Homeಮುಖಪುಟಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

- Advertisement -
- Advertisement -

“ಕರ್ನಾಟಕದ ಪ್ರತೀ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ‘ಗಂಧದಗುಡಿ’ ಡಾಕ್ಯೂಡ್ರಾಮಾ ತೋರಿಸಬೇಕು. ಕರ್ನಾಟಕದ ಭೌಗೋಳಿಕ ವೈಭವವನ್ನು ಮುಂದಿನ ಪೀಳಿಗೆ ಅರಿಯುವಂತಾಗಲಿ. ಹತ್ತಾರು ಪುಸ್ತಕ ಓದುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಸಿನೆಮಾ ಅರ್ಥವಾಗುತ್ತದೆ” ಎಂದು ನಿರ್ದೇಶಕರಾದ ಮಂಸೋರೆ ತಿಳಿಸಿದ್ದಾರೆ.

ಕರ್ನಾಟಕರತ್ನ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’ ಸಾಕ್ಷ್ಯಾಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. “ಪುನೀತ್ ಅವರ ಕೊನೆಯ ಚಿತ್ರವೂ ಇದಾಗಿದ್ದು, ಅತ್ಯುತ್ತಮ ಸಂದೇಶವನ್ನೂ ಸಾರುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ತೋರಿಸಬೇಕು” ಎಂದು ‘ಹರಿವು’, ‘ನಾತಿಚರಾಮಿ’, ‘ಆಕ್ಟ್‌-1978′ ಸಿನಿಮಾಗಳ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, ‘ಗಂಧದಗುಡಿ’ ಚಿತ್ರದ ವೈಶಿಷ್ಟ್ಯಗಳನ್ನು ಹಂಚಿಕೊಂಡರು. “ಒಳ್ಳೆಯ ಸಿನಿಮಾಗಳು ಸಾಕಷ್ಟು ಬರುತ್ತವೆ, ಹೋಗುತ್ತವೆ. ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿಯವರೆಗೆ ಕನ್ನಡದಲ್ಲಿ ಬಂದಿರುವ ಸಾಕ್ಷ್ಯಾಚಿತ್ರಗಳಿಗಿಂತ ಗಂಧದಗುಡಿ ವಿಭಿನ್ನವಾಗಿದೆ. ಕರ್ನಾಟಕದ ವೈವಿಧ್ಯತೆಯನ್ನು ಕಟ್ಟಿಕೊಟ್ಟಿದೆ. ಪುನೀತ್ ರಾಜ್‌ಕುಮಾರ್‌ ಅವರು ಇಲ್ಲಿ ಪ್ರಯಾಣಿಸಿ, ಚಿಂತನೆಗಳನ್ನು ಬಿತ್ತಿದ್ದಾರೆ” ಎಂದರು.

“ಮಕ್ಕಳಿಗೆ ಹೊಸ ಮಾದರಿಯ ಶಿಕ್ಷಣ ನೀಡಬೇಕು ಎಂಬ ಪ್ರಯತ್ನಗಳು ಈಗ ನಡೆಯುತ್ತಿವೆ. ಇಂತಹ ಸಮಯದಲ್ಲಿ ಗಂಧದಗುಡಿ ಪ್ರದರ್ಶನವಾಗುತ್ತಿರುವುದು ಬಹಳ ಮುಖ್ಯವಾಗಿದೆ. ಇದರಲ್ಲಿ ಅತ್ಯುತ್ತಮ ದೃಶ್ಯಗಳಿವೆ. ಅವುಗಳನ್ನು ಟಿವಿಯಲ್ಲಿ ತೋರಿಸುವುದಕ್ಕಿಂತ ಚಿತ್ರಮಂದಿರದಲ್ಲಿ ಮಕ್ಕಳಿಗೆ ಪ್ರದರ್ಶಿಸಿದರೆ ಉತ್ತಮ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

