Homeಮುಖಪುಟಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

ಚಿಕ್ಕ ವಯಸ್ಸಿನಲ್ಲಿ ಮಕ್ಕಳನ್ನು ಹೆರುವುದು ಸಾಮಾನ್ಯವಾಗಿತ್ತು: ಮನುಸ್ಮೃತಿ ಓದಿ ಎಂದ ಗುಜರಾತ್ ಹೈಕೋರ್ಟ್‌

- Advertisement -
- Advertisement -

14 ರಿಂದ 16 ವರ್ಷ ವಯಸ್ಸಿನೊಳಗೆ ಹುಡುಗಿಯರಿಗೆ ಮದುವೆ ಮಾಡುತ್ತಿದ್ದರು ಮತ್ತು 17 ವರ್ಷ ವಯಸ್ಸಿನೊಳಗೆ ಕನಿಷ್ಠ ಒಂದು ಮಗುವಿಗೆ ಜನ್ಮ ನೀಡುವುದು ಸಾಮಾನ್ಯವಾಗಿತ್ತು ಎಂದು ಗುಜರಾತ್ ಹೈಕೋರ್ಟ್ ಬುಧವಾರ ಮನುಸ್ಮೃತಿಯನ್ನು ಉಲ್ಲೇಖಿಸಿ ಹೇಳಿದೆ. ಅತ್ಯಾಚಾರ ಸಂತ್ರಸ್ತ ಬಾಲಕಿ ತನ್ನ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ ಮನವಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳು ಈ ರೀತಿಯಲ್ಲಿ ಹೇಳಿದ್ದಾರೆ.

ಮನುಸ್ಮೃತಿಯು ಮನು ಎಂಬ ತಪಸ್ವಿಯಿಂದ ರಚಿಸಲ್ಪಟ್ಟ ಗ್ರಂಥವಾಗಿದೆ. ಇದುರಲ್ಲಿ ಅಸಮಾನತೆ, ಕೊಳಕು ಸಂಪ್ರದಾಯ, ವೇದ-ಉಪನಿಷತ್ತು ಮುಂತಾದವುಗಳು ತುಂಬಿದ್ದವು ಎಂದು ಟೀಕಿಸಲ್ಪಟ್ಟಿದೆ.

ಏಕಸದಸ್ಯ ನ್ಯಾಯಮೂರ್ತಿ ಸಮೀರ್ ದವೆ ಅವರಿದ್ದ ಪೀಠವು ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ತಂದೆಯ ಮನವಿಯನ್ನು ಆಲಿಸುವ ಸಂದರ್ಭದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅತ್ಯಾಚಾರ ಸಂತ್ರಸ್ತೆಗೆ 16 ವರ್ಷ 11 ತಿಂಗಳಾಗಿದ್ದು, ಏಳು ತಿಂಗಳ ಗರ್ಭಿಣಿಯಾಗಿದ್ದಾರೆ. ಗರ್ಭಾವಸ್ಥೆಯು 24 ವಾರಗಳ ಮಿತಿಯನ್ನು ದಾಟಿರುವುದರಿಂದ ಗರ್ಭಪಾತಕ್ಕೆ ಅನುಮತಿ ಕೋರಿ ಆಕೆಯ ತಂದೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಹಿಳೆಯ ನಗ್ನತೆಯನ್ನು ಲೈಂಗಿಕ ದೃಷ್ಠಿಯಿಂದ ನೋಡುವುದು ಸರಿಯಲ್ಲ: ಕೇರಳ ಹೈಕೋರ್ಟ್

