Homeಕರ್ನಾಟಕತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

ತುಮಕೂರಿನಲ್ಲಿ ಮಕ್ಕಳ ಕಳ್ಳಸಾಗಾಣೆ ಸಕ್ರಿಯ ಜಾಲ ಪತ್ತೆ; ಅಲೆಮಾರಿಗಳ ಮಗು ಕದ್ದು ಸಿಕ್ಕಿಬಿದ್ದ ಖದೀಮರು

- Advertisement -
- Advertisement -

ಊರೂರು ತಿರುಗಿ ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿದ್ದ ಅಲೆಮಾರಿ ಕುಟುಂಬದ ದಂಪತಿಯ 11 ತಿಂಗಳ ಮಗು ಕಳವು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಇಡೀ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮಕ್ಕಳ ಕಳ್ಳಸಾಗಾಣೆ ಜಾಲವನ್ನೆ ಪತ್ತೆ ಮಾಡಿದ್ದಾರೆ. ಈ ಪ್ರಕರಣದಿಂದ ತುಮಕೂರು ಜನತೆ ಬೆಚ್ಚಿಬಿದ್ದಿದ್ದು, ಈವರೆಗೆ ಐದು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಲೆಮಾರಿ ಕುಟುಂಬದ ಮಗು ಕಳ್ಳತನ ಪ್ರಕರಣದ ತನಿಖೆಯು ತಿರುವು ಪಡೆದುಕೊಂಡಿದ್ದು, ಹಲವು ತಿಂಗಳುಗಳಿಂದ ಸಕ್ರಿಯವಾಗಿದ್ದ ಒಂದೇ ಗುಂಪು, ಬರೊಬ್ಬರಿ 9 ಮಕ್ಕಳನ್ನು ಕಿಡ್ನಾಪ್ ಮಾಡಿದ್ದಾರೆ. ಕದ್ದ ಮಕ್ಕಳನ್ನ 2 ರಿಂದ 3 ಲಕ್ಷ ರೂಪಾಯಿಗೆ ಮಕ್ಕಳಿಲ್ಲದ ದಂಪತಿಗೆ ಮಾರಾಟ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಕಳುವಾಗಿದ್ದ 9 ಮಕ್ಕಳ ಪೈಕಿ 5 ಮಕ್ಕಳನ್ನ ಪೊಲೀಸರು ರಕ್ಷಿಸಿದ್ದು, ಅದರಲ್ಲಿ 1 ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಇನ್ನುಳಿದ 3 ಮಕ್ಕಳಿಗಾಗಿ ತನಿಖಾ ತಂಡ ಶೋಧಕಾರ್ಯ ಮುಂದುವರಿಸಿದೆ.

ಜಾಲ ಪತ್ತೆಯಾಗಿದ್ದು ಹೇಗೆ..?

ತುಮಕೂರು ಜಿಲ್ಲೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಜುಲೈ ಒಂಬತ್ತರಂದು ಮಗು ಕಳ್ಳತನ ಪ್ರಕರಣ ದಾಖಲಾಗಿತ್ತು. ತಾಲೂಕಿನ ಚೇಳೂರು ಮೂಲದ ಅಲೆಮಾರಿ ಕುಟುಂಬದ ದಂಪತಿಗಳು ಸುತ್ತಮುತ್ತಲಿನ ಹಳ್ಳಿಗಳಲ್ಲಿ ತಲೆಕೂದಲು ಸಂಗ್ರಹಿಸಿ, ಪಾತ್ರೆ-ಪಡಗ ವ್ಯಾಪಾರ ನಡೆಸುತ್ತಾ ಜೀವನ ಸಾಗಿಸುತ್ತಿದ್ರು. ಅದೇ ರೀತಿ ವ್ಯಾಪಾರ ಮುಗಿಸಿ ಇದೇ ಜೂನ್ 9 ರ ರಾತ್ರಿ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ದೇವಸ್ಥಾನದ ಬಳಿ ಮಲಗಿದ್ದಾಗ, ಬೆಳಗಾಗುವಷ್ಟರಲ್ಲಿ ದಂಪತಿಗಳ 11 ತಿಂಗಳ ರಾಕಿ ಎಂಬ ಮಗು ನಾಪತ್ತೆಯಾಗಿದ್ದ. ಈ ಘಟನೆ ಸಂಬಂಧ ಗುಬ್ಬಿ ಪೊಲೀಸ್ ಠಾಣೆಗೆ ಮಗುವಿನ ಪೋಷಕರು ದೂರು ನೀಡಿದ್ದರು.

