Homeಮುಖಪುಟಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

- Advertisement -
- Advertisement -

ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಮಂಗಳವಾರ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ನಿರ್ಲಕ್ಷ್ಯದ ಕ್ರಮಕ್ಕಾಗಿ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡನ್ನೂ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ

ಮಕ್ಕಳ ಕಳ್ಳಸಾಗಣೆ ಮತ್ತು ಅದರಿಂದ ಉಂಟಾಗುವ ಅಪರಾಧಗಳನ್ನು ತಡೆಗಟ್ಟಲು ಎಲ್ಲಾ ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ನೀಡಿದ್ದು, ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಫತೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಮಗುವಿನ ತಾಯಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ನಿರ್ದೇಶನಗಳನ್ನು ನೀಡಿದೆ.

ಕದ್ದ ಮಗುವನ್ನು – ಆರೋಪಿಯು – ಗಂಡು ಮಗುವನ್ನು ಹೊಂದಲು ಬಯಸುವ ದಂಪತಿಗಳಿಗೆ ನೀಡಿದ ಪ್ರಕರಣ ಇದಾಗಿದೆ.

“ನಾವು ಎಲ್ಲರಿಗೂ, ವಿಶೇಷವಾಗಿ ದೇಶಾದ್ಯಂತದ ಪೋಷಕರಿಗೆ ಒಂದು ಸಂದೇಶವನ್ನು ನೀಡಲು ಬಯಸುತ್ತೇವೆ. ಅವರು ತಮ್ಮ ಮಕ್ಕಳ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು. ಹೆತ್ತವರ ಕಡೆಯಿಂದ ಅಗುವ ಅಲ್ಪ ನಿರ್ಲಕ್ಷ್ಯವೂ ಅತ್ಯಂತ ದುಬಾರಿಯಾಗಬಹುದು.

ಯಾವುದೇ ಪೋಷಕರು ತಮ್ಮ ಮಗು ಸತ್ತಾಗ ಎದುರಿಸಬಹುದಾದ ನೋವು ಮತ್ತು ಸಂಕಟವು ಕಳ್ಳಸಾಗಣೆಯಲ್ಲಿ ತೊಡಗಿರುವ ಅಂತಹ ಗ್ಯಾಂಗ್‌ಗಳಿಗೆ ಕೈಗೆ ಅವರ ಮಕ್ಕಳನ್ನು ಸಿಕ್ಕಾಗ ಅವರು ಅನುಭವಿಸಬಹುದಾದ ನೋವು ಮತ್ತು ಸಂಕಟಕ್ಕಿಂತ ಭಿನ್ನವಾಗಿರುತ್ತದೆ” ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಒಂದು ಮಗು ಸತ್ತಾಗ, ಪೋಷಕರು ಕಾಲಕ್ರಮೇಣ ಸರ್ವಶಕ್ತನ ಇಚ್ಛೆಗೆ ಬಿಟ್ಟಿದ್ದು ಬಿಡಬಹುದು, ಆದರೆ ಮಗು ಕಳೆದುಹೋದಾಗ ಮತ್ತು ಪತ್ತೆಯಾಗದಿದ್ದಾಗ, ಅವರು ತಮ್ಮ ಜೀವನದುದ್ದಕ್ಕೂ ನೋವು ಮತ್ತು ಸಂಕಟವನ್ನು ಅನುಭವಿಸಬೇಕಾಗುತ್ತದೆ. ಅದು ಸಾವಿಗಿಂತ ಕೆಟ್ಟದಾಗಿದೆ. ಆದ್ದರಿಂದ, ಎಲ್ಲರೂ ಬಹಳ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಲು ನಾವು ವಿನಮ್ರವಾಗಿ ಒತ್ತಾಯಿಸುತ್ತೇವೆ ಎಂದು ಸುಪ್ರಿಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಮಂಗಳವಾರ ತನ್ನ ಆದೇಶದಲ್ಲಿ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳ ವಿಚಾರಣೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಕೆಳ ನ್ಯಾಯಾಲಯಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಎಲ್ಲಾ ರಾಜ್ಯ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ.

ಯಾವುದೇ ನವಜಾತ ಶಿಶುವನ್ನು ಯಾವುದೇ ಆಸ್ಪತ್ರೆಯಿಂದ ಕಳ್ಳಸಾಗಣೆ ಮಾಡಿದರೆ, ಕಾನೂನಿನ ಪ್ರಕಾರ ಇತರ ಕ್ರಮಗಳ ಜೊತೆಗೆ, ಆಸ್ಪತ್ರೆಯ ವಿರುದ್ಧದ ತಕ್ಷಣದ ಕ್ರಮವೆಂದರೆ ಅದರ ಕಾರ್ಯಾಚರಣೆಯ ಪರವಾನಗಿಯನ್ನು ಅಮಾನತುಗೊಳಿಸಬೇಕು ಎಂದು ನ್ಯಾಯಾಲಯವು ಹೇಳಿದೆ.

ಯಾವುದೇ ಮಹಿಳೆ ಆಸ್ಪತ್ರೆಯಲ್ಲಿ ತನ್ನ ಮಗುವನ್ನು ಹೆರಿಗೆ ಮಾಡಲು ಬಂದಾಗ, ನವಜಾತ ಶಿಶುವನ್ನು ಎಲ್ಲಾ ರೀತಿಯಲ್ಲೂ ರಕ್ಷಿಸುವುದು ಆಸ್ಪತ್ರೆ ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ ಎಂದು ಕೋರ್ಟ್ ಹೇಳಿದೆ.

ಮಂಗಳವಾರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂಕೋರ್ಟ್ ಅಲಹಾಬಾದ್ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಈ ಪ್ರಕರಣವನ್ನು ನಿಭಾಯಿಸಿದ ರೀತಿಗೆ ತರಾಟೆಗೆ ತೆಗೆದುಕೊಂಡಿದೆ.

“ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನಿರ್ದಯವಾಗಿ ನಿರ್ವಹಿಸಿದ್ದು, ಇದರಿಂದಾಗಿ ಅನೇಕ ಆರೋಪಿಗಳು ಪರಾರಿಯಾಗಿದ್ದಾರೆ. ಈ ಆರೋಪಿಗಳು ಸಮಾಜಕ್ಕೆ ಗಂಭೀರ ಬೆದರಿಕೆ ಒಡ್ಡಿದ್ದಾರೆ” ಎಂದು ಪೀಠವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಉತ್ತರ ಪ್ರದೇಶದ ಸರ್ಕಾರದ ಗಂಭೀರತೆಯನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್, “ಈ ಪ್ರಕರಣವನ್ನು ಉತ್ತರ ಪ್ರದೇಶ ರಾಜ್ಯವು ಹೇಗೆ ನಿರ್ವಹಿಸಿದೆ ಮತ್ತು ಏಕೆ ಮೇಲ್ಮನವಿ ಸಲ್ಲಿಸಲಾಗಿಲ್ಲ ಎಂದು ಕೇಳಿದ್ದು, ಸರ್ಕಾರದ ನಡೆಯ ಬಗ್ಗೆ ನಾವು ಸಂಪೂರ್ಣವಾಗಿ ನಿರಾಶೆಗೊಂಡಿದ್ದೇವೆ ಎಂದು ಹೇಳಿದೆ.

ಪ್ರಕರಣದ ಕೆಲವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...