Homeಕರ್ನಾಟಕಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ - ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

ಮುಸ್ಲಿಮರಿಗೆ ಮಕ್ಕಳು ಹುಟ್ಟಿಸುವುದೆ ಕೆಲಸ – ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಮುಸ್ಲಿಮರಿಗೆ ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಬೇರೇನೂ ಕೆಲಸವಿಲ್ಲ, ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸೋಮವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, “ಮುಸ್ಲಿಮರಿಗೆ 1947ರಲ್ಲಿ ಅವರ ಧರ್ಮದ ಆಧಾರದಲ್ಲಿ ಅವರಿಗೆ ಪ್ರತ್ಯೇಕ ರಾಷ್ಟ್ರವನ್ನು ನಾವು ಕೊಟ್ಟಾಗೋಯ್ತು. ಇಲ್ಲಿನ ಕಾನೂನು ವ್ಯವಸ್ಥೆಗೆ, ಸಂವಿಧಾನಕ್ಕೆ ಗೌರವ ಕೊಡುವುದಿಲ್ಲ ಎಂದಾರೆ, ಅವತ್ತೆ ಅವರು ತೊಲಗಿಬಿಡಬಹುದಿತ್ತು. ಆದರೆ ಅವರು ಇಲ್ಲೆ ಉಳಿದುಕೊಂಡುಬಿಟ್ಟಿದ್ದಾರೆ. ಪುರುಸೊತ್ತಿಲ್ಲದೆ ಮಕ್ಕಳನ್ನು ಹುಟ್ಟಿಸುವುದು ಬಿಟ್ಟರೆ ಇನ್ನೇನೂ ವೃತ್ತಿಯಿಲ್ಲ. ಹೀಗೆ ಮಾಡುತ್ತಾ ಸಂಖ್ಯೆಯನ್ನು ಜಾಸ್ತಿ ಮಾಡಿ, ಬೇರೆಯವರ ಮೇಲೆ ಭಯದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೈಸೂರಿನ ಉದಯಗಿರಿ ಗಲಭೆಗೆ ಕಾರಣಕರ್ತನಾದ ಆರೋಪಿಗೆ ಬೆಂಬಲ ನೀಡಿದ ಅವರು, “ಅವಹೇಳನಕಾರಿ ಪೋಸ್ಟ್‌ ಮಾಡಿದ ಒಬ್ಬ ಬಹುಸಂಖ್ಯಾತ ಸಮಾಜಕ್ಕೆ ಸೇರಿದ ವ್ಯಕ್ತಿಗೆ ನೀವು ಇಲ್ಲಿ ಇರಬೇಡಿ, ಕಷ್ಟವಾಗುತ್ತದೆ, ಜೀವ ಬೆದರಿಕೆ ಇದೆ ಎಂದು ಮಾಹಿತಿ ನೀಡುತ್ತಿದ್ದಾರೆ ಎಂದಾದರೆ, ಇಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಇಲ್ಲವೆ? ಕಾನೂನಿಗೆ ಬೆಲೆ ಇಲ್ಲವೆ?” ಎಂದು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹೀಗೆ ಒಬ್ಬೊಬ್ಬರಾಗಿ ಹೋಗುತ್ತಾ ಇದ್ದರೆ, ಉಳಿದಿರುವ ಈ ದೇಶವನ್ನು ಕೂಡಾ ನಾವು ಸಾಬ್ರಿಗೆ ಬರೆದುಕೊಟ್ಟುಬಿಡುವುದಾ? ಸಾಬ್ರಿಗೆ ಹೆದರಿ ಉದಯಗಿರಿ, ಕಲ್ಯಾಣಗಿರಿ ಭಾಗದವರು ಖಾಲಿ ಮಾಡಿ ಎನ್ನುತ್ತೀರಿ. ಮುಂದೆ ನರಸಿಂಹರಾಜ ಕ್ಷೇತ್ರವನ್ನೂ ಖಾಲಿ ಮಾಡಿ ಎನ್ನುತ್ತಾ ಬರುತ್ತಾ ಇರುತ್ತಾರೆ. ಹೀಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಅವರಿಗೆ ರಕ್ಷಣೆ ನೀಡಲು ಸಾಧ್ಯ ಇಲ್ಲವೆ?” ಎಂದು ಹೇಳಿದ್ದಾರೆ.

