Homeಮುಖಪುಟಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

- Advertisement -
- Advertisement -

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ ಭಾರತೀಯ ಕ್ರಿಕೆಟಿಗ ಕೀರ್ತಿ ಆಜಾದ್ ಟೀಕಿಸಿದ್ದು, ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ (ಟ್ವಿಟರ್) ನಲ್ಲಿ ಈ ಬಗ್ಗೆ ಪ್ರಶ್ನಿಸಿರುವ ಆಜಾದ್, ಕುಟುಂಬಸ್ಥರು ಮತ್ತು ಮಕ್ಕಳು ಒಟ್ಟಾಗಿ ವೀಕ್ಷಿಸುವ ಕ್ರೀಡಾಕೂಟದ ವೇಳೆ ಇಂತಹ ಜಾಹೀರಾತುಗಳು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ. “ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತರರಾಷ್ಟ್ರೀಯ ಟಿ೨೦ ಪಂದ್ಯವನ್ನು ಮಕ್ಕಳು ನೇರವಾಗಿ ವೀಕ್ಷಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪರದೆಯ ಮೇಲೆ ಡ್ಯುರೆಕ್ಸ್ ಕಂಪನಿಯ ವಯಸ್ಕರ ಜಾಹೀರಾತು ಬರುವುದು ನಾಚಿಕೆಗೇಡಿನ ಸಂಗತಿಯಲ್ಲವೇ?” ಎಂದು ಬರೆದಿರುವ ಅವರು, ತಮ್ಮ ಪೋಸ್ಟ್‌ನಲ್ಲಿ ಬಿಸಿಸಿಐ (BCCI) ಅನ್ನು ಸಹ ಟ್ಯಾಗ್ ಮಾಡಿದ್ದಾರೆ. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಶೀಘ್ರವಾಗಿ ವೈರಲ್ ಆಗಿದ್ದು, 3,26,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು 700 ಕ್ಕೂ ಹೆಚ್ಚು ಕಮೆಂಟ್‌ಗಳನ್ನು ಪಡೆದುಕೊಂಡಿದೆ.

ಅನೇಕ ಬಳಕೆದಾರರು ಆಜಾದ್ ಅವರ ಕಳಕಳಿಯನ್ನು ಒಪ್ಪಿಕೊಂಡಿದ್ದಾರೆ. ಕ್ರಿಕೆಟ್ ಪಂದ್ಯಗಳು ಕೌಟುಂಬಿಕ ಮನರಂಜನೆಯಾಗಿದ್ದು, ಇಂತಹ ಜಾಹೀರಾತುಗಳು ಒಟ್ಟಿಗೆ ಕುಳಿತು ನೋಡುವಾಗ ಮುಜುಗರ ಉಂಟುಮಾಡುತ್ತವೆ ಎಂದು ವಾದಿಸಿದ್ದಾರೆ. “ಖಂಡಿತವಾಗಿಯೂ ಹೌದು ಸರ್, ನನಗೂ ಇದನ್ನು ನೋಡಿ ಮುಜುಗರವಾಯಿತು ಮತ್ತು ಪಂದ್ಯ ನೋಡುವುದನ್ನೇ ನಿಲ್ಲಿಸಿದೆ” ಎಂದು ಒಬ್ಬ ಬಳಕೆದಾರ ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, “ನಾನು ವಯಸ್ಕನಾಗಿದ್ದರೂ ಸಹ, ನನ್ನ ಪೋಷಕರೊಂದಿಗೆ ಈ ಜಾಹೀರಾತುಗಳನ್ನು ನೋಡುವುದು ಮುಜುಗರ ತಂದಿತು” ಎಂದು ಬರೆದಿದ್ದಾರೆ.

