Homeಮುಖಪುಟಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

- Advertisement -
- Advertisement -

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ ಭಾರತೀಯ ಕ್ರಿಕೆಟಿಗ ಕೀರ್ತಿ ಆಜಾದ್ ಟೀಕಿಸಿದ್ದು, ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ (ಟ್ವಿಟರ್) ನಲ್ಲಿ ಈ ಬಗ್ಗೆ ಪ್ರಶ್ನಿಸಿರುವ ಆಜಾದ್, ಕುಟುಂಬಸ್ಥರು ಮತ್ತು ಮಕ್ಕಳು ಒಟ್ಟಾಗಿ ವೀಕ್ಷಿಸುವ ಕ್ರೀಡಾಕೂಟದ ವೇಳೆ ಇಂತಹ ಜಾಹೀರಾತುಗಳು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ. “ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತರರಾಷ್ಟ್ರೀಯ ಟಿ೨೦ ಪಂದ್ಯವನ್ನು ಮಕ್ಕಳು ನೇರವಾಗಿ ವೀಕ್ಷಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪರದೆಯ ಮೇಲೆ ಡ್ಯುರೆಕ್ಸ್ ಕಂಪನಿಯ ವಯಸ್ಕರ ಜಾಹೀರಾತು ಬರುವುದು ನಾಚಿಕೆಗೇಡಿನ ಸಂಗತಿಯಲ್ಲವೇ?” ಎಂದು ಬರೆದಿರುವ ಅವರು, ತಮ್ಮ ಪೋಸ್ಟ್‌ನಲ್ಲಿ ಬಿಸಿಸಿಐ (BCCI) ಅನ್ನು ಸಹ ಟ್ಯಾಗ್ ಮಾಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಶೀಘ್ರವಾಗಿ ವೈರಲ್ ಆಗಿದ್ದು, 3,26,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 700 ಕ್ಕೂ ಹೆಚ್ಚು ಕಮೆಂಟ್‌ಗಳನ್ನು ಪಡೆದುಕೊಂಡಿದೆ.

ಅನೇಕ ಬಳಕೆದಾರರು ಆಜಾದ್ ಅವರ ಕಳಕಳಿಯನ್ನು ಒಪ್ಪಿಕೊಂಡಿದ್ದಾರೆ. ಕ್ರಿಕೆಟ್ ಪಂದ್ಯಗಳು ಕೌಟುಂಬಿಕ ಮನರಂಜನೆಯಾಗಿದ್ದು, ಇಂತಹ ಜಾಹೀರಾತುಗಳು ಒಟ್ಟಿಗೆ ಕುಳಿತು ನೋಡುವಾಗ ಮುಜುಗರ ಉಂಟುಮಾಡುತ್ತವೆ ಎಂದು ವಾದಿಸಿದ್ದಾರೆ. “ಖಂಡಿತವಾಗಿಯೂ ಹೌದು ಸರ್, ನನಗೂ ಇದನ್ನು ನೋಡಿ ಮುಜುಗರವಾಯಿತು ಮತ್ತು ಪಂದ್ಯ ನೋಡುವುದನ್ನೇ ನಿಲ್ಲಿಸಿದೆ” ಎಂದು ಒಬ್ಬ ಬಳಕೆದಾರ ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ನಾನು ವಯಸ್ಕನಾಗಿದ್ದರೂ ಸಹ, ನನ್ನ ಪೋಷಕರೊಂದಿಗೆ ಈ ಜಾಹೀರಾತುಗಳನ್ನು ನೋಡುವುದು ಮುಜುಗರ ತಂದಿತು” ಎಂದು ಬರೆದಿದ್ದಾರೆ.

ಆದರೆ, ಇನ್ನೂ ಹಲವರು ಈ ಜಾಹೀರಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇವು ಯಾವುದೇ ಅನುಚಿತ ವಿಷಯವನ್ನು ಪ್ರಸಾರ ಮಾಡುತ್ತಿಲ್ಲ, ಬದಲಿಗೆ ಸುರಕ್ಷಿತ ಲೈಂಗಿಕತೆ ಮತ್ತು ಗರ್ಭನಿರೋಧಕಗಳ ಬಗ್ಗೆ ಜಾಗೃತಿ ಮೂಡಿಸುತ್ತಿವೆ ಎಂದು ಅವರು ಹೇಳಿದ್ದಾರೆ. “ಇದಕ್ಕೆ ವಿರುದ್ಧವಾಗಿ ಆಜಾದ್ ಅವರೇ, ದೇಶದ ಜನಸಂಖ್ಯಾ ಸ್ಫೋಟವನ್ನು ಗಮನಿಸಿದರೆ ಇದು ಎಲ್ಲಕ್ಕಿಂತ ಹೆಚ್ಚು ಮುಖ್ಯವಾಗಿದೆ. ಮಕ್ಕಳಿಗೆ ಶಿಕ್ಷಣ ನೀಡಿ. ಜಾಗೃತಿ ಮೂಡಿಸಲು ಕ್ರೀಡಾಂಗಣವು ಅತ್ಯುತ್ತಮ ವೇದಿಕೆಯಾಗಿದೆ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತೊಬ್ಬರು ಈ ಟೀಕೆಯನ್ನು ಪ್ರಶ್ನಿಸುತ್ತಾ, “ಇದರಲ್ಲಿ ನಾಚಿಕೆಪಡುವಂಥದ್ದು ಏನಿದೆ? ನನಗೆ ಒಂದು ಕಾರಣ ಕೊಡಿ. ನಿಯಂತ್ರಣ ಮತ್ತು ಸುರಕ್ಷತೆಯನ್ನು ಕಲಿಸಲು ಇದು ನಿಜಕ್ಕೂ ಉತ್ತಮ ಮಾರ್ಗವಾಗಿದೆ. ಇಂದಿನ ಜಗತ್ತಿನಲ್ಲಿ ಕಾಂಡೊಮ್‌ಗಳು ಮುಖ್ಯವಾಗಿವೆ. ಜನರ ನಡುವೆ ಜಾಗೃತಿ ಮೂಡಿಸಬೇಕಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರೊಬ್ಬರು, “ಅದರಲ್ಲಿ ಏನು ಸಮಸ್ಯೆಯಿದೆ? ನಿಮ್ಮ ಮಕ್ಕಳು ಹದಿಹರೆಯದವರಾಗಿದ್ದರೆ ಇದು ಗರ್ಭನಿರೋಧಕ ಎಂದು ಅವರಿಗೆ ತಿಳಿದಿರಬೇಕು. ನನ್ನ ತಂದೆ ನನಗೆ 10 ವರ್ಷ ವಯಸ್ಸಿದ್ದಾಗಲೇ ಗರ್ಭನಿರೋಧಕಗಳ ಬಗ್ಗೆ ತಿಳಿಸಿದ್ದರು” ಎಂದು ಸೇರಿಸಿದ್ದಾರೆ.

ಶನಿವಾರ ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟಿ20 ಪಂದ್ಯದ ನೇರ ಪ್ರಸಾರದ ವೇಳೆ ಆಜಾದ್ ಈ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯದಲ್ಲಿ ಭಾರತ ನೀಡಿದ್ದ 191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್, 19 ಓವರ್‌ಗಳಲ್ಲಿ 4 ವಿಕೆಟ್‌ಗಳ ಅಂತರದಿಂದ ಜಯಗಳಿಸಿತು. ಆತಿಥೇಯ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 46 ಎಸೆತಗಳಲ್ಲಿ ಅಜೇಯ 76 ರನ್ ಗಳಿಸಿ ಮಿಂಚಿದರು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...