Homeಮುಖಪುಟಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

ಮಕ್ಕಳು ಸಾವು : ಕೆಮ್ಮಿನ ಸಿರಪ್ ಮಾರಾಟ ನಿಷೇಧಿಸಿದ ಮೂರು ರಾಜ್ಯಗಳು

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ‘ಕೋಲ್ಡ್ರಿಫ್ ಕೆಮ್ಮಿನ ಸಿರಪ್’ ಸೇವಿಸಿ ಕನಿಷ್ಠ ಹನ್ನೊಂದು ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಮೂರು ರಾಜ್ಯಗಳು ಅಂತಹ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿವೆ.

ಮೊದಲು ತಮಿಳುನಾಡಿನಲ್ಲಿ ಕೆಮ್ಮಿನ ಸಿರಪ್ ನಿಷೇಧಿಸಲಾಗಿತ್ತು. ನಂತರ ಮಧ್ಯಪ್ರದೇಶ ಮತ್ತು ಕೇರಳ ಕೂಡ ನಿಷೇಧ ಮಾಡಿವೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 1 ರಿಂದ 7 ವರ್ಷದೊಳಗಿನ ಕನಿಷ್ಠ 11 ಮಕ್ಕಳು ಸಾವನ್ನಪ್ಪಿದ್ದಾರೆ. ಕೆಮ್ಮಿನ ಸಿರಪ್‌ನಲ್ಲಿದ್ದ ವಿಷಕಾರಿ ಅಂಶವು ಇದಕ್ಕೆ ಕಾರಣವೆಂದು ಅಧಿಕಾರಿಗಳು ಹೇಳಿದ್ದಾರೆ.

ಸಿರಪ್ ಸೇವಿಸಿದ ಮಕ್ಕಳ ಸಾವು ವರದಿಯಾದ ನಂತರ, ಮಧ್ಯಪ್ರದೇಶ ಸರ್ಕಾರವು ಸಿರಪ್‌ನ ಸುರಕ್ಷತೆಯನ್ನು ಪರಿಶೀಲಿಸುವಂತೆ ತಮಿಳುನಾಡಿನ ಅಧಿಕಾರಿಗಳನ್ನು ಕೇಳಿತ್ತು.

ಅಕ್ಟೋಬರ್ 2ರಂದು, ತಮಿಳುನಾಡು ಔಷಧ ನಿಯಂತ್ರಣ ನಿರ್ದೇಶಕರು ನೀಡಿದ ವರದಿಯು, ರಾಜ್ಯದ ಕಾಂಚೀಪುರಂ ಜಿಲ್ಲೆಯ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನ ಮಾದರಿಗಳು ಪ್ರಮಾಣಿತ ಗುಣಮಟ್ಟ (Not of Standard Quality-NSQ)ಹೊಂದಿಲ್ಲ ಎಂದಿದೆ.

ಸ್ರೆಸನ್ ಫಾರ್ಮಾಸ್ಯುಟಿಕಲ್ಸ್‌ ಘಟಕದಲ್ಲಿ ತಯಾರಿಸಲಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಲ್ಲಿ ಶೇಕಡ 48.6ರಷ್ಟು ಡೈಥಿಲೀನ್ ಗ್ಲೈಕೋಲ್ ಇದ್ದು, ಇದು ತೀವ್ರ ಮೂತ್ರಪಿಂಡ ಮತ್ತು ಯಕೃತ್ತಿನ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ವರದಿ ಹೇಳಿದೆ.

2023ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಪರಿಶೀಲನೆಯಲ್ಲಿ ಭಾರತದಲ್ಲಿ ತಯಾರಿಸಲಾದ ಕೆಮ್ಮಿನ ಸಿರಪ್‌ಗಳಲ್ಲಿ ಡೈಥಿಲೀನ್ ಗ್ಲೈಕೋಲ್ ಇರುವುದು ಪತ್ತೆಯಾಗಿತ್ತು. ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿಗೆ ಇದುವೇ ಕಾರಣವೆಂದು ಹೇಳಲಾಗಿತ್ತು.

ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ವರದಿಗಳ ಹಿನ್ನೆಲೆ, ತಮಿಳುನಾಡು ಸರ್ಕಾರ ಅಕ್ಟೋಬರ್ 1ರಿಂದ ಅದರ ಮಾರಾಟವನ್ನು ನಿಷೇಧಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಶನಿವಾರ (ಅ.4) ಮಧ್ಯಪ್ರದೇಶ ಸರ್ಕಾರ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸಿದೆ. ರಾಜ್ಯದಿಂದ ಸಿರಪ್‌ನ ಹೆಚ್ಚುವರಿ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಸರ್ಕಾರಿ ಪ್ರಯೋಗಾಲಯಗಳಿಗೆ ಕಳುಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದೆ. ಮಾರುಕಟ್ಟೆಯಲ್ಲಿರುವ ಕೆಮ್ಮಿನ ಸಿರಪ್‌ಗಳನ್ನು ವಶಪಡಿಸಿಕೊಂಡು ಫ್ರೀಝ್ ಮಾಡಬೇಕು ಎಂದು ಸರ್ಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಕೆಮ್ಮಿನ ಸಿರಪ್ ಮಾರಾಟ ಮತ್ತು ವಿತರಣೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಶನಿವಾರ ತಿಳಿಸಿದ್ದಾರೆ. ವಿಷಕಾರಿ ಅಂಶ ಕಂಡು ಬಂದಿರುವ ಸಿರಪ್ ಕೇರಳದಲ್ಲಿ ವಿತರಿಸಲಾಗುತ್ತಿಲ್ಲವಾದರೂ, ಸರ್ಕಾರ ಈ ವಿಷಯದಲ್ಲಿ ತುಂಬಾ ಎಚ್ಚರಿಕೆಯಿಂದ ಇರಲು ನಿರ್ಧರಿಸಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ಸಿರಪ್ ಪಡೆದ ಮಕ್ಕಳು ಸಾವನ್ನಪ್ಪಿರುವ ಹಿನ್ನೆಲೆ, ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯವು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆಯನ್ನು ನೀಡಿದ್ದು, ಮಕ್ಕಳಿಗೆ ಕೆಮ್ಮಿನ ಸಿರಪ್‌ಗಳನ್ನು ಕೊಡುವ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

ಸಣ್ಣ ಮಕ್ಕಳಲ್ಲಿ ಕೆಮ್ಮು, ಶೀತ ಸಾಮಾನ್ಯ. ಅದು ಔ‍ಷಧ ನೀಡದೆ ಕಡಿಮೆಯಾಗಬಹುದು. ಹಾಗಾಗಿ, ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಔಷಧಿಗಳನ್ನು ಶಿಫಾರಸು ಮಾಡಬಾರದು ಎಂದು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ಹೇಳಿದೆ.

‘ಲವ್ ಜಿಹಾದ್, ಮೆಹಂದಿ ಜಿಹಾದ್’ ಕಾರ್ಯಕ್ರಮಗಳ ಪ್ರಸಾರ : ಝೀ ನ್ಯೂಸ್, ಟೈಮ್ಸ್ ನೌ ನವಭಾರತ್‌ಗೆ ಎನ್‌ಬಿಡಿಎಸ್‌ಎ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...