Homeಕರ್ನಾಟಕರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

ರಾಷ್ಟ್ರೀಯ ಸರಾಸರಿಗಿಂತ ಜಾಸ್ತಿಯಾಗಿ ರಾಜ್ಯದ ಮಕ್ಕಳು ಶಾಲೆ ತೊರೆಯುತ್ತಿದ್ದಾರೆ: ವರದಿ

- Advertisement -
- Advertisement -

ರಾಜ್ಯದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಪ್ರಮಾಣವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯು ಹೇಳಿದೆ. ಕರ್ನಾಟಕದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಪ್ರಮಾಣ 22.2% ದಷ್ಟಿದ್ದರೆ, ರಾಷ್ಟ್ರೀಯ ಸರಾಸರಿಯು 14.1% ಇದೆ ಎಂದು ಅದು ಉಲ್ಲೇಖಿಸಿದೆ.

2023–24 ರ ಅಂಕಿಅಂಶಗಳ ಪ್ರಕಾರ, ಮಧ್ಯಪ್ರದೇಶ, ಜಾರ್ಖಂಡ್, ತ್ರಿಪುರ, ಪಂಜಾಬ್, ಮಹಾರಾಷ್ಟ್ರ, ಆಂಧ್ರಪ್ರದೇಶ, ರಾಜಸ್ಥಾನ ಮತ್ತು ತಮಿಳುನಾಡು ಜೊತೆಗೆ ಕರ್ನಾಟಕವು 9 ಮತ್ತು 10 ನೇ ತರಗತಿಗಳಲ್ಲಿ ಅತಿ ಹೆಚ್ಚು ಶಾಲೆ ತೊರೆಯುತ್ತಿರುವ ಮಕ್ಕಳ ಪ್ರಮಾಣವನ್ನು ಹೊಂದಿರುವ ರಾಜ್ಯಗಳಲ್ಲಿ ಒಂದಾಗಿದೆ.

ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸ್ಥಾನವು ತೀರಾ ಕಳಪೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಕೇರಳದಲ್ಲಿ ಶಾಲೆ ತೊರೆಯುತ್ತಿರುವ ಮಕ್ಕಳ ಪ್ರಮಾಣ ಕೇವಲ 3.41% ಇದ್ದರೆ, ತಮಿಳುನಾಡಿನಲ್ಲಿ 7.68% ಇದೆ. ತೆಲಂಗಾಣದಲ್ಲಿ 11.43% ಇದ್ದರೆ, ಆಂಧ್ರಪ್ರದೇಶದಲ್ಲಿ 12.48%, ಬಿಹಾರದಲ್ಲಿ 25.63% ಮತ್ತು ಅಸ್ಸಾಂನಲ್ಲಿ 25.07% ಇದೆ ಎಂದು ವರದಿ ಹೇಳಿದೆ.

ಮಕ್ಕಳು ಶಾಲೆ ತೊರೆಯುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು ಮತ್ತು ಅವರ ಮರು ದಾಖಲಾತಿಯನ್ನು ಖಚಿತಪಡಿಸಿಕೊಳ್ಳಲು ಶಾಲೆಗಳ ಪಕ್ಕದ ಪ್ರದೇಶಗಳಲ್ಲಿ ಮನೆ-ಮನೆಗೆ ಸಮೀಕ್ಷೆಗಳನ್ನು ನಡೆಸುವಂತೆ ಹೆಚ್ಚಿನ ಹೊರೆ ಹೊಂದಿರುವ ರಾಜ್ಯಗಳನ್ನು ಸಚಿವಾಲಯ ಒತ್ತಾಯಿಸಿದೆ.

2025–26ರ ಸಮಗ್ರ ಶಿಕ್ಷಾ ಕಾರ್ಯಕ್ರಮದ ಭಾಗವಾಗಿ ಸಚಿವಾಲಯದ ಅಡಿಯಲ್ಲಿ ನಡೆದ ಯೋಜನಾ ಅನುಮೋದನೆ ಮಂಡಳಿ (PAB) ಸಭೆಗಳಿಂದ ಈ ಸಂಶೋಧನೆಗಳು ಹೊರಬಿದ್ದಿವೆ. ಈ ವರ್ಷ ಏಪ್ರಿಲ್ ಮತ್ತು ಮೇ ನಡುವೆ ವಿವಿಧ ರಾಜ್ಯಗಳೊಂದಿಗೆ ಈ ಸಭೆಗಳು ನಡೆದವು.

2030 ರ ವೇಳೆಗೆ 100 ಪ್ರತಿಶತ ಒಟ್ಟು ದಾಖಲಾತಿ ಅನುಪಾತ (GER) ಸಾಧಿಸುವ ಗುರಿಯನ್ನು ರಾಷ್ಟ್ರೀಯ ಶಿಕ್ಷಣ ನೀತಿ (NEP)- 2020 ಹೊಂದಿದೆ. ಆದರೆ, ಇದಕ್ಕೆ ಶಾಲೆ ತೊರೆಯುವ ದರಗಳು ದೊಡ್ಡ ಅಡಚಣೆಯಾಗಿದೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಪುನರುಚ್ಚರಿಸಿದರು ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಹೇಳಿದೆ. ರಾಷ್ಟ್ರೀಯ ಸರಾಸರಿಗಿಂತ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಭೂ ಒತ್ತುವರಿ ಪ್ರಕರಣ | ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಎಸ್‌ಐಟಿ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

ಭೂ ಒತ್ತುವರಿ ಪ್ರಕರಣ | ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಎಸ್‌ಐಟಿ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...