ಸರ್ಕಾರ ಮತ್ತು ಪೋಲಿಸರನ್ನು ಅದಕ್ಕೆ ಜವಾಬ್ದಾರಿ ಅಲ್ಲ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಸದನದಲ್ಲಿ ಆಘಾತಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್, ತಡರಾತ್ರಿ ತಮ್ಮ ಮಕ್ಕಳನ್ನು ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸಿದ್ದಾರೆ.

“ಇಡೀ ರಾತ್ರಿ 14 ವರ್ಷದ ಮಕ್ಕಳು ಕಡಲತೀರದಲ್ಲಿದ್ದಾಗ, ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ, ಸರ್ಕಾರ ಮತ್ತು ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಬಾರದು” ಎಂದು ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

‘‘ತಮ್ಮ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವುದು ಪೋಷಕರ ಕರ್ತವ್ಯವಾಗಿದೆ. ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು” ಎಂದು ಪ್ರಮೋದ್ ಹೇಳಿದ್ದಾರೆ.

“ನಾವು ಪೊಲೀಸರನ್ನು ದೂಷಿಸುತ್ತೇವೆ … ಆದರೆ, ಪಾರ್ಟಿಗಾಗಿ ಬೀಚ್‌ಗೆ ಹೋದ 10 ಜನರಲ್ಲಿ, ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಒಟ್ಟು ನಾಲ್ವರು ಇಡೀ ರಾತ್ರಿ ಬೀಚ್‌ನಲ್ಲಿಯೇ ಇದ್ದರು…. ಹದಿಹರೆಯದವರು, ವಿಶೇಷವಾಗಿ ಅಪ್ರಾಪ್ತ ವಯಸ್ಕರು, ಕಡಲತೀರಗಳಲ್ಲಿ ರಾತ್ರಿಗಳನ್ನು ಕಳೆಯಬಾರದು” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯ ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಬಿಜೆಪಿಯ ಆಳ್ವಿಕೆಯ ಗೋವಾ ಮಹಿಳೆಯರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಗೋವಾ ಕಾಂಗ್ರೆಸ್ ವಕ್ತಾರ ಆಲ್ಟೋನ್ ಡಿ ಕೋಸ್ಟಾ ಮುಖ್ಯಮಂತ್ರಿಯವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ. “ರಾತ್ರಿಯಲ್ಲಿ ತಿರುಗಾಡುವಾಗ ನಾವು ಯಾಕೆ ಭಯಪಡಬೇಕು? ಅಪರಾಧಿಗಳು ಜೈಲಿನಲ್ಲಿರಬೇಕು ಮತ್ತು ಕಾನೂನು ಪಾಲಿಸುವ ನಾಗರಿಕರು ಮುಕ್ತವಾಗಿ ಸುತ್ತಾಡಬೇಕು” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಟ್ವೀಟ್ ಮಾಡಿ, “ಇಂತಹ ನುಡಿಮುತ್ತನ್ನು ಆಡಿದ್ದಕ್ಕೆ ಮುಖ್ಯಮಂತ್ರಿ ರಾಜೀನಾಮೆ ನೀಡಿ ತ್ಯಜಿಸಿ ಮನೆಗೆ ಹೋಗಬೇಕು” ಎಂದು ಹೇಳಿದ್ದಾರೆ.

ಗೋವಾದ ಮತ್ತೊಂದು ವಿರೋಧ ಪಕ್ಷವಾದ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯ ಹೇಳಿಕೆಯನ್ನು ‘ಅಸಹ್ಯಕರ’ ಎಂದು ಕರೆದ್ದಾರೆ. “ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಅಸಹ್ಯಕರವಾಗಿದೆ. ನಾಗರಿಕರ ಸುರಕ್ಷತೆಯು ಪೊಲೀಸ್ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ಅದನ್ನು ಒದಗಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿಗೆ ಈ ಹುದ್ದೆಯಲ್ಲಿ ಕುಳಿತುಕೊಳ್ಳಲು ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

“ಗೋವಾ ಮುಖ್ಯಮಂತ್ರಿ ತಮ್ಮ ಮಕ್ಕಳನ್ನು ರಾತ್ರಿಯಲ್ಲಿ ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸುತ್ತಿರುವುದು ಆಘಾತಕಾರಿ… ಇದು ಗೋವಾ ಸುರಕ್ಷಿತವಲ್ಲ ಎಂದು ಹೇಳಿಕೊಳ್ಳುತ್ತಿದೆ. ನಮ್ಮ ಭದ್ರತೆಯನ್ನು ರಾಜ್ಯ ಸರ್ಕಾರವು ನಮಗೆ ಖಾತ್ರಿಪಡಿಸದಿದ್ದರೆ, ಯಾರು ಮಾಡಬಹುದು? ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂದು ಗೋವಾಗೆ ಇತಿಹಾಸವಿದೆ… ಬಿಜೆಪಿ ಆಡಳಿತದಲ್ಲಿ ಆ ಟ್ಯಾಗ್ ಕಳೆದುಹೋಗುತ್ತಿದೆ” ಎಂದು ಸ್ವತಂತ್ರ ಶಾಸಕ ರೋಹನ್ ಖೌಂಟೆ ಟ್ವೀಟ್ ಮಾಡಿದ್ದಾರೆ.

ಒಬ್ಬ ಸರ್ಕಾರಿ ನೌಕರ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಪೊಲೀಸರಂತೆ ಪೋಸ್ ಕೊಟ್ಟು, ಬಾಲಕರನ್ನು ಥಳಿಸಿದ ನಂತರ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆಯು ರಾಜ್ಯ ರಾಜಧಾನಿ ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ಬೆನೌಲಿಮ್ ಬೀಚ್‌ನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಈಗಾಗಲೆ ಬಂಧಿಸಲಾಗಿದೆ.

ಪ್ರಭಾವಿ ವ್ಯಕ್ತಿಯೊಬ್ಬರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬುಧವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ. ಘಟನೆಯ ತನಿಖೆಯ ಮೇಲೆ ಮಂತ್ರಿಯೊಬ್ಬರು ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಮತ್ತೊಬ್ಬರು ಆರೋಪಿಸಿದ್ದಾರೆ.

ಇದನ್ನೂ ಓದಿ: ರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...