Homeಮುಖಪುಟಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

ಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ‘ಕೋಲ್ಡ್ರಿಫ್ ಕೆಮ್ಮಿನ ಸಿರಪ್’ ಸೇವಿಸಿ ಕನಿಷ್ಠ ಹನ್ನೊಂದು ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಮೂರು ರಾಜ್ಯಗಳು ಅಂತಹ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿವೆ.

ಮೊದಲು ತಮಿಳುನಾಡಿನಲ್ಲಿ ಕೆಮ್ಮಿನ ಸಿರಪ್ ನಿಷೇಧಿಸಲಾಗಿತ್ತು. ನಂತರ ಮಧ್ಯಪ್ರದೇಶ ಮತ್ತು ಕೇರಳ ಕೂಡ ನಿಷೇಧ ಮಾಡಿವೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 1 ರಿಂದ 7 ವರ್ಷದೊಳಗಿನ ಕನಿಷ್ಠ 11 ಮಕ್ಕಳು ಸಾವನ್ನಪ್ಪಿದ್ದಾರೆ. ಕೆಮ್ಮಿನ ಸಿರಪ್‌ನಲ್ಲಿದ್ದ ವಿಷಕಾರಿ ಅಂಶವು ಇದಕ್ಕೆ ಕಾರಣವೆಂದು ಅಧಿಕಾರಿಗಳು ಹೇಳಿದ್ದಾರೆ.

ಸಿರಪ್ ಸೇವಿಸಿದ ಮಕ್ಕಳ ಸಾವು ವರದಿಯಾದ ನಂತರ, ಮಧ್ಯಪ್ರದೇಶ ಸರ್ಕಾರವು ಸಿರಪ್‌ನ ಸುರಕ್ಷತೆಯನ್ನು ಪರಿಶೀಲಿಸುವಂತೆ ತಮಿಳುನಾಡಿನ ಅಧಿಕಾರಿಗಳನ್ನು ಕೇಳಿತ್ತು.

ಅಕ್ಟೋಬರ್ 2ರಂದು, ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶಕರು ನೀಡಿದ ವರದಿಯು, ರಾಜ್ಯದ ಕಾಂಚೀಪುರಂ ಜಿಲ್ಲೆಯ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನ ಮಾದರಿಗಳು ಪ್ರಮಾಣಿತ ಗುಣಮಟ್ಟ (Not of Standard Quality-NSQ)ಹೊಂದಿಲ್ಲ ಎಂದಿದೆ.

ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಶೇಕಡ 48.6ರಷ್ಟು ಡೈಥಿಲೀನ್ ಗ್ಲೈಕೋಲ್ ಇದ್ದು, ಇದು ತೀವ್ರ ಮೂತ್ರಪಿಂಡ ಮತ್ತು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

2023ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಪರಿಶೀಲನೆಯಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ಗಳಲ್ಲಿ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾಗಿತ್ತು. ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೆ ಇದುವೇ ಕಾರಣವೆಂದು ಹೇಳಲಾಗಿತ್ತು.

ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ವರದಿಗಳ ಹಿನ್ನೆಲೆ, ತಮಿಳುನಾಡು ಸರ್ಕಾರ ಅಕ್ಟೋಬರ್ 1ರಿಂದ ಅದರ ಮಾರಾಟವನ್ನು ನಿಷೇಧಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶನಿವಾರ (ಅ.4) ಮಧ್ಯಪ್ರದೇಶ ಸರ್ಕಾರ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿದೆ. ರಾಜ್ಯದಿಂದ ಸಿರಪ್‌ನ ಹೆಚ್ಚುವರಿ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಸರ್ಕಾರಿ ಪ್ರಯೋಗಾಲಯಗಳಿಗೆ ಕಳುಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದೆ. ಮಾರುಕಟ್ಟೆಯಲ್ಲಿರುವ ಕೆಮ್ಮಿನ ಸಿರಪ್‌ಗಳನ್ನು ವಶಪಡಿಸಿಕೊಂಡು ಫ್ರೀಝ್ ಮಾಡಬೇಕು ಎಂದು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ. ವಿಷಕಾರಿ ಅಂಶ ಕಂಡು ಬಂದಿರುವ ಸಿರಪ್ ಕೇರಳದಲ್ಲಿ ವಿತರಿಸಲಾಗುತ್ತಿಲ್ಲವಾದರೂ, ಸರ್ಕಾರ ಈ ವಿಷಯದಲ್ಲಿ ತುಂಬಾ ಎಚ್ಚರಿಕೆಯಿಂದ ಇರಲು ನಿರ್ಧರಿಸಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಸಿರಪ್ ಪಡೆದ ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯವು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಯನ್ನು ನೀಡಿದ್ದು, ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು ಕೊಡುವ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

ಸಣ್ಣ ಮಕ್ಕಳಲ್ಲಿ ಕೆಮ್ಮು, ಶೀತ ಸಾಮಾನ್ಯ. ಅದು ಔ‍ಷಧ ನೀಡದೆ ಕಡಿಮೆಯಾಗಬಹುದು. ಹಾಗಾಗಿ, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಔಷಧಿಗಳನ್ನು ಶಿಫಾರಸು ಮಾಡಬಾರದು ಎಂದು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ಹೇಳಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...