Homeಮುಖಪುಟಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ; ಮಕ್ಕಳ ಸುರಕ್ಷತೆ ಪೋಷಕರ ಕರ್ತವ್ಯ ಎಂದ ಗೋವಾ ಸಿಎಂ!

ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಕಳೆದ ವಾರ ಗೋವಾದ ಬೀಚ್‌ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಇಬ್ಬರು ಅಪ್ರಾಪ್ತ ಬಾಲಕರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಗೋವಾ ಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಘಟನೆಗೆ ಸಂತ್ರಸ್ತರು ಮತ್ತು ಅವರ ಹೆತ್ತವರನ್ನೇ ಜವಾಬ್ದಾರರನ್ನಾಗಿಸಿದ್ದು, ತಮ್ಮ ಸರ್ಕಾರ ಮತ್ತು ಪೋಲಿಸರನ್ನು ಅದಕ್ಕೆ ಜವಾಬ್ದಾರಿ ಅಲ್ಲ ಎಂದು ಅವರು ತಿಳಿಸಿದ್ದಾರೆ.

ನಿನ್ನೆ ಸದನದಲ್ಲಿ ಆಘಾತಕಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್, ತಡರಾತ್ರಿ ತಮ್ಮ ಮಕ್ಕಳನ್ನು ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸಿದ್ದಾರೆ.

“ಇಡೀ ರಾತ್ರಿ 14 ವರ್ಷದ ಮಕ್ಕಳು ಕಡಲತೀರದಲ್ಲಿದ್ದಾಗ, ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ತಮ್ಮ ಮಾತು ಕೇಳುತ್ತಿಲ್ಲ ಎಂಬ ಕಾರಣಕ್ಕೆ, ಸರ್ಕಾರ ಮತ್ತು ಪೊಲೀಸರ ಮೇಲೆ ಜವಾಬ್ದಾರಿಯನ್ನು ಹೊರಿಸಬಾರದು” ಎಂದು ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಗೋವಾ : ಅರವಿಂದ್ ಕೇಜ್ರಿವಾಲ್‌ರಿಂದ ಮತ್ತೆ ಉಚಿತ ವಿದ್ಯುತ್ ಯೋಜನೆ ಘೋಷಣೆ

‘‘ತಮ್ಮ ಮಕ್ಕಳ ಸುರಕ್ಷತೆಯನ್ನು ಖಾತರಿಪಡಿಸುವುದು ಪೋಷಕರ ಕರ್ತವ್ಯವಾಗಿದೆ. ಹುಡುಗಿಯರನ್ನು, ಅದರಲ್ಲೂ ವಿಶೇಷವಾಗಿ ಅವರು ಅಪ್ರಾಪ್ತರಾಗಿದ್ದರೆ, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಹೋಗಲು ಅನುಮತಿಸಬಾರದು” ಎಂದು ಪ್ರಮೋದ್ ಹೇಳಿದ್ದಾರೆ.

“ನಾವು ಪೊಲೀಸರನ್ನು ದೂಷಿಸುತ್ತೇವೆ … ಆದರೆ, ಪಾರ್ಟಿಗಾಗಿ ಬೀಚ್‌ಗೆ ಹೋದ 10 ಜನರಲ್ಲಿ, ಇಬ್ಬರು ಹುಡುಗರು ಮತ್ತು ಇಬ್ಬರು ಹುಡುಗಿಯರು ಒಟ್ಟು ನಾಲ್ವರು ಇಡೀ ರಾತ್ರಿ ಬೀಚ್‌ನಲ್ಲಿಯೇ ಇದ್ದರು…. ಹದಿಹರೆಯದವರು, ವಿಶೇಷವಾಗಿ ಅಪ್ರಾಪ್ತ ವಯಸ್ಕರು, ಕಡಲತೀರಗಳಲ್ಲಿ ರಾತ್ರಿಗಳನ್ನು ಕಳೆಯಬಾರದು” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿಯ ಹೇಳಿಕೆಗೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಬಿಜೆಪಿಯ ಆಳ್ವಿಕೆಯ ಗೋವಾ ಮಹಿಳೆಯರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮೈತ್ರಿಕೂಟದಿಂದ ಹೊರಬಂದ ಗೋವಾ ಮಾಜಿ ಉಪಮುಖ್ಯಮಂತ್ರಿಯ ಪಕ್ಷ!

ಗೋವಾ ಕಾಂಗ್ರೆಸ್ ವಕ್ತಾರ ಆಲ್ಟೋನ್ ಡಿ ಕೋಸ್ಟಾ ಮುಖ್ಯಮಂತ್ರಿಯವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದಾರೆ. “ರಾತ್ರಿಯಲ್ಲಿ ತಿರುಗಾಡುವಾಗ ನಾವು ಯಾಕೆ ಭಯಪಡಬೇಕು? ಅಪರಾಧಿಗಳು ಜೈಲಿನಲ್ಲಿರಬೇಕು ಮತ್ತು ಕಾನೂನು ಪಾಲಿಸುವ ನಾಗರಿಕರು ಮುಕ್ತವಾಗಿ ಸುತ್ತಾಡಬೇಕು” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ಸಿನ ಹಿರಿಯ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡ ಟ್ವೀಟ್ ಮಾಡಿ, “ಇಂತಹ ನುಡಿಮುತ್ತನ್ನು ಆಡಿದ್ದಕ್ಕೆ ಮುಖ್ಯಮಂತ್ರಿ ರಾಜೀನಾಮೆ ನೀಡಿ ತ್ಯಜಿಸಿ ಮನೆಗೆ ಹೋಗಬೇಕು” ಎಂದು ಹೇಳಿದ್ದಾರೆ.