ಬಾಲಕಿಯ ವಯಸ್ಸು ಅತ್ಯಂತ ಚಿಕ್ಕದಿರುವುದರಿಂದ ಕುಟುಂಬ ವರ್ಗ ಬಹಳ ಆತಂಕದಲ್ಲಿದೆ. ಹೀಗಾಗಿ, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕೆಂದು ವಕೀಲರು ಮಾಡಿದ ಮನವಿ ಮಾಡಿದರು. ಆದರೆ, ಬಾಲಕಿ ಮತ್ತು ಭ್ರೂಣ ಆರೋಗ್ಯವಾಗಿದ್ದರೆ ಅವರ ಅರ್ಜಿಯನ್ನು ಪುರಸ್ಕರಿಸುವುದಿಲ್ಲ ಎಂದು ಹೈಕೋರ್ಟ್‌ನ ನ್ಯಾಯಮೂರ್ತಿ ಸಮೀರ್ ದವೆ ಅವರು ಹೇಳಿದ್ದಾರೆ. ಇದೇ ಸಂದರ್ಭ ಮನುಸ್ಮೃತಿಯನ್ನು ಉಲ್ಲೇಖಿಸಿದ್ದಾರೆ.

”ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದೇವೆ. ಅದಕ್ಕೆ ನಿಮಗೆ ಹಾಗೆನಿಸುತ್ತಿದೆ. ನಿಮ್ಮ ತಾಯಿ ಅಥವಾ ಅಜ್ಜಿಯನ್ನು ಕೇಳಿ, ಹದಿನಾಲ್ಕರಿಂದ ಹದಿನೇಳು ಮದುವೆಗೆ ಗರಿಷ್ಠ ವಯಸ್ಸಾಗಿತ್ತು. 17 ವರ್ಷ ತುಂಬುವ ಮೊದಲೇ ಬಾಲಕಿಯರು ತಮ್ಮ ಮೊದಲ ಮಗುವಿಗೆ ಜನ್ಮ ನೀಡುತ್ತಿದ್ದರು. ಬಾಲಕಿಯರು ಬಾಲಕರಿಗಿಂತ ಬೇಗನೆ ಪ್ರೌಢಾವಸ್ಥೆಗೆ ತಲುಪುತ್ತಾರೆ. ನೀವು ಓದಿಲ್ಲವೆಂದಾದರೆ, ಒಮ್ಮೆ ಮನುಸ್ಮೃತಿ ಓದಿ” ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದ್ದಾರೆ.

ತಮ್ಮ ಕೊಠಡಿಯಲ್ಲೇ ತಜ್ಞ ವೈದ್ಯರ ಸಲಹೆ ಪಡೆದ ನ್ಯಾಯಮೂರ್ತಿ, ಆಗಸ್ಟ್ 16ರಂದು ಬಾಲಕಿಯು ಮಗುವಿಗೆ ಜನ್ಮ ನೀಡುವ ಸಾಧ್ಯತೆ ಇದೆ ಎಂಬುದರ ಮಾಹಿತಿ ಪಡೆದರು. ಆದರೆ, ಬಾಲಕಿ ಮತ್ತು ಭ್ರೂಣಕ್ಕೆ ಗಂಭೀರ ಆರೋಗ್ಯ ಸಮಸ್ಯೆ ಇದೆ ಎಂಬುದು ಕಂಡುಬಂದರೆ ಮಾತ್ರ ಗರ್ಭಪಾತಕ್ಕೆ ಅನುಮತಿ ನೀಡುತ್ತೇನೆ. ಒಂದೊಮ್ಮೆ, ಆರೋಗ್ಯ ಸ್ಥಿತಿ ಉತ್ತಮವಾಗಿದ್ದರೆ ಅಂತಹ ಆದೇಶ ನೀಡುವುದು ನ್ಯಾಯಾಲಯಕ್ಕೆ ಕಷ್ಟವಾಗಲಿದೆ” ಎಂದು ವಕೀಲರಿಗೆ ತಿಳಿಸಿದರು.

ಕೊನೆಗೆ, ಬಾಲಕಿಗೆ ಗರ್ಭಪಾತ ನಡೆಸುವುದು ಸೂಕ್ತವೇ ಎಂಬುದನ್ನು ಕಂಡುಹಿಡಿಯಲು ವೈದ್ಯರ ಸಮಿತಿಯಿಂದ ಬಾಲಕಿಯನ್ನು ಪರೀಕ್ಷಿಸುವಂತೆ ನ್ಯಾಯಾಲಯವು ರಾಜ್‌ಕೋಟ್‌ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಿಗೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...