Homeಕರ್ನಾಟಕತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

ತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

- Advertisement -
- Advertisement -

ಊರೂರು ತಿರುಗಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿದ್ದ ಅಲೆಮಾರಿ ಕುಟುಂಬದ ದಂಪತಿಯ 11 ತಿಂಗಳ ಮಗು ಕಳವು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಇಡೀ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಕಳ್ಳಸಾಗಾಣೆ ಜಾಲವನ್ನೆ ಪತ್ತೆ ಮಾಡಿದ್ದಾರೆ. ಈ ಪ್ರಕರಣದಿಂದ ತುಮಕೂರು ಜನತೆ ಬೆಚ್ಚಿಬಿದ್ದಿದ್ದು, ಈವರೆಗೆ ಐದು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಲೆಮಾರಿ ಕುಟುಂಬದ ಮಗು ಕಳ್ಳತನ ಪ್ರಕರಣದ ತನಿಖೆಯು ತಿರುವು ಪಡೆದುಕೊಂಡಿದ್ದು, ಹಲವು ತಿಂಗಳುಗಳಿಂದ ಸಕ್ರಿಯವಾಗಿದ್ದ ಒಂದೇ ಗುಂಪು, ಬರೊಬ್ಬರಿ 9 ಮಕ್ಕಳನ್ನು ಕಿಡ್ನಾಪ್ ಮಾಡಿದ್ದಾರೆ. ಕದ್ದ ಮಕ್ಕಳನ್ನ 2 ರಿಂದ 3 ಲಕ್ಷ ರೂಪಾಯಿಗೆ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಳುವಾಗಿದ್ದ 9 ಮಕ್ಕಳ ಪೈಕಿ 5 ಮಕ್ಕಳನ್ನ ಪೊಲೀಸರು ರಕ್ಷಿಸಿದ್ದು, ಅದರಲ್ಲಿ 1 ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಇನ್ನುಳಿದ 3 ಮಕ್ಕಳಿಗಾಗಿ ತನಿಖಾ ತಂಡ ಶೋಧಕಾರ್ಯ ಮುಂದುವರಿಸಿದೆ.

ಜಾಲ ಪತ್ತೆಯಾಗಿದ್ದು ಹೇಗೆ..?

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಜುಲೈ ಒಂಬತ್ತರಂದು ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ತಾಲೂಕಿನ ಚೇಳೂರು ಮೂಲದ ಅಲೆಮಾರಿ ಕುಟುಂಬದ ದಂಪತಿಗಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ತಲೆಕೂದಲು ಸಂಗ್ರಹಿಸಿ, ಪಾತ್ರೆ-ಪಡಗ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿದ್ರು. ಅದೇ ರೀತಿ ವ್ಯಾಪಾರ ಮುಗಿಸಿ ಇದೇ ಜೂನ್ 9 ರ ರಾತ್ರಿ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಲಗಿದ್ದಾಗ, ಬೆಳಗಾಗುವಷ್ಟರಲ್ಲಿ ದಂಪತಿಗಳ 11 ತಿಂಗಳ ರಾಕಿ ಎಂಬ ಮಗು ನಾಪತ್ತೆಯಾಗಿದ್ದ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಗೆ ಮಗುವಿನ ಪೋಷಕರು ದೂರು ನೀಡಿದ್ದರು.

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಈ ಮಕ್ಕಳ ಕಳ್ಳರ ಗ್ಯಾಂಗ್, ಗರ್ಭ ಧರಿಸಿದ ಅವಿವಾಹಿತ ಯುವತಿಯರಿಂದ ಮಕ್ಕಳನ್ನ ಖರೀದಿ ಮಾಡುತ್ತಿದ್ದರು ಎನ್ನಲಾಗಿದೆ. ಜತೆಗೆ, ಮಕ್ಕಳ ಕಳ್ಳತನಕ್ಕೂ ಇಳಿದಿದ್ದರು. ಸದ್ಯ ಪ್ರಕರಣ ಸಂಬಂಧ 7 ಜನ ಆರೋಪಿಗಳ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಯು.ಡಿ, ಮಹಬೂಬ್ ಶರೀಫ್, ಕೆ.ಎನ್.ರಾಮಕೃಷ್ಣ, ಹನುನಂತರಾಜು, ಮುಬಾರಕ್ ಪಾಷಾ, ಪೂರ್ಣಿಮಾ ಎನ್. ಹಾಗೂ ಸೌಜನ್ಯ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಒಂದನೆ ಆರೋಪಿ ಮಹೇಶ್, ಈ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಸದ್ಯ ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದಾನೆ‌.