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಈ ಮಕ್ಕಳ ಕಳ್ಳರ ಗ್ಯಾಂಗ್, ಗರ್ಭ ಧರಿಸಿದ ಅವಿವಾಹಿತ ಯುವತಿಯರಿಂದ ಮಕ್ಕಳನ್ನ ಖರೀದಿ ಮಾಡುತ್ತಿದ್ದರು ಎನ್ನಲಾಗಿದೆ. ಜತೆಗೆ, ಮಕ್ಕಳ ಕಳ್ಳತನಕ್ಕೂ ಇಳಿದಿದ್ದರು. ಸದ್ಯ ಪ್ರಕರಣ ಸಂಬಂಧ 7 ಜನ ಆರೋಪಿಗಳ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಮಹೇಶ್ ಯು.ಡಿ, ಮಹಬೂಬ್ ಶರೀಫ್, ಕೆ.ಎನ್.ರಾಮಕೃಷ್ಣ, ಹನುನಂತರಾಜು, ಮುಬಾರಕ್ ಪಾಷಾ, ಪೂರ್ಣಿಮಾ ಎನ್. ಹಾಗೂ ಸೌಜನ್ಯ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು

ಮಕ್ಕಳಿಲ್ಲದ ದಂಪತಿಗಳನ್ನ ಟಾರ್ಗೆಟ್ ಮಾಡುತ್ತಿದ್ದ ಒಂದನೆ ಆರೋಪಿ ಮಹೇಶ್, ಈ ಹಿಂದೆ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲಸ ಮಾಡಿದ್ದ ಎನ್ನಲಾಗಿದೆ. ಸದ್ಯ ತುಮಕೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡ್ತಿದ್ದಾನೆ‌.

ಗುಬ್ಬಿಯಲ್ಲಿ ಮಗುವನ್ನ ಕಳವು ಮಾಡಿದ್ದ ಮೂರನೇ ಆರೋಪಿ ರಾಮಕೃಷ್ಣ ಹಾಗೂ ನಾಲ್ಕನೇ ಆರೋಪಿ ಹನುಮಂತರಾಜು, ಮಹೇಶ್ ಮೂಲಕ ಮಂಡ್ಯ ಜಿಲ್ಲೆ ಬೆಳ್ಳೂರು ಕ್ರಾಸ್ ಮೂಲದ ದಂಪತಿಗೆ ಮಗು ಮಾರಾಟ ಮಾಡಿದ್ದ. ಕಿಡ್ನಾಪ್ ಆಗಿದ್ದ 11 ತಿಂಗಳ ರಾಕಿಯನ್ನ ಪೊಲೀಸರು ರಕ್ಷಿಸಿ, ಪೋಷಕರಿಗೆ ಒಪ್ಪಿಸಿದ್ದಾರೆ.

