Homeಮುಖಪುಟಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

ಮಕ್ಕಳ ಕಳ್ಳಸಾಗಣೆ ಪ್ರಕರಣ | ಅಲಹಾಬಾದ್ ಹೈಕೋರ್ಟ್, ಯುಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರಿಂಕೋರ್ಟ್

- Advertisement -
- Advertisement -

ಮಕ್ಕಳ ಕಳ್ಳಸಾಗಣೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಮಂಗಳವಾರ ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ನಿರ್ಲಕ್ಷ್ಯದ ಕ್ರಮಕ್ಕಾಗಿ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರ ಎರಡನ್ನೂ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ

ಮಕ್ಕಳ ಕಳ್ಳಸಾಗಣೆ ಮತ್ತು ಅದರಿಂದ ಉಂಟಾಗುವ ಅಪರಾಧಗಳನ್ನು ತಡೆಗಟ್ಟಲು ಎಲ್ಲಾ ರಾಜ್ಯಗಳಿಗೆ ಮಾರ್ಗಸೂಚಿಗಳನ್ನು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ನೀಡಿದ್ದು, ನಿರ್ದೇಶನಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಫತೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.

ಉತ್ತರ ಪ್ರದೇಶದ ಮಕ್ಕಳ ಕಳ್ಳಸಾಗಣೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಮಗುವಿನ ತಾಯಿ ಸಲ್ಲಿಸಿದ ಅರ್ಜಿಯನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಈ ನಿರ್ದೇಶನಗಳನ್ನು ನೀಡಿದೆ.

ಕದ್ದ ಮಗುವನ್ನು – ಆರೋಪಿಯು – ಗಂಡು ಮಗುವನ್ನು ಹೊಂದಲು ಬಯಸುವ ದಂಪತಿಗಳಿಗೆ ನೀಡಿದ ಪ್ರಕರಣ ಇದಾಗಿದೆ.

“ನಾವು ಎಲ್ಲರಿಗೂ, ವಿಶೇಷವಾಗಿ ದೇಶಾದ್ಯಂತದ ಪೋಷಕರಿಗೆ ಒಂದು ಸಂದೇಶವನ್ನು ನೀಡಲು ಬಯಸುತ್ತೇವೆ. ಅವರು ತಮ್ಮ ಮಕ್ಕಳ ಬಗ್ಗೆ ಅತ್ಯಂತ ಜಾಗರೂಕರಾಗಿರಬೇಕು. ಹೆತ್ತವರ ಕಡೆಯಿಂದ ಅಗುವ ಅಲ್ಪ ನಿರ್ಲಕ್ಷ್ಯವೂ ಅತ್ಯಂತ ದುಬಾರಿಯಾಗಬಹುದು.

ಯಾವುದೇ ಪೋಷಕರು ತಮ್ಮ ಮಗು ಸತ್ತಾಗ ಎದುರಿಸಬಹುದಾದ ನೋವು ಮತ್ತು ಸಂಕಟವು ಕಳ್ಳಸಾಗಣೆಯಲ್ಲಿ ತೊಡಗಿರುವ ಅಂತಹ ಗ್ಯಾಂಗ್‌ಗಳಿಗೆ ಕೈಗೆ ಅವರ ಮಕ್ಕಳನ್ನು ಸಿಕ್ಕಾಗ ಅವರು ಅನುಭವಿಸಬಹುದಾದ ನೋವು ಮತ್ತು ಸಂಕಟಕ್ಕಿಂತ ಭಿನ್ನವಾಗಿರುತ್ತದೆ” ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆ.

ಒಂದು ಮಗು ಸತ್ತಾಗ, ಪೋಷಕರು ಕಾಲಕ್ರಮೇಣ ಸರ್ವಶಕ್ತನ ಇಚ್ಛೆಗೆ ಬಿಟ್ಟಿದ್ದು ಬಿಡಬಹುದು, ಆದರೆ ಮಗು ಕಳೆದುಹೋದಾಗ ಮತ್ತು ಪತ್ತೆಯಾಗದಿದ್ದಾಗ, ಅವರು ತಮ್ಮ ಜೀವನದುದ್ದಕ್ಕೂ ನೋವು ಮತ್ತು ಸಂಕಟವನ್ನು ಅನುಭವಿಸಬೇಕಾಗುತ್ತದೆ. ಅದು ಸಾವಿಗಿಂತ ಕೆಟ್ಟದಾಗಿದೆ. ಆದ್ದರಿಂದ, ಎಲ್ಲರೂ ಬಹಳ ಎಚ್ಚರಿಕೆಯಿಂದ ಮತ್ತು ಜಾಗರೂಕರಾಗಿರಲು ನಾವು ವಿನಮ್ರವಾಗಿ ಒತ್ತಾಯಿಸುತ್ತೇವೆ ಎಂದು ಸುಪ್ರಿಂಕೋರ್ಟ್ ಹೇಳಿದೆ.

