Homeಮುಖಪುಟಬಾಲ ಗೃಹದಲ್ಲಿ ಬಾಲಕಿಗೆ ಚಪ್ಪಲಿಯಲ್ಲಿ ಥಳಿತ: ವಿಡಿಯೋ ವೈರಲ್

ಬಾಲ ಗೃಹದಲ್ಲಿ ಬಾಲಕಿಗೆ ಚಪ್ಪಲಿಯಲ್ಲಿ ಥಳಿತ: ವಿಡಿಯೋ ವೈರಲ್

- Advertisement -
- Advertisement -

ಉತ್ತರ ಪ್ರದೇಶದ ಆಗ್ರಾದಿಂದ ಶಾಕಿಂಗ್‌ ವಿಡಿಯೋವೊಂದು ವೈರಲ್ ಆಗಿದ್ದು, ಬಾಲ ಗೃಹದಲ್ಲಿ ಅಪ್ರಾಪ್ತ ಬಾಲಕಿಗೆ ಸುಪರಿಂಡೆಂಟ್‌ ಚಪ್ಪಲಿಯಲ್ಲಿ ಥಳಿಸುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಈ ಕುರಿತ ವಿಡಿಯೋ ವೀಕ್ಷಿಸಿದ ಜಿಲ್ಲಾಧಿಕಾರಿಗಳು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾ ಪ್ರೊಬೇಷನರಿ ಅಧಿಕಾರಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಶಿಫಾರಸ್ಸಿನ ಮೇರೆಗೆ ಘಟನೆಗೆ ಸಂಬಂಧಿಸಿ ಮಹಿಳಾ ಕಲ್ಯಾಣ ಇಲಾಖೆಯು ಅದೀಕ್ಷಕಿ ಪೂನಂ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ. ಬಾಲ ಗೃಹಕ್ಕೆ ಜಿಲ್ಲಾ ಪ್ರೊಬೇಷನರಿ ಅಧಿಕಾರಿ ಅಜಯ್‌ ಪಾಲ್‌ ಭೇಟಿ ನೀಡಿದ್ದು, ಮಕ್ಕಳ ಮೇಲಿನ ಈ ರೀತಿಯ ದೌರ್ಜನ್ಯ ಸಹಿಸಲು ಅಸಾಧ್ಯ ಎಂದು ಹೇಳಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಬಾಲಕಿ ಬೆಡ್‌ ಮೇಲೆ ಮಲಗಿರುವುದು ಕಂಡು ಬಂದಿದೆ. ಈ ವೇಳೆ ಬಂದ ಅಧೀಕ್ಷಕಿ ಬಾಲಕಿಗೆ ಚಪ್ಪಲಿಯಲ್ಲಿ ಮನ ಬಂದಂತೆ ಥಳಿಸುವುದು ಕಂಡು ಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪೂನಂ ಪಾಲ್, ನಾನು ಡಿಪಿಒ ಅಜಯ್ ಪಾಲ್ ಸಿಂಗ್ ಅವರಿಗೆ ಈ ಕುರಿತು ವಿವರವನ್ನು ನೀಡಿದ್ದೇನೆ. ನಾನು ಈ ಬಗ್ಗೆ ಬೇರೆ ಏನೂ ಹೇಳುವುದಿಲ್ಲ ಎಂದು  ಹೇಳಿದ್ದಾರೆ.

ಬಾಲಕಿ ಇತರ ಪುಟ್ಟ ಮಕ್ಕಳನ್ನು ಜೊತೆಯಲ್ಲಿ ಕೂರಿಸಿಕೊಂಡು ಪೆಟ್ಟಿಗೆಯೊಂದರಲ್ಲಿ ಅಡಗಿ ಕುಳಿತುಕೊಳ್ಳುತ್ತಿದ್ದಳು. ಬಾಲಕಿ ಇತರ ಮಕ್ಕಳಿಗಿಂತ ದೊಡ್ಡವಳಾಗಿದ್ದಳು. ಈ ರೀತಿಯ ಅಪಾಯಕಾರಿ ಆಟ ಮಕ್ಕಳ ಪ್ರಾಣಕ್ಕೆ ಪ್ರಾಣಕ್ಕೆ ಕುತ್ತು ತರುವ ಸಾಧ್ಯತೆ ಇದ್ದು ಅದಕ್ಕೆ ಥಳಿಸಿರುವುದಾಗಿ ಹೇಳಿದ್ದಾರೆ ಎಂದು ಡಿಪಿಒ ಹೇಳಿದ್ದಾರೆ.

ಅಧೀಕ್ಷಕಿ ಮಕ್ಕಳಿಗೆ ಬುದ್ದಿ ಹೇಳಲು ಈ ರೀತಿ ಮಾಡಿದ್ದಾರೆ. ಆದರೆ ಅವರು ಕೋಪಗೊಂಡು ಚಪ್ಪಲಿಯಲ್ಲಿ ಥಳಿಸಿದ್ದಾರೆ. ಆದರೆ ಚಪ್ಪಲಿಯಲ್ಲಿ ಥಳಿಸಿರುವುದನ್ನು ಯಾವುದೇ ರೀತಿಯಲ್ಲಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಬಾಲ ಗೃಹದ ಇತರ ಸಿಬ್ಬಂದಿಗಳು ಸೆಪ್ಟೆಂಬರ್ 11 ರಂದು ಆಗ್ರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಸಲ್ಲಿಸಿದ ಪತ್ರದಲ್ಲಿ ಅಧೀಕ್ಷಕಿ  ಪೂನಂ ಪಾಲ್,  ಸಿಬ್ಬಂದಿಗಳು  ಮತ್ತು ಮಕ್ಕಳ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಕೇಂದ್ರ ಸಚಿವರನ್ನು ಪಕ್ಷದ ಕಚೇರಿಯಲ್ಲಿ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...