ಜಾತ್ರೆಗಳಲ್ಲಿ ಟ್ಯಾಟು ಹಾಕುವ ಕೆಲಸ ಮಾಡ್ತಿದ್ದ ರಾಮಕೃಷ್ಣ ಹಾಗೂ ಹನುಮಂತರಾಜು ಇಬ್ಬರನ್ನೂ ಹಿಡಿದು ತನಿಖೆ ನಡೆಸಿದಾಗ ಮಕ್ಕಳ ಮಾರಾಟ ಜಾಲ ಪ್ರಕರಣ ಬೆಳಕಿಗೆ ಬಂದಿದೆ. ಎರಡನೇ ಆರೋಪಿ ಮಹಬೂಬ್ ಶರೀಫ್ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರಿನಲ್ಲಿ ತನ್ನ ಪತ್ನಿ ಹೆಸರಲ್ಲಿ ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ. ಜೊತೆಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ವಿತರಣಾ ವಿಭಾಗದಲ್ಲಿ ಕೆಲಸ ಮಾಡ್ತಿದ್ದ. ತಮ್ಮ ಕ್ಲಿನಿಕ್ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ನರ್ಸ್ ಗಳ ಸಹಾಯದಿಂದ ಮಕ್ಕಳನ್ನ ಖರೀದಿ ಮಾಡುವ ಪೋಷಕರನ್ನು ಗರ್ಭಿಣಿಯರೆಂದು ದಾಖಲಿಸಿಕೊಂಡು, ಮಗು ಅವರಿಗೆ ಹುಟ್ಟಿದೆ ಎಂದು ನಕಲಿ ದಾಖಲೆಪತ್ರಗಳನ್ನು ನೀಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಸರ್ಕಾರಿ ಆಸ್ಪತ್ರೆ ಡಾಕ್ಟರ್, ನರ್ಸ್ ಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದ್ದು ತನಿಖೆ ಚುರುಕುಗೊಳಿಸಲಾಗಿದೆ. ಬಂಧಿತ ಪೂರ್ಣಿಮಾ ಮಧುಗಿರಿ ತಾಲೂಕಿನ ದೊಡ್ಡೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸ್ಟಾಫ್ ನರ್ಸ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೋರ್ವ ಆರೋಪಿ ಸೌಜನ್ಯ ಶಿರಾ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇವರ ಮೇಲೆ ಈ ಹಿಂದೆ ಭ್ರೂಣ ಹತ್ಯೆ ಕೇಸ್ ಕೂಡ ದಾಖಲಾಗಿತ್ತು.

ಬಂಧಿತ ಆರೋಪಿಗಳು

ಪೂರ್ಣಿಮಾ ಹಾಗೂ ಸೌಜನ್ಯ ಆಸ್ಪತ್ರೆಯಲ್ಲಿ ಗರ್ಭಧರಿಸಿದ ಅವಿವಾಹಿತ ಮಹಿಳೆಯರು, ಮಗು ಬೇಡ ಎನ್ನುತ್ತಿದ್ದ ವಿವಾಹಿತ ಮಹಿಳೆಯರ ಬಗ್ಗೆ ಪ್ರಕರಣದ ಪ್ರಮುಖ ಕಿಂಗ್‌ಪಿನ್ ಮಹೇಶ್ ಗೆ ಮಾಹಿತಿ ನೀಡುತ್ತಿದ್ದರು. ಅಂತವರನ್ನು ಸಂಪರ್ಕ ಮಾಡುತ್ತಿದ್ದ ಈ ತಂಡ, ಮಕ್ಕಳನ್ನ ಪಡೆದು ಮಾರಾಟ ಮಾಡ್ತಿದ್ದರು.

ಪ್ರಕರಣ ಸಂಬಂಧ 9 ಜನರ ವಿರುದ್ಧ ಕೇಸ್ ದಾಖಲಿಸಲಾಗಿದ್ದು, 7 ಜನರನ್ನು ಬಂಧಿಸಲಾಗಿದೆ. ಅವರಿಂದ ಮಾರುತಿ 800 ಕಾರು, 50 ಸಾವಿರ ನಗದು ಹಾಗೂ 4 ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಗುಬ್ಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ; ‘ತುರ್ತು ಪರಿಸ್ಥಿತಿ ಉಲ್ಲೇಖವನ್ನು ತಪ್ಪಿಸಬಹುದಿತ್ತು..’; ಸ್ಪೀಕರ್ ಬಳಿ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...