ಆದರೆ, ಇನ್ನೂ ಹಲವರು ಈ ಜಾಹೀರಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ. ಇವು ಯಾವುದೇ ಅನುಚಿತ ವಿಷಯವನ್ನು ಪ್ರಸಾರ ಮಾಡುತ್ತಿಲ್ಲ, ಬದಲಿಗೆ ಸುರಕ್ಷಿತ ಲೈಂಗಿಕತೆ ಮತ್ತು ಗರ್ಭನಿರೋಧಕಗಳ ಬಗ್ಗೆ ಜಾಗೃತಿ ಮೂಡಿಸುತ್ತಿವೆ ಎಂದು ಅವರು ಹೇಳಿದ್ದಾರೆ. “ಇದಕ್ಕೆ ವಿರುದ್ಧವಾಗಿ ಆಜಾದ್ ಅವರೇ, ದೇಶದ ಜನಸಂಖ್ಯಾ ಸ್ಫೋಟವನ್ನು ಗಮನಿಸಿದರೆ ಇದು ಎಲ್ಲಕ್ಕಿಂತ ಹೆಚ್ಚು ಮುಖ್ಯವಾಗಿದೆ. ಮಕ್ಕಳಿಗೆ ಶಿಕ್ಷಣ ನೀಡಿ. ಜಾಗೃತಿ ಮೂಡಿಸಲು ಕ್ರೀಡಾಂಗಣವು ಅತ್ಯುತ್ತಮ ವೇದಿಕೆಯಾಗಿದೆ” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತೊಬ್ಬರು ಈ ಟೀಕೆಯನ್ನು ಪ್ರಶ್ನಿಸುತ್ತಾ, “ಇದರಲ್ಲಿ ನಾಚಿಕೆಪಡುವಂಥದ್ದು ಏನಿದೆ? ನನಗೆ ಒಂದು ಕಾರಣ ಕೊಡಿ. ನಿಯಂತ್ರಣ ಮತ್ತು ಸುರಕ್ಷತೆಯನ್ನು ಕಲಿಸಲು ಇದು ನಿಜಕ್ಕೂ ಉತ್ತಮ ಮಾರ್ಗವಾಗಿದೆ. ಇಂದಿನ ಜಗತ್ತಿನಲ್ಲಿ ಕಾಂಡೊಮ್‌ಗಳು ಮುಖ್ಯವಾಗಿವೆ. ಜನರ ನಡುವೆ ಜಾಗೃತಿ ಮೂಡಿಸಬೇಕಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬ ಬಳಕೆದಾರರೊಬ್ಬರು, “ಅದರಲ್ಲಿ ಏನು ಸಮಸ್ಯೆಯಿದೆ? ನಿಮ್ಮ ಮಕ್ಕಳು ಹದಿಹರೆಯದವರಾಗಿದ್ದರೆ ಇದು ಗರ್ಭನಿರೋಧಕ ಎಂದು ಅವರಿಗೆ ತಿಳಿದಿರಬೇಕು. ನನ್ನ ತಂದೆ ನನಗೆ 10 ವರ್ಷ ವಯಸ್ಸಿದ್ದಾಗಲೇ ಗರ್ಭನಿರೋಧಕಗಳ ಬಗ್ಗೆ ತಿಳಿಸಿದ್ದರು” ಎಂದು ಸೇರಿಸಿದ್ದಾರೆ.

ಶನಿವಾರ ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟಿ20 ಪಂದ್ಯದ ನೇರ ಪ್ರಸಾರದ ವೇಳೆ ಆಜಾದ್ ಈ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಪಂದ್ಯದಲ್ಲಿ ಭಾರತ ನೀಡಿದ್ದ 191 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್, 19 ಓವರ್‌ಗಳಲ್ಲಿ 4 ವಿಕೆಟ್‌ಗಳ ಅಂತರದಿಂದ ಜಯಗಳಿಸಿತು. ಆತಿಥೇಯ ಇಂಗ್ಲೆಂಡ್ ಪರ ಜೇಕಬ್ ಬೆಥೆಲ್ 46 ಎಸೆತಗಳಲ್ಲಿ ಅಜೇಯ 76 ರನ್ ಗಳಿಸಿ ಮಿಂಚಿದರು. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...