“ರಕ್ಷಣೆ ನೀಡುವುದು ಬಿಡಿ, ಈ ರೀತಿಯ ಕೃತ್ಯವನ್ನು ಮಾಡಿದವರನ್ನು ಬಂಧಿಸಿ, ದಂಡಿಸಿದ್ದರೆ ಈ ರೀತಿಯ ಕೃತ್ಯಗಳು ನಿಂತು ಹೋಗುತ್ತವೆ. ಉತ್ತರ ಪ್ರದೇಶದಲ್ಲಿ 20%ಕ್ಕಿಂತ ಹೆಚ್ಚು ಮುಸ್ಲಿಮರಿದ್ದಾರೆ. ಒಬ್ಬ ಯೋಗಿ ಆದಿತ್ಯನಾಥ್ ಮುಸ್ಲಿಮರನ್ನು, ಪುಂಡ ಮುಸಲ್ಮಾನರನ್ನು ಬಾಯಿ ಮುಚ್ಚಿಸಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ಅವರು 2002ರ ಗುಜರಾತ್ ಗಲಭೆಯಲ್ಲಿ ಮುಸ್ಲಿಮರ ಮಾರಣಹೋಮವನ್ನು ಸಮರ್ಥಿಸಿಕೊಂಡಿದ್ದಾರೆ. “ಗುಜರಾತ್‌ನಲ್ಲಿ 2002ರ ಹಿಂಸಾಚಾರದ ನಂತರ ಗುಜರಾತಿಗಳು ಅವರಿಗೆ ವಾಪಾಸು ಪಾಠ ಕಲಿಸಿದ ನಂತರ, ಅಲ್ಲಿ ಇವತ್ತಿನ ವರೆಗೂ ಅಲ್ಲಿ ಒಂದೇ ಒಂದು ಘಟನೆ ಸಂಭವಿಸಿಲ್ಲ. ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಬಂದ ನಂತರ ಬಾಲ ಒಳಗಡೆ ಇಟ್ಟುಕೊಂಡಿದ್ದಾರೆ. ಈ ರೀತಿಯಾಗಿ ಕರ್ನಾಟಕದಲ್ಲಿ ಯಾವಾಗ ಮಾಡುವುದು?” ಎಂದು ಅವರು ಕೇಳಿದ್ದಾರೆ.

“ಮುಸ್ಲಿಮರಿಗೆ ಹೆದರಿ ಹಿಂದೂಗಳು ಅವರ ಮನೆಯನ್ನು ಖಾಲಿ ಮಾಡಿಕೊಂಡು ಹೋಗ್ತಾ ಇರಬೇಕಾದರೆ, ಹಿಂದೂಗಳು ಎಲ್ಲಿಗೆ ಹೋಗಬೇಕು ಕೊನೆಗೆ? ಅವರಿಗೆ ಯಾವ ರಾಷ್ಟ್ರವಿದೆ? ಮುಸ್ಲಿಮರಿಗೆ 57 ಇಸ್ಲಾಮಿಕ್ ರಾಷ್ಟ್ರಗಳಿವೆ. ನಮಗೆ ಯಾವ ರಾಷ್ಟ್ರವಿದೆ? ಮುಸ್ಲಿಮರ ಭಯಕ್ಕೆ ಒಬ್ಬ ಹಿಂದೂ ಯಾಕೆ ಮನೆ ಖಾಲಿ ಮಾಡಬೇಕು? ಯಾಕೆ ಊರನ್ನು ಬಿಡಬೇಕು? ಮುಸ್ಲಿಮರಿಗೆ ಫ್ರೀ ಪರ್ಮಿಟ್ ಕೊಟ್ಟಿರುವ ವ್ಯಕ್ತಿ, ತಾಲೀಬಾನಿ ಸರ್ಕಾರ ನಡೆಸುತ್ತಿರುವ ವ್ಯಕ್ತಿ ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...