ಗೋವಾದ ಮತ್ತೊಂದು ವಿರೋಧ ಪಕ್ಷವಾದ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ದೇಸಾಯಿ, ಮುಖ್ಯಮಂತ್ರಿಯ ಹೇಳಿಕೆಯನ್ನು ‘ಅಸಹ್ಯಕರ’ ಎಂದು ಕರೆದ್ದಾರೆ. “ಮುಖ್ಯಮಂತ್ರಿ ಇಂತಹ ಹೇಳಿಕೆಗಳನ್ನು ನೀಡುತ್ತಿರುವುದು ಅಸಹ್ಯಕರವಾಗಿದೆ. ನಾಗರಿಕರ ಸುರಕ್ಷತೆಯು ಪೊಲೀಸ್ ಮತ್ತು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ಅದನ್ನು ಒದಗಿಸಲು ಸಾಧ್ಯವಾಗದಿದ್ದರೆ, ಮುಖ್ಯಮಂತ್ರಿಗೆ ಈ ಹುದ್ದೆಯಲ್ಲಿ ಕುಳಿತುಕೊಳ್ಳಲು ಹಕ್ಕಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ, ಗೋವಾದ ಬೀಫ್ ಗೋಮಾತೆಯಲ್ಲವೆ: ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ

“ಗೋವಾ ಮುಖ್ಯಮಂತ್ರಿ ತಮ್ಮ ಮಕ್ಕಳನ್ನು ರಾತ್ರಿಯಲ್ಲಿ ಹೊರಗೆ ಹೋಗಲು ಅನುಮತಿಸಿದ್ದಕ್ಕಾಗಿ ಪೋಷಕರನ್ನು ದೂಷಿಸುತ್ತಿರುವುದು ಆಘಾತಕಾರಿ… ಇದು ಗೋವಾ ಸುರಕ್ಷಿತವಲ್ಲ ಎಂದು ಹೇಳಿಕೊಳ್ಳುತ್ತಿದೆ. ನಮ್ಮ ಭದ್ರತೆಯನ್ನು ರಾಜ್ಯ ಸರ್ಕಾರವು ನಮಗೆ ಖಾತ್ರಿಪಡಿಸದಿದ್ದರೆ, ಯಾರು ಮಾಡಬಹುದು? ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂದು ಗೋವಾಗೆ ಇತಿಹಾಸವಿದೆ… ಬಿಜೆಪಿ ಆಡಳಿತದಲ್ಲಿ ಆ ಟ್ಯಾಗ್ ಕಳೆದುಹೋಗುತ್ತಿದೆ” ಎಂದು ಸ್ವತಂತ್ರ ಶಾಸಕ ರೋಹನ್ ಖೌಂಟೆ ಟ್ವೀಟ್ ಮಾಡಿದ್ದಾರೆ.

ಒಬ್ಬ ಸರ್ಕಾರಿ ನೌಕರ ಸೇರಿದಂತೆ ನಾಲ್ವರು ದುಷ್ಕರ್ಮಿಗಳು ಪೊಲೀಸರಂತೆ ಪೋಸ್ ಕೊಟ್ಟು, ಬಾಲಕರನ್ನು ಥಳಿಸಿದ ನಂತರ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದರು. ಘಟನೆಯು ರಾಜ್ಯ ರಾಜಧಾನಿ ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ಬೆನೌಲಿಮ್ ಬೀಚ್‌ನಲ್ಲಿ ನಡೆದಿದೆ. ನಾಲ್ವರು ಆರೋಪಿಗಳನ್ನು ಈಗಾಗಲೆ ಬಂಧಿಸಲಾಗಿದೆ.

ಪ್ರಭಾವಿ ವ್ಯಕ್ತಿಯೊಬ್ಬರು ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬುಧವಾರ ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ. ಘಟನೆಯ ತನಿಖೆಯ ಮೇಲೆ ಮಂತ್ರಿಯೊಬ್ಬರು ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ ಎಂದು ಮತ್ತೊಬ್ಬರು ಆರೋಪಿಸಿದ್ದಾರೆ.

ಇದನ್ನೂ ಓದಿ: ರ್ನಾಟಕದಿಂದ ಗೋಮಾಂಸ ಆಮದು ಮಾಡಿಕೊಳ್ಳುವುದಾಗಿ ಗೋವಾ ಸಿಎಂ ಹೇಳಿಕೆ: ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...