ಗುಬ್ಬಿಯಲ್ಲಿ ಮಗುವನ್ನ ಕಳವು ಮಾಡಿದ್ದ ಮೂರನೇ ಆರೋಪಿ ರಾಮಕೃಷ್ಣ ಹಾಗೂ ನಾಲ್ಕನೇ ಆರೋಪಿ ಹನುಮಂತರಾಜು, ಮಹೇಶ್ ಮೂಲಕ ಮಂಡ್ಯ ಜಿಲ್ಲೆ ಬೆಳ್ಳೂರು ಕ್ರಾಸ್ ಮೂಲದ ದಂಪತಿಗೆ ಮಗು ಮಾರಾಟ ಮಾಡಿದ್ದ. ಕಿಡ್ನಾಪ್ ಆಗಿದ್ದ 11 ತಿಂಗಳ ರಾಕಿಯನ್ನ ಪೊಲೀಸರು ರಕ್ಷಿಸಿ, ಪೋಷಕರಿಗೆ ಒಪ್ಪಿಸಿದ್ದಾರೆ.

ಜಾತ್ರೆಗಳಲ್ಲಿ ಟ್ಯಾಟು ಹಾಕುವ ಕೆಲಸ ಮಾಡ್ತಿದ್ದ ರಾಮಕೃಷ್ಣ ಹಾಗೂ ಹನುಮಂತರಾಜು ಇಬ್ಬರನ್ನೂ ಹಿಡಿದು ತನಿಖೆ ನಡೆಸಿದಾಗ ಮಕ್ಕಳ ಮಾರಾಟ ಜಾಲ ಪ್ರಕರಣ ಬೆಳಕಿಗೆ ಬಂದಿದೆ. ಎರಡನೇ ಆರೋಪಿ ಮಹಬೂಬ್ ಶರೀಫ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನಲ್ಲಿ ತನ್ನ ಪತ್ನಿ ಹೆಸರಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಜೊತೆಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ವಿತರಣಾ ವಿಭಾಗದಲ್ಲಿ ಕೆಲಸ ಮಾಡ್ತಿದ್ದ. ತಮ್ಮ ಕ್ಲಿನಿಕ್ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಗಳ ಸಹಾಯದಿಂದ ಮಕ್ಕಳನ್ನ ಖರೀದಿ ಮಾಡುವ ಪೋಷಕರನ್ನು ಗರ್ಭಿಣಿಯರೆಂದು ದಾಖಲಿಸಿಕೊಂಡು, ಮಗು ಅವರಿಗೆ ಹುಟ್ಟಿದೆ ಎಂದು ನಕಲಿ ದಾಖಲೆಪತ್ರಗಳನ್ನು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ಡಾಕ್ಟರ್, ನರ್ಸ್ ಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ಚುರುಕುಗೊಳಿಸಲಾಗಿದೆ. ಬಂಧಿತ ಪೂರ್ಣಿಮಾ ಮಧುಗಿರಿ ತಾಲೂಕಿನ ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೋರ್ವ ಆರೋಪಿ ಸೌಜನ್ಯ ಶಿರಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಮೇಲೆ ಈ ಹಿಂದೆ ಭ್ರೂಣ ಹತ್ಯೆ ಕೇಸ್ ಕೂಡ ದಾಖಲಾಗಿತ್ತು.

ಬಂಧಿತ ಆರೋಪಿಗಳು

ಪೂರ್ಣಿಮಾ ಹಾಗೂ ಸೌಜನ್ಯ ಆಸ್ಪತ್ರೆಯಲ್ಲಿ ಗರ್ಭಧರಿಸಿದ ಅವಿವಾಹಿತ ಮಹಿಳೆಯರು, ಮಗು ಬೇಡ ಎನ್ನುತ್ತಿದ್ದ ವಿವಾಹಿತ ಮಹಿಳೆಯರ ಬಗ್ಗೆ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಮಹೇಶ್ ಗೆ ಮಾಹಿತಿ ನೀಡುತ್ತಿದ್ದರು. ಅಂತವರನ್ನು ಸಂಪರ್ಕ ಮಾಡುತ್ತಿದ್ದ ಈ ತಂಡ, ಮಕ್ಕಳನ್ನ ಪಡೆದು ಮಾರಾಟ ಮಾಡ್ತಿದ್ದರು.

ಪ್ರಕರಣ ಸಂಬಂಧ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಅವರಿಂದ ಮಾರುತಿ 800 ಕಾರು, 50 ಸಾವಿರ ನಗದು ಹಾಗೂ 4 ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಗುಬ್ಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ; ‘ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..’; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...