Homeಮುಖಪುಟಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕಳೆದ ವಾರ ಗೋವಾದ ಬೀಚ್‌ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂತ್ರಸ್ತರು ಮತ್ತು ಅವರ ಹೆತ್ತವರನ್ನೇ ಜವಾಬ್ದಾರರನ್ನಾಗಿಸಿದ್ದು, ತಮ್ಮ ಸರ್ಕಾರ ಮತ್ತು ಪೋಲಿಸರನ್ನು ಅದಕ್ಕೆ ಜವಾಬ್ದಾರಿ ಅಲ್ಲ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಸದನದಲ್ಲಿ ಆಘಾತಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್, ತಡರಾತ್ರಿ ತಮ್ಮ ಮಕ್ಕಳನ್ನು ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸಿದ್ದಾರೆ.

“ಇಡೀ ರಾತ್ರಿ 14 ವರ್ಷದ ಮಕ್ಕಳು ಕಡಲತೀರದಲ್ಲಿದ್ದಾಗ, ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ, ಸರ್ಕಾರ ಮತ್ತು ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಬಾರದು” ಎಂದು ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

‘‘ತಮ್ಮ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವುದು ಪೋಷಕರ ಕರ್ತವ್ಯವಾಗಿದೆ. ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು” ಎಂದು ಪ್ರಮೋದ್ ಹೇಳಿದ್ದಾರೆ.

“ನಾವು ಪೊಲೀಸರನ್ನು ದೂಷಿಸುತ್ತೇವೆ … ಆದರೆ, ಪಾರ್ಟಿಗಾಗಿ ಬೀಚ್‌ಗೆ ಹೋದ 10 ಜನರಲ್ಲಿ, ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಒಟ್ಟು ನಾಲ್ವರು ಇಡೀ ರಾತ್ರಿ ಬೀಚ್‌ನಲ್ಲಿಯೇ ಇದ್ದರು…. ಹದಿಹರೆಯದವರು, ವಿಶೇಷವಾಗಿ ಅಪ್ರಾಪ್ತ ವಯಸ್ಕರು, ಕಡಲತೀರಗಳಲ್ಲಿ ರಾತ್ರಿಗಳನ್ನು ಕಳೆಯಬಾರದು” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯ ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಬಿಜೆಪಿಯ ಆಳ್ವಿಕೆಯ ಗೋವಾ ಮಹಿಳೆಯರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಗೋವಾ ಕಾಂಗ್ರೆಸ್ ವಕ್ತಾರ ಆಲ್ಟೋನ್ ಡಿ ಕೋಸ್ಟಾ ಮುಖ್ಯಮಂತ್ರಿಯವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ. “ರಾತ್ರಿಯಲ್ಲಿ ತಿರುಗಾಡುವಾಗ ನಾವು ಯಾಕೆ ಭಯಪಡಬೇಕು? ಅಪರಾಧಿಗಳು ಜೈಲಿನಲ್ಲಿರಬೇಕು ಮತ್ತು ಕಾನೂನು ಪಾಲಿಸುವ ನಾಗರಿಕರು ಮುಕ್ತವಾಗಿ ಸುತ್ತಾಡಬೇಕು” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಟ್ವೀಟ್ ಮಾಡಿ, “ಇಂತಹ ನುಡಿಮುತ್ತನ್ನು ಆಡಿದ್ದಕ್ಕೆ ಮುಖ್ಯಮಂತ್ರಿ ರಾಜೀನಾಮೆ ನೀಡಿ ತ್ಯಜಿಸಿ ಮನೆಗೆ ಹೋಗಬೇಕು” ಎಂದು ಹೇಳಿದ್ದಾರೆ.

ಗೋವಾದ ಮತ್ತೊಂದು ವಿರೋಧ ಪಕ್ಷವಾದ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯ ಹೇಳಿಕೆಯನ್ನು ‘ಅಸಹ್ಯಕರ’ ಎಂದು ಕರೆದ್ದಾರೆ. “ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಅಸಹ್ಯಕರವಾಗಿದೆ. ನಾಗರಿಕರ ಸುರಕ್ಷತೆಯು ಪೊಲೀಸ್ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ಅದನ್ನು ಒದಗಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿಗೆ ಈ ಹುದ್ದೆಯಲ್ಲಿ ಕುಳಿತುಕೊಳ್ಳಲು ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

“ಗೋವಾ ಮುಖ್ಯಮಂತ್ರಿ ತಮ್ಮ ಮಕ್ಕಳನ್ನು ರಾತ್ರಿಯಲ್ಲಿ ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸುತ್ತಿರುವುದು ಆಘಾತಕಾರಿ… ಇದು ಗೋವಾ ಸುರಕ್ಷಿತವಲ್ಲ ಎಂದು ಹೇಳಿಕೊಳ್ಳುತ್ತಿದೆ. ನಮ್ಮ ಭದ್ರತೆಯನ್ನು ರಾಜ್ಯ ಸರ್ಕಾರವು ನಮಗೆ ಖಾತ್ರಿಪಡಿಸದಿದ್ದರೆ, ಯಾರು ಮಾಡಬಹುದು? ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂದು ಗೋವಾಗೆ ಇತಿಹಾಸವಿದೆ… ಬಿಜೆಪಿ ಆಡಳಿತದಲ್ಲಿ ಆ ಟ್ಯಾಗ್ ಕಳೆದುಹೋಗುತ್ತಿದೆ” ಎಂದು ಸ್ವತಂತ್ರ ಶಾಸಕ ರೋಹನ್ ಖೌಂಟೆ ಟ್ವೀಟ್ ಮಾಡಿದ್ದಾರೆ.

ಒಬ್ಬ ಸರ್ಕಾರಿ ನೌಕರ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಪೊಲೀಸರಂತೆ ಪೋಸ್ ಕೊಟ್ಟು, ಬಾಲಕರನ್ನು ಥಳಿಸಿದ ನಂತರ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆಯು ರಾಜ್ಯ ರಾಜಧಾನಿ ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ಬೆನೌಲಿಮ್ ಬೀಚ್‌ನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಈಗಾಗಲೆ ಬಂಧಿಸಲಾಗಿದೆ.

ಪ್ರಭಾವಿ ವ್ಯಕ್ತಿಯೊಬ್ಬರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬುಧವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ. ಘಟನೆಯ ತನಿಖೆಯ ಮೇಲೆ ಮಂತ್ರಿಯೊಬ್ಬರು ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಮತ್ತೊಬ್ಬರು ಆರೋಪಿಸಿದ್ದಾರೆ.

ಇದನ್ನೂ ಓದಿ: ರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...