“ಧರ್ಮ, ಹಿಜಾಬ್‌, ಕೇಸರಿಶಾಲು ಇತ್ಯಾದಿ ಗಲಾಟೆಯಾಚೆಗೆ ಕರ್ನಾಟಕವಿದೆ. ನಮ್ಮ ಅಸ್ಮಿತೆ ವಿನೂತನವಾದದ್ದು ಎಂಬುದನ್ನು ಗಂಧದಗುಡಿ ಸಾರುತ್ತದೆ. ಭೌಗೋಳಿಕವಾಗಿ ವಿಶಿಷ್ಟವಾದ ರಾಜ್ಯ ಕರ್ನಾಟಕ ಎಂಬುದನ್ನು ಒಂದೂವರೆ ಗಂಟೆಯಲ್ಲಿ ಪರಿಚಯಿಸಿಕೊಡಲಾಗಿದೆ. ಇದನ್ನು ಮಕ್ಕಳಿಗೆ ತೋರಿಸಿದರೆ ಹಿಜಾಬ್‌, ಕೇಸರಿಶಾಲಿನಂತಹ ಬೇಡವಾದ ವಿಷಯಗಳನ್ನು ಬಿಟ್ಟು ಕರ್ನಾಟಕದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ” ಎಂದು ಆಶಿಸಿದರು.

“ಮಕ್ಕಳಿಗಾಗಿ ಪ್ರದರ್ಶನಗಳನ್ನು ಆಯೋಜಿಸುವುದು ಸರ್ಕಾರಕ್ಕೆ ಸವಾಲಿನ ವಿಷಯವೇನೂ ಅಲ್ಲ. ನಾವು ಚಿಕ್ಕವಯಸ್ಸಿನಲ್ಲಿದ್ದಾಗ ಸಾಕಷ್ಟು ಸಿನಿಮಾಗಳನ್ನು ತೋರಿಸುತ್ತಿದ್ದರು. ಸರ್ಕಾರ ಯಾವುದ್ಯಾವುದೋ ವಿಷಯಕ್ಕೆ ಹಣವನ್ನು ಖರ್ಚು ಮಾಡುತ್ತದೆ. ಇಂತಹ ಒಳ್ಳೆಯ ಸಂಗತಿಗೆ ಹಣ ವಿನಿಯೋಗಿಸುವುದು ಸೂಕ್ತ” ಎಂದು ಹೇಳಿದರು.

“ಬಡಮಕ್ಕಳಿಗೆ ಹಣ ನೀಡುವುದು ಕಷ್ಟವಾಗುತ್ತದೆ. ಟಿಕೆಟ್ ವಸೂಲಿ ಮಾಡದೆ, ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು. ಟಿಕೆಟ್ ಎಂದಾಕ್ಷಣ ಸ್ಥಳೀಯವಾಗಿ ಹಣ ವಸೂಲಿ ಮಾಡುವವರು ಇರುತ್ತಾರೆ. ಯಾವುದೇ ಗೊಂದಲವಿಲ್ಲದೆ ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು” ಎಂದು ಕೋರಿದರು.

ಇದನ್ನೂ ಓದಿರಿ: ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

“ಕರ್ನಾಟಕ ವೈವಿಧ್ಯತೆಯನ್ನು ಈ ಸಾಕ್ಷ್ಯಾಚಿತ್ರದಲ್ಲಿ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದು ಎಲ್ಲ ಮಕ್ಕಳಿಗೂ ತಲುಪಬೇಕಿದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ ಅವರ ವ್ಯಕ್ತಿತ್ವ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತದೆ. ಗಂಧದಗುಡಿ ನೋಡಿದವರಲ್ಲಿ ಶೇ.10ರಷ್ಟು ಮಕ್ಕಳಾದರೂ ವಿಭಿನ್ನವಾಗಿ ಆಲೋಚನೆ ಬೆಳೆಸಿಕೊಳ್ಳಬಲ್ಲರು” ಎಂದು ತಿಳಿಸಿದರು.

“ದಸರಾಕ್ಕಾಗಿ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವನ್ನಾದರೂ ಈ ಕಾರ್ಯಕ್ಕೆ ಖರ್ಚು ಮಾಡಿದರೆ ಸಾಕು, ಎಲ್ಲ ಮಕ್ಕಳಿಗೆ ಸಿನಿಮಾ ತೋರಿಸಬಹುದು. ತಾಲ್ಲೂಕು, ಹೋಬಳಿ ಮಟ್ಟದಲ್ಲಿರುವ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ ಮಾರ್ನಿಂಗ್ ಷೋ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ. ಮಕ್ಕಳಿಗೆ ಗಂಧದಗುಡಿ ಉಚಿತವಾಗಿ ತೋರಿಸಿದರೆ ಕರ್ನಾಟಕ ರತ್ನವನ್ನು ನೀಡಿದಷ್ಟೇ ಗೌರವವನ್ನು ಅಪ್ಪು ಅವರಿಗೆ ನೀಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...