ನ್ಯಾಯಮೂರ್ತಿ ಜೆ ಬಿ ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್ ಮಹಾದೇವನ್ ನೇತೃತ್ವದ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಮಂಗಳವಾರ ತನ್ನ ಆದೇಶದಲ್ಲಿ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳ ವಿಚಾರಣೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ಕೆಳ ನ್ಯಾಯಾಲಯಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಎಲ್ಲಾ ರಾಜ್ಯ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ.

ಯಾವುದೇ ನವಜಾತ ಶಿಶುವನ್ನು ಯಾವುದೇ ಆಸ್ಪತ್ರೆಯಿಂದ ಕಳ್ಳಸಾಗಣೆ ಮಾಡಿದರೆ, ಕಾನೂನಿನ ಪ್ರಕಾರ ಇತರ ಕ್ರಮಗಳ ಜೊತೆಗೆ, ಆಸ್ಪತ್ರೆಯ ವಿರುದ್ಧದ ತಕ್ಷಣದ ಕ್ರಮವೆಂದರೆ ಅದರ ಕಾರ್ಯಾಚರಣೆಯ ಪರವಾನಗಿಯನ್ನು ಅಮಾನತುಗೊಳಿಸಬೇಕು ಎಂದು ನ್ಯಾಯಾಲಯವು ಹೇಳಿದೆ.

ಯಾವುದೇ ಮಹಿಳೆ ಆಸ್ಪತ್ರೆಯಲ್ಲಿ ತನ್ನ ಮಗುವನ್ನು ಹೆರಿಗೆ ಮಾಡಲು ಬಂದಾಗ, ನವಜಾತ ಶಿಶುವನ್ನು ಎಲ್ಲಾ ರೀತಿಯಲ್ಲೂ ರಕ್ಷಿಸುವುದು ಆಸ್ಪತ್ರೆ ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ ಎಂದು ಕೋರ್ಟ್ ಹೇಳಿದೆ.

ಮಂಗಳವಾರ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂಕೋರ್ಟ್ ಅಲಹಾಬಾದ್ ಹೈಕೋರ್ಟ್ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಈ ಪ್ರಕರಣವನ್ನು ನಿಭಾಯಿಸಿದ ರೀತಿಗೆ ತರಾಟೆಗೆ ತೆಗೆದುಕೊಂಡಿದೆ.

“ಜಾಮೀನು ಅರ್ಜಿಗಳನ್ನು ಹೈಕೋರ್ಟ್ ನಿರ್ದಯವಾಗಿ ನಿರ್ವಹಿಸಿದ್ದು, ಇದರಿಂದಾಗಿ ಅನೇಕ ಆರೋಪಿಗಳು ಪರಾರಿಯಾಗಿದ್ದಾರೆ. ಈ ಆರೋಪಿಗಳು ಸಮಾಜಕ್ಕೆ ಗಂಭೀರ ಬೆದರಿಕೆ ಒಡ್ಡಿದ್ದಾರೆ” ಎಂದು ಪೀಠವು ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಉತ್ತರ ಪ್ರದೇಶದ ಸರ್ಕಾರದ ಗಂಭೀರತೆಯನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್, “ಈ ಪ್ರಕರಣವನ್ನು ಉತ್ತರ ಪ್ರದೇಶ ರಾಜ್ಯವು ಹೇಗೆ ನಿರ್ವಹಿಸಿದೆ ಮತ್ತು ಏಕೆ ಮೇಲ್ಮನವಿ ಸಲ್ಲಿಸಲಾಗಿಲ್ಲ ಎಂದು ಕೇಳಿದ್ದು, ಸರ್ಕಾರದ ನಡೆಯ ಬಗ್ಗೆ ನಾವು ಸಂಪೂರ್ಣವಾಗಿ ನಿರಾಶೆಗೊಂಡಿದ್ದೇವೆ ಎಂದು ಹೇಳಿದೆ.

ಪ್ರಕರಣದ ಕೆಲವು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ್ದಕ್ಕಾಗಿ ಅಲಹಾಬಾದ್ ಹೈಕೋರ್ಟ್ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮಕ್ಕಳ ಕಳ್ಳಸಾಗಣೆ ಪ್ರಕರಣ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

‘ಆರ್ಥಿಕವಾಗಿ ಸ್ಥಿರವಾಗಿಲ್ಲದವರನ್ನು ಉನ್ನತೀಕರಿಸುವುದೇ ನಮ್ಮ ಗುರಿ..’; ಮೋದಿ ಟೀಕೆಗೆ ಡಿಕೆಶಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...