Homeಕರ್ನಾಟಕಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ - ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ ಎಂದಾರೆ, ಅವತ್ತೆ ಅವರು ತೊಲಗಿಬಿಡಬಹುದಿತ್ತು. ಆದರೆ ಅವರು ಇಲ್ಲೆ ಉಳಿದುಕೊಂಡುಬಿಟ್ಟಿದ್ದಾರೆ. ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಇನ್ನೇನೂ ವೃತ್ತಿಯಿಲ್ಲ. ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಉದಯಗಿರಿ ಗಲಭೆಗೆ ಕಾರಣಕರ್ತನಾದ ಆರೋಪಿಗೆ ಬೆಂಬಲ ನೀಡಿದ ಅವರು, “ಅವಹೇಳನಕಾರಿ ಪೋಸ್ಟ್‌ ಮಾಡಿದ ಒಬ್ಬ ಬಹುಸಂಖ್ಯಾತ ಸಮಾಜಕ್ಕೆ ಸೇರಿದ ವ್ಯಕ್ತಿಗೆ ನೀವು ಇಲ್ಲಿ ಇರಬೇಡಿ, ಕಷ್ಟವಾಗುತ್ತದೆ, ಜೀವ ಬೆದರಿಕೆ ಇದೆ ಎಂದು ಮಾಹಿತಿ ನೀಡುತ್ತಿದ್ದಾರೆ ಎಂದಾದರೆ, ಇಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಇಲ್ಲವೆ? ಕಾನೂನಿಗೆ ಬೆಲೆ ಇಲ್ಲವೆ?” ಎಂದು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹೀಗೆ ಒಬ್ಬೊಬ್ಬರಾಗಿ ಹೋಗುತ್ತಾ ಇದ್ದರೆ, ಉಳಿದಿರುವ ಈ ದೇಶವನ್ನು ಕೂಡಾ ನಾವು ಸಾಬ್ರಿಗೆ ಬರೆದುಕೊಟ್ಟುಬಿಡುವುದಾ? ಸಾಬ್ರಿಗೆ ಹೆದರಿ ಉದಯಗಿರಿ, ಕಲ್ಯಾಣಗಿರಿ ಭಾಗದವರು ಖಾಲಿ ಮಾಡಿ ಎನ್ನುತ್ತೀರಿ. ಮುಂದೆ ನರಸಿಂಹರಾಜ ಕ್ಷೇತ್ರವನ್ನೂ ಖಾಲಿ ಮಾಡಿ ಎನ್ನುತ್ತಾ ಬರುತ್ತಾ ಇರುತ್ತಾರೆ. ಹೀಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಅವರಿಗೆ ರಕ್ಷಣೆ ನೀಡಲು ಸಾಧ್ಯ ಇಲ್ಲವೆ?” ಎಂದು ಹೇಳಿದ್ದಾರೆ.

“ರಕ್ಷಣೆ ನೀಡುವುದು ಬಿಡಿ, ಈ ರೀತಿಯ ಕೃತ್ಯವನ್ನು ಮಾಡಿದವರನ್ನು ಬಂಧಿಸಿ, ದಂಡಿಸಿದ್ದರೆ ಈ ರೀತಿಯ ಕೃತ್ಯಗಳು ನಿಂತು ಹೋಗುತ್ತವೆ. ಉತ್ತರ ಪ್ರದೇಶದಲ್ಲಿ 20%ಕ್ಕಿಂತ ಹೆಚ್ಚು ಮುಸ್ಲಿಮರಿದ್ದಾರೆ. ಒಬ್ಬ ಯೋಗಿ ಆದಿತ್ಯನಾಥ್ ಮುಸ್ಲಿಮರನ್ನು, ಪುಂಡ ಮುಸಲ್ಮಾನರನ್ನು ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅವರು 2002ರ ಗುಜರಾತ್ ಗಲಭೆಯಲ್ಲಿ ಮುಸ್ಲಿಮರ ಮಾರಣಹೋಮವನ್ನು ಸಮರ್ಥಿಸಿಕೊಂಡಿದ್ದಾರೆ. “ಗುಜರಾತ್‌ನಲ್ಲಿ 2002ರ ಹಿಂಸಾಚಾರದ ನಂತರ ಗುಜರಾತಿಗಳು ಅವರಿಗೆ ವಾಪಾಸು ಪಾಠ ಕಲಿಸಿದ ನಂತರ, ಅಲ್ಲಿ ಇವತ್ತಿನ ವರೆಗೂ ಅಲ್ಲಿ ಒಂದೇ ಒಂದು ಘಟನೆ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಬಂದ ನಂತರ ಬಾಲ ಒಳಗಡೆ ಇಟ್ಟುಕೊಂಡಿದ್ದಾರೆ. ಈ ರೀತಿಯಾಗಿ ಕರ್ನಾಟಕದಲ್ಲಿ ಯಾವಾಗ ಮಾಡುವುದು?” ಎಂದು ಅವರು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹಿಂದೂಗಳು ಅವರ ಮನೆಯನ್ನು ಖಾಲಿ ಮಾಡಿಕೊಂಡು ಹೋಗ್ತಾ ಇರಬೇಕಾದರೆ, ಹಿಂದೂಗಳು ಎಲ್ಲಿಗೆ ಹೋಗಬೇಕು ಕೊನೆಗೆ? ಅವರಿಗೆ ಯಾವ ರಾಷ್ಟ್ರವಿದೆ? ಮುಸ್ಲಿಮರಿಗೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ. ನಮಗೆ ಯಾವ ರಾಷ್ಟ್ರವಿದೆ? ಮುಸ್ಲಿಮರ ಭಯಕ್ಕೆ ಒಬ್ಬ ಹಿಂದೂ ಯಾಕೆ ಮನೆ ಖಾಲಿ ಮಾಡಬೇಕು? ಯಾಕೆ ಊರನ್ನು ಬಿಡಬೇಕು? ಮುಸ್ಲಿಮರಿಗೆ ಫ್ರೀ ಪರ್ಮಿಟ್ ಕೊಟ್ಟಿರುವ ವ್ಯಕ್ತಿ, ತಾಲೀಬಾನಿ ಸರ್ಕಾರ ನಡೆಸುತ್ತಿರುವ ವ್ಯಕ್ತಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...