Homeಕರ್ನಾಟಕತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

ತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

- Advertisement -
- Advertisement -

ಊರೂರು ತಿರುಗಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿದ್ದ ಅಲೆಮಾರಿ ಕುಟುಂಬದ ದಂಪತಿಯ 11 ತಿಂಗಳ ಮಗು ಕಳವು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಇಡೀ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಕಳ್ಳಸಾಗಾಣೆ ಜಾಲವನ್ನೆ ಪತ್ತೆ ಮಾಡಿದ್ದಾರೆ. ಈ ಪ್ರಕರಣದಿಂದ ತುಮಕೂರು ಜನತೆ ಬೆಚ್ಚಿಬಿದ್ದಿದ್ದು, ಈವರೆಗೆ ಐದು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಲೆಮಾರಿ ಕುಟುಂಬದ ಮಗು ಕಳ್ಳತನ ಪ್ರಕರಣದ ತನಿಖೆಯು ತಿರುವು ಪಡೆದುಕೊಂಡಿದ್ದು, ಹಲವು ತಿಂಗಳುಗಳಿಂದ ಸಕ್ರಿಯವಾಗಿದ್ದ ಒಂದೇ ಗುಂಪು, ಬರೊಬ್ಬರಿ 9 ಮಕ್ಕಳನ್ನು ಕಿಡ್ನಾಪ್ ಮಾಡಿದ್ದಾರೆ. ಕದ್ದ ಮಕ್ಕಳನ್ನ 2 ರಿಂದ 3 ಲಕ್ಷ ರೂಪಾಯಿಗೆ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಳುವಾಗಿದ್ದ 9 ಮಕ್ಕಳ ಪೈಕಿ 5 ಮಕ್ಕಳನ್ನ ಪೊಲೀಸರು ರಕ್ಷಿಸಿದ್ದು, ಅದರಲ್ಲಿ 1 ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಇನ್ನುಳಿದ 3 ಮಕ್ಕಳಿಗಾಗಿ ತನಿಖಾ ತಂಡ ಶೋಧಕಾರ್ಯ ಮುಂದುವರಿಸಿದೆ.

ಜಾಲ ಪತ್ತೆಯಾಗಿದ್ದು ಹೇಗೆ..?

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಜುಲೈ ಒಂಬತ್ತರಂದು ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ತಾಲೂಕಿನ ಚೇಳೂರು ಮೂಲದ ಅಲೆಮಾರಿ ಕುಟುಂಬದ ದಂಪತಿಗಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ತಲೆಕೂದಲು ಸಂಗ್ರಹಿಸಿ, ಪಾತ್ರೆ-ಪಡಗ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿದ್ರು. ಅದೇ ರೀತಿ ವ್ಯಾಪಾರ ಮುಗಿಸಿ ಇದೇ ಜೂನ್ 9 ರ ರಾತ್ರಿ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಲಗಿದ್ದಾಗ, ಬೆಳಗಾಗುವಷ್ಟರಲ್ಲಿ ದಂಪತಿಗಳ 11 ತಿಂಗಳ ರಾಕಿ ಎಂಬ ಮಗು ನಾಪತ್ತೆಯಾಗಿದ್ದ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಗೆ ಮಗುವಿನ ಪೋಷಕರು ದೂರು ನೀಡಿದ್ದರು.

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಈ ಮಕ್ಕಳ ಕಳ್ಳರ ಗ್ಯಾಂಗ್, ಗರ್ಭ ಧರಿಸಿದ ಅವಿವಾಹಿತ ಯುವತಿಯರಿಂದ ಮಕ್ಕಳನ್ನ ಖರೀದಿ ಮಾಡುತ್ತಿದ್ದರು ಎನ್ನಲಾಗಿದೆ. ಜತೆಗೆ, ಮಕ್ಕಳ ಕಳ್ಳತನಕ್ಕೂ ಇಳಿದಿದ್ದರು. ಸದ್ಯ ಪ್ರಕರಣ ಸಂಬಂಧ 7 ಜನ ಆರೋಪಿಗಳ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಯು.ಡಿ, ಮಹಬೂಬ್ ಶರೀಫ್, ಕೆ.ಎನ್.ರಾಮಕೃಷ್ಣ, ಹನುನಂತರಾಜು, ಮುಬಾರಕ್ ಪಾಷಾ, ಪೂರ್ಣಿಮಾ ಎನ್. ಹಾಗೂ ಸೌಜನ್ಯ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಒಂದನೆ ಆರೋಪಿ ಮಹೇಶ್, ಈ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಸದ್ಯ ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದಾನೆ‌.

ಗುಬ್ಬಿಯಲ್ಲಿ ಮಗುವನ್ನ ಕಳವು ಮಾಡಿದ್ದ ಮೂರನೇ ಆರೋಪಿ ರಾಮಕೃಷ್ಣ ಹಾಗೂ ನಾಲ್ಕನೇ ಆರೋಪಿ ಹನುಮಂತರಾಜು, ಮಹೇಶ್ ಮೂಲಕ ಮಂಡ್ಯ ಜಿಲ್ಲೆ ಬೆಳ್ಳೂರು ಕ್ರಾಸ್ ಮೂಲದ ದಂಪತಿಗೆ ಮಗು ಮಾರಾಟ ಮಾಡಿದ್ದ. ಕಿಡ್ನಾಪ್ ಆಗಿದ್ದ 11 ತಿಂಗಳ ರಾಕಿಯನ್ನ ಪೊಲೀಸರು ರಕ್ಷಿಸಿ, ಪೋಷಕರಿಗೆ ಒಪ್ಪಿಸಿದ್ದಾರೆ.

ಜಾತ್ರೆಗಳಲ್ಲಿ ಟ್ಯಾಟು ಹಾಕುವ ಕೆಲಸ ಮಾಡ್ತಿದ್ದ ರಾಮಕೃಷ್ಣ ಹಾಗೂ ಹನುಮಂತರಾಜು ಇಬ್ಬರನ್ನೂ ಹಿಡಿದು ತನಿಖೆ ನಡೆಸಿದಾಗ ಮಕ್ಕಳ ಮಾರಾಟ ಜಾಲ ಪ್ರಕರಣ ಬೆಳಕಿಗೆ ಬಂದಿದೆ. ಎರಡನೇ ಆರೋಪಿ ಮಹಬೂಬ್ ಶರೀಫ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನಲ್ಲಿ ತನ್ನ ಪತ್ನಿ ಹೆಸರಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಜೊತೆಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ವಿತರಣಾ ವಿಭಾಗದಲ್ಲಿ ಕೆಲಸ ಮಾಡ್ತಿದ್ದ. ತಮ್ಮ ಕ್ಲಿನಿಕ್ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಗಳ ಸಹಾಯದಿಂದ ಮಕ್ಕಳನ್ನ ಖರೀದಿ ಮಾಡುವ ಪೋಷಕರನ್ನು ಗರ್ಭಿಣಿಯರೆಂದು ದಾಖಲಿಸಿಕೊಂಡು, ಮಗು ಅವರಿಗೆ ಹುಟ್ಟಿದೆ ಎಂದು ನಕಲಿ ದಾಖಲೆಪತ್ರಗಳನ್ನು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ಡಾಕ್ಟರ್, ನರ್ಸ್ ಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ಚುರುಕುಗೊಳಿಸಲಾಗಿದೆ. ಬಂಧಿತ ಪೂರ್ಣಿಮಾ ಮಧುಗಿರಿ ತಾಲೂಕಿನ ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೋರ್ವ ಆರೋಪಿ ಸೌಜನ್ಯ ಶಿರಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಮೇಲೆ ಈ ಹಿಂದೆ ಭ್ರೂಣ ಹತ್ಯೆ ಕೇಸ್ ಕೂಡ ದಾಖಲಾಗಿತ್ತು.

ಬಂಧಿತ ಆರೋಪಿಗಳು

ಪೂರ್ಣಿಮಾ ಹಾಗೂ ಸೌಜನ್ಯ ಆಸ್ಪತ್ರೆಯಲ್ಲಿ ಗರ್ಭಧರಿಸಿದ ಅವಿವಾಹಿತ ಮಹಿಳೆಯರು, ಮಗು ಬೇಡ ಎನ್ನುತ್ತಿದ್ದ ವಿವಾಹಿತ ಮಹಿಳೆಯರ ಬಗ್ಗೆ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಮಹೇಶ್ ಗೆ ಮಾಹಿತಿ ನೀಡುತ್ತಿದ್ದರು. ಅಂತವರನ್ನು ಸಂಪರ್ಕ ಮಾಡುತ್ತಿದ್ದ ಈ ತಂಡ, ಮಕ್ಕಳನ್ನ ಪಡೆದು ಮಾರಾಟ ಮಾಡ್ತಿದ್ದರು.

ಪ್ರಕರಣ ಸಂಬಂಧ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಅವರಿಂದ ಮಾರುತಿ 800 ಕಾರು, 50 ಸಾವಿರ ನಗದು ಹಾಗೂ 4 ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಗುಬ್ಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ; ‘